Homeಮುಖಪುಟಸರ್ವಾಧಿಕಾರಿ ಆಡಳಿತ ಸಂವಿಧಾನದ ತತ್ವ, ಸಿದ್ದಾಂತಗಳನ್ನು ಹಾಳುಗೆಡವಿದೆ : ಮಲ್ಲಿಕಾರ್ಜುನ ಖರ್ಗೆ

ಸರ್ವಾಧಿಕಾರಿ ಆಡಳಿತ ಸಂವಿಧಾನದ ತತ್ವ, ಸಿದ್ದಾಂತಗಳನ್ನು ಹಾಳುಗೆಡವಿದೆ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ (ಜನವರಿ 26, 2025) ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ದ್ವೇಷಪೂರಿತ ಕಾರ್ಯಸೂಚಿಯು, ಕಳೆದ 10 ವರ್ಷಗಳಿಂದ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಸಂವಿಧಾನದ ಪ್ರತಿಯೊಂದು ಪವಿತ್ರ ತತ್ವಗಳನ್ನು ‘ಸರ್ವಾಧಿಕಾರಿ ಆಡಳಿತ’ ಚೂರು, ಚೂರು ಮಾಡಿದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಹಿಂದುಳಿದ ಯುವಕರನ್ನು ‘ರಾಷ್ಟ್ರೀಯತೆ’ ಮತ್ತು ‘ಧಾರ್ಮಿಕ ಪಾರಮ್ಯ’ದ ಧ್ವಜವನ್ನು ಹಿಡಿಯುವಂತೆ ಮಾಡುವ ಮೂಲಕ ಹುಸಿ-ರಾಷ್ಟ್ರೀಯತೆಯನ್ನು ಅಭ್ಯಾಸವನ್ನು ಮಾಡಿಸುತ್ತಿದೆ. ಅವರಿಗೆ ಉದ್ಯೋಗ ದೊರಕಿಸಿಕೊಡಲು ಏನನ್ನೂ ಮಾಡುತ್ತಿಲ್ಲ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಖರ್ಗೆ ಕಿಡಿಕಾರಿದ್ದಾರೆ.

76ನೇ ಗಣರಾಜ್ಯೋತ್ಸವದ ಪ್ರಯುಕ್ತ ದೇಶದ ಜನರಿಗೆ ಶುಭಾಷಯ ತಿಳಿಸಿರುವ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನದ ವಿಚಾರಗಳು ಮತ್ತು ಆದರ್ಶಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಜನರು ಸಂರಕ್ಷಿಸುವ ಮತ್ತು ರಕ್ಷಿಸುವ ಸಮಯ ಬಂದಿದೆ ಎಂದಿದ್ದಾರೆ.

“ನಮ್ಮ ಸಂಸ್ಥಾಪಕರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಎತ್ತಿಹಿಡಿಯುತ್ತೇವೆ. ಸಂವಿಧಾನವನ್ನು ರಕ್ಷಿಸಲು ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಿ. ಇದು ನಮ್ಮ ಪೂರ್ವಜರಿಗೆ ಸಲ್ಲಿಸುವ ನಿಜವಾದ ಗೌರವವಾಗಿರುತ್ತದೆ. ದೇಶವು ಸಂವಿಧಾನದ ಮೇಲೆ ನಿರಂತರ ದಾಳಿಗಳನ್ನು ಹೇಗೆ ನೋಡುತ್ತಿದೆ ಎಂಬುವುದರ ಕುರಿತು ಚಿಂತಿಸುವ ಸಮಯ ಬಂದಿದೆ ಎಂದು ಎಂದು ಖರ್ಗೆ ಹೇಳಿದ್ದಾರೆ.

ದಶಕಗಳಿಂದ ಎಚ್ಚರಿಕೆಯಿಂದ ಕಟ್ಟಿ ಬೆಳೆಸಿರುವ ಭಾರತದ ಸಂಸ್ಥೆಗಳು ನಿರಂತರ ಅವನತಿ ಕಾಣುತ್ತಿದೆ. ಸ್ವಾಯತ್ತ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಒಂದು ರೂಢಿಯಾಗಿದೆ. ಅವುಗಳ ಸ್ವಾತಂತ್ರ್ಯದ ಮೇಲೆ ನಿಯಂತ್ರಣ ಸಾಧಿಸುವುದನ್ನು ಅಧಿಕಾರದ ಸದ್ಗುಣವೆಂದು ನೋಡಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದಿನನಿತ್ಯ ತುಳಿದು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ” ಎಂದು ಖರ್ಗೆ ಬರೆದುಕೊಂಡಿದ್ದಾರೆ.

ಆಡಳಿತ ಸರ್ಕಾರದ ದಬ್ಬಾಳಿಕೆಯ ಪ್ರವೃತ್ತಿಯಿಂದಾಗಿ ಸಂಸತ್ತಿನ ಕಾರ್ಯಚಟುವಟಿಕೆಯು ಭಾರೀ ಹಿನ್ನಡೆಯನ್ನು ಕಂಡಿದೆ. ವಿಶ್ವವಿದ್ಯಾನಿಲಯಗಳು ಮತ್ತು ಸ್ವ-ಆಡಳಿತ ಸಂಸ್ಥೆಗಳು ನಿರಂತರ ಕುಗ್ಗುತ್ತಿವೆ ಎಂದು ಖರ್ಗೆ ಹೇಳಿದ್ದಾರೆ.

ಮಾಧ್ಯಮದ ಬಹುಪಾಲು ಭಾಗವು ಆಡಳಿತ ಪಕ್ಷದ ಪ್ರಚಾರ ಸಾಧನವಾಗಿ ಪರಿವರ್ತನೆಗೊಂಡಿದೆ. ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡುವ ಮೂಲಕ ಭಿನ್ನಾಭಿಪ್ರಾಯವನ್ನು ಕತ್ತು ಹಿಸುಕುವುದು ಅಧಿಕಾರದಲ್ಲಿರುವವರ ಏಕೈಕ ನೀತಿಯಾಗಿದೆ. ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ಕೆಟ್ಟ, ದ್ವೇಷಪೂರಿತ ಕಾರ್ಯಸೂಚಿಯು ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...