Homeಮುಖಪುಟನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

- Advertisement -
- Advertisement -

ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ (ಜ.25) ತಿಳಿಸಿದ್ದಾರೆ.

ಸೋಮವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳು ಸಚಿವಾಲಯದಲ್ಲಿ ಏಕರೂಪ ನಾಗರಿಕ ಸಂಹಿತೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಕಾನೂನಿನಡಿಯಲ್ಲಿ ನಿಯಮಗಳನ್ನು ಅದೇ ದಿನ ಗೆಜೆಟ್‌ನಲ್ಲಿ ತಿಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ.
ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ಅವರವರ ವೈಯಕ್ತಿಕ, ಸಮುದಾಯದ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಲಾಗಿದೆ.

ಏಕರೂಪ ನಾಗರಿಕ ಸಂಹಿತೆ ಒಮ್ಮೆ ಜಾರಿಗೆ ಬಂದರೆ, ಉತ್ತರಾಖಂಡ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ರಾಜ್ಯವಾಗಲಿದೆ. 1867ರಲ್ಲಿ ಪೋರ್ಚುಗೀಸ್ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಾಗಿನಿಂದ ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ.

“ಏಕರೂಪ ನಾಗರಿಕ ಸಂಹಿತೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ. ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಚಿತಪಡಿಸುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ಏಕರೂಪ ನಾಗರಿಕ ಸಂಹಿತೆಯಡಿಯಲ್ಲಿ, ಜಾತಿ, ಧರ್ಮ, ಪ್ರದೇಶ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನುಗಳಲ್ಲಿ ಏಕರೂಪತೆಯನ್ನು ತರಲು ಪ್ರಯತ್ನಿಸಲಾಗಿದೆ” ಎಂದಿದೆ.

ಫೆಬ್ರವರಿ 5, 2024 ರಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ಕರಡು ವರದಿಯನ್ನು ಅನುಮೋದಿಸಿತು.

ನಂತರ ಎರಡು ದಿನಗಳ ಕಾಲ ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಗಿತ್ತು. ರಾಜ್ಯದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಕಳೆದ ವರ್ಷ ಫೆಬ್ರವರಿ 28ರಂದು ಮಸೂದೆಗೆ ಅಂಕಿತ ಹಾಕಿದ್ದರು.

ನಂತರ, ರಾಜ್ಯ ಸರ್ಕಾರವು ನಿಯಮಗಳ ರಚನೆ ಮತ್ತು ಅನುಷ್ಠಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 14ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅನುಮೋದಿಸಿದ್ದಾರೆ ಎಂದು ಸಿಎಂ ಧಾಮಿ ಘೋಷಿಸಿದ್ದರು.

2025ರ ಜನವರಿ 20ರಂದು ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕೈಪಿಡಿಯನ್ನು ಅನುಮೋದಿಸಿತ್ತು.

ಪಿತೃಪ್ರಧಾನ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ತಮ್ಮ ಹಕ್ಕುಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸುವುದು ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಹಳ ಹಿಂದಿನಿಂದಲೂ ಬಿಜೆಪಿಯ ಕಾರ್ಯಸೂಚಿಯಲ್ಲಿದೆ ಮತ್ತು ಪಕ್ಷದ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿವೆ. ಉತ್ತರಾಖಂಡದಲ್ಲಿ ನಿಯಮಗಳ ಅನುಷ್ಠಾನವು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಗಬಹುದು.

ಏಕರೂಪ ನಾಗರಿಕ ಸಂಹಿತೆಯ ವಿಷಯದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿದೆ. ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಅನುಸರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ನೀಡಲು ಮತ್ತು ಜೀವನಾಂಶ ನಿರಾಕರಿಸಲು ಅವಕಾಶ ನೀಡುವ ಮೂಲಕ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಆದಾಗ್ಯೂ, ಕಾನೂನು ತಜ್ಞರು ಈ ಮಸೂದೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಹಿಳಾ ಗುಂಪುಗಳ ಸಮೂಹವಾದ ಉತ್ತರಾಖಂಡ ಮಹಿಳಾ ಮೋರ್ಚಾ, ಈ ಮಸೂದೆಯು “ಹಿಂದೂ ಕಾನೂನು ಮಾದರಿಯನ್ನು ಅನುಸರಿಸುತ್ತಿದೆ” ಎಂದು ಟೀಕಿಸಿತ್ತು. ಸಾರ್ವಜನಿಕ ಹೇಳಿಕೆಯಲ್ಲಿ, ಮಸೂದೆಯು “ಕ್ರಿಶ್ಚಿಯನ್ ಕುಟುಂಬ ಕಾನೂನು ಮತ್ತು ಪಾರ್ಸಿ ಕುಟುಂಬ ಕಾನೂನಿನ ಅನ್ವಯದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ”. ಇದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದಿದೆ.

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...