Homeಅಂತರಾಷ್ಟ್ರೀಯಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

- Advertisement -
- Advertisement -

ಉತ್ತರ ಗಾಜಾಗೆ ಪ್ಯಾಲೆಸ್ಟೀನಿಯನ್ನರನ್ನು ಹಿಂತಿರುಗಿಸಲು ಅವಕಾಶ ನೀಡುವ ಯೋಜನೆಗಳನ್ನು ನಿಲ್ಲಿಸುತ್ತಿರುವುದಾಗಿ ಇಸ್ರೇಲ್ ಭಾನುವಾರ ಘೋಷಿಸಿದ್ದು, ಕದನ ವಿರಾಮ ಒಪ್ಪಂದವನ್ನು ಫ್ಯಾಲೆಸ್ತೀನ್ ಪ್ರತಿರೋಧ ಗುಂಪು ಹಮಾಸ್ ಉಲ್ಲಂಘಿಸಿದೆ ಎಂದು ಅದು ಆರೋಪಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಶನಿವಾರ, ಹಮಾಸ್ ಗಾಜಾದಲ್ಲಿ ಒತ್ತೆಯಾಳುಗಳಾಗಿ ಇರಿಸಲಾಗಿದ್ದ ನಾಲ್ಕು ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿತು. ಜನವರಿ 19 ರಂದು ಜಾರಿಗೆ ಬಂದ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಇದು ಎರಡನೇ ಒತ್ತೆಯಾಳು ವಿನಿಮಯವಾಗಿದ್ದು, ಪರಿಣಾಮ 15 ತಿಂಗಳ ಹಿಂದೆ ಪ್ರಾರಂಭವಾದ ಸಂಘರ್ಷವನ್ನು ವಿರಾಮಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ಒಪ್ಪಂದಕ್ಕೆ ಬಂದ ಕೂಡಲೇ, ಗಾಜಾದಲ್ಲಿ ಇರಿಸಲಾಗಿದ್ದ ಮೂವರು ಒತ್ತೆಯಾಳುಗಳಿಗೆ ಬದಲಾಗಿ ಇಸ್ರೇಲ್ 90 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿತ್ತು. “ಹಿಂದಿರುಗಿ ಬಂದ ನಾಲ್ವರು ಒತ್ತೆಯಾಳುಗಳು ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಮತ್ತು ಐಎಸ್ಎ [ಇಸ್ರೇಲಿ ಭದ್ರತಾ ಸಂಸ್ಥೆ] ಪಡೆಗಳೊಂದಿಗೆ ಇಸ್ರೇಲಿ ಪ್ರದೇಶವನ್ನು ದಾಟಿದ್ದಾರೆ” ಎಂದು ಇಸ್ರೇಲ್ ಸರ್ಕಾರ ಶನಿವಾರ ತಿಳಿಸಿತ್ತು.

ಆದಾಗ್ಯೂ, ಭಾನುವಾರ ಅರ್ಬೆಲ್ ಯೆಹುದ್ ಎಂಬ ಮಹಿಳಾ ನಾಗರಿಕ ಎಂಬ ಮತ್ತೊಬ್ಬ ಒತ್ತೆಯಾಳು ಬಿಡುಗಡೆಯಾಗಬೇಕಿತ್ತು. ಆದರೆ, ಹಮಾಸ್ ಯೆಹೂದ್ ಅವರನ್ನು ಬಿಡುಗಡೆ ಮಾಡದಿರುವುದು ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರರು ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಅದಾಗ್ಯೂ, ಹಮಾಸ್ ಇದನ್ನು ತಾಂತ್ರಿಕ ಸಮಸ್ಯೆ ಎಂದು ಕರೆದಿದ್ದು, ಒತ್ತೆಯಾಳು ಯೆಹೂದ್ ಸುರಕ್ಷಿತವಾಗಿದ್ದಾರೆ ಎಂದು ಮಧ್ಯವರ್ತಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದೆ. ಮುಂದಿನ ಶನಿವಾರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಹೇಳಿದೆ. ಆದರೆ, ಸಮಸ್ಯೆ ಬಗೆಹರಿಯುವವರೆಗೆ ಪ್ಯಾಲೆಸ್ತೀನಿಯನ್ನರನ್ನು ಉತ್ತರ ಗಾಜಾಗೆ ಹಿಂತಿರುಗಲು ಅವಕಾಶ ನೀಡಲಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಹಾಗಾಗಿ, ಉತ್ತರ ಗಾಝಾಕ್ಕೆ ಮರಳುವ ಆಶಯದೊಂದಿಗೆ ರಸ್ತೆಗಳಲ್ಲಿ ಜಮಾಯಿಸಿದ್ದ ಜನಸಮೂಹದ ಮೇಲೆ ಇಸ್ರೇಲಿ ಮಿಲಿಟರಿ ಗುಂಡು ಹಾರಿಸಿದೆ ಎಂದು ವರದಿಯಾಗಿದೆ. ಗುಂಡಿನ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡರು ಎಂದು ಎಪಿ ವರದಿ ಮಾಡಿದೆ.

ಅದಾಗ್ಯೂ, ಕದನ ವಿರಾಮ ಒಪ್ಪಂದದ ಭಾಗವಾಗಿ ಇಸ್ರೇಲ್ ಸರ್ಕಾರ ಶನಿವಾರ ಇನ್ನೂರು ಕೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಹಮಾಸ್ ಬಿಡುಗಡೆ ಮಾಡಿದ ಪಟ್ಟಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಆದರೆ, ಇಸ್ರೇಲಿಗಳನ್ನು ಕೊಂದ ಆರೋಪದಲ್ಲಿ ಶಿಕ್ಷೆಗೊಳಗಾದವರನ್ನು ಮನೆಗೆ ಮರಳಲು ಅನುಮತಿಸಲಾಗುವುದಿಲ್ಲ ಎಂದು ಅದು ತಿಳಿಸಿದೆ. ಬಿಡುಗಡೆಯಾದವರಲ್ಲಿ ಸುಮಾರು 70 ಜನರನ್ನು ಅಲ್ಲಿಂದ ಈಜಿಪ್ಟ್ ಮತ್ತು ಇನ್ನೊಂದು ದೇಶಕ್ಕೆ ಗಡೀಪಾರು ಮಾಡಲಾಗುವುದು ಎಂದು ಪ್ಯಾಲೆಸ್ತೀನಿ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 15 ರಂದು, ಕತಾರ್ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಮತ್ತು ಒತ್ತೆಯಾಳು ವಿನಿಮಯ ಒಪ್ಪಂದಕ್ಕೆ ಬರಲಾಗಿದೆ ಎಂದು ಘೋಷಿಸಿತು. ಈ ಮಾತುಕತೆಗಳಲ್ಲಿ ಕತಾರ್‌ ಪ್ರಮುಖ ಮಧ್ಯವರ್ತಿಯಾಗಿತ್ತು. ಜನವರಿ 18 ರಂದು ಇಸ್ರೇಲಿ ಸಚಿವ ಸಂಪುಟ ಈ ಒಪ್ಪಂದಕ್ಕೆ ಅನುಮೋದನೆ ನೀಡಿತು.

ಭಾನುವಾರ ಪ್ರಾರಂಭವಾದ ಕದನ ವಿರಾಮದ ಮೊದಲ ಆರು ವಾರಗಳ ಹಂತದಲ್ಲಿ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ 33 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಈ ಹಂತದಲ್ಲಿ ಇಸ್ರೇಲ್ ಸೇನೆಯು ಗಾಜಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಹಿಂದೆ ಸರಿಯಬೇಕಾಗುತ್ತದೆ ಮತ್ತು ಮುತ್ತಿಗೆ ಹಾಕಿದ ಪ್ರದೇಶಕ್ಕೆ ಮಾನವೀಯ ನೆರವು ನೀಡಲಾಗುತ್ತದೆ.

ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದ ತಮ್ಮ ಪ್ರದೇಶಗಳಿಗೆ ಮರಳಲು ಸಹ ಅನುಮತಿಸುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.

ಎರಡನೇ ಹಂತದ ಕದನ ವಿರಾಮದ ಹದಿನಾರನೇ ದಿನದಂದು ಮಾತುಕತೆಗಳು ಪ್ರಾರಂಭವಾಗಲಿವೆ ಮತ್ತು “ಯುದ್ಧಕ್ಕೆ ಶಾಶ್ವತ ಅಂತ್ಯ” ವನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಇಸ್ರೇಲ್ ಹಿಡಿದಿರುವ ಹೆಚ್ಚಿನ ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಪುರುಷರು ಸೇರಿದಂತೆ ಉಳಿದ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದನ್ನು ಇದು ಒಳಗೊಂಡಿರುತ್ತದೆ.

ಇದನ್ನೂಓದಿ:  5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...