Homeಅಂತರಾಷ್ಟ್ರೀಯಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

- Advertisement -
- Advertisement -

ಉತ್ತರ ಗಾಜಾಗೆ ಪ್ಯಾಲೆಸ್ಟೀನಿಯನ್ನರನ್ನು ಹಿಂತಿರುಗಿಸಲು ಅವಕಾಶ ನೀಡುವ ಯೋಜನೆಗಳನ್ನು ನಿಲ್ಲಿಸುತ್ತಿರುವುದಾಗಿ ಇಸ್ರೇಲ್ ಭಾನುವಾರ ಘೋಷಿಸಿದ್ದು, ಕದನ ವಿರಾಮ ಒಪ್ಪಂದವನ್ನು ಫ್ಯಾಲೆಸ್ತೀನ್ ಪ್ರತಿರೋಧ ಗುಂಪು ಹಮಾಸ್ ಉಲ್ಲಂಘಿಸಿದೆ ಎಂದು ಅದು ಆರೋಪಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಶನಿವಾರ, ಹಮಾಸ್ ಗಾಜಾದಲ್ಲಿ ಒತ್ತೆಯಾಳುಗಳಾಗಿ ಇರಿಸಲಾಗಿದ್ದ ನಾಲ್ಕು ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿತು. ಜನವರಿ 19 ರಂದು ಜಾರಿಗೆ ಬಂದ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಇದು ಎರಡನೇ ಒತ್ತೆಯಾಳು ವಿನಿಮಯವಾಗಿದ್ದು, ಪರಿಣಾಮ 15 ತಿಂಗಳ ಹಿಂದೆ ಪ್ರಾರಂಭವಾದ ಸಂಘರ್ಷವನ್ನು ವಿರಾಮಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ಒಪ್ಪಂದಕ್ಕೆ ಬಂದ ಕೂಡಲೇ, ಗಾಜಾದಲ್ಲಿ ಇರಿಸಲಾಗಿದ್ದ ಮೂವರು ಒತ್ತೆಯಾಳುಗಳಿಗೆ ಬದಲಾಗಿ ಇಸ್ರೇಲ್ 90 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿತ್ತು. “ಹಿಂದಿರುಗಿ ಬಂದ ನಾಲ್ವರು ಒತ್ತೆಯಾಳುಗಳು ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಮತ್ತು ಐಎಸ್ಎ [ಇಸ್ರೇಲಿ ಭದ್ರತಾ ಸಂಸ್ಥೆ] ಪಡೆಗಳೊಂದಿಗೆ ಇಸ್ರೇಲಿ ಪ್ರದೇಶವನ್ನು ದಾಟಿದ್ದಾರೆ” ಎಂದು ಇಸ್ರೇಲ್ ಸರ್ಕಾರ ಶನಿವಾರ ತಿಳಿಸಿತ್ತು.

ಆದಾಗ್ಯೂ, ಭಾನುವಾರ ಅರ್ಬೆಲ್ ಯೆಹುದ್ ಎಂಬ ಮಹಿಳಾ ನಾಗರಿಕ ಎಂಬ ಮತ್ತೊಬ್ಬ ಒತ್ತೆಯಾಳು ಬಿಡುಗಡೆಯಾಗಬೇಕಿತ್ತು. ಆದರೆ, ಹಮಾಸ್ ಯೆಹೂದ್ ಅವರನ್ನು ಬಿಡುಗಡೆ ಮಾಡದಿರುವುದು ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರರು ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಅದಾಗ್ಯೂ, ಹಮಾಸ್ ಇದನ್ನು ತಾಂತ್ರಿಕ ಸಮಸ್ಯೆ ಎಂದು ಕರೆದಿದ್ದು, ಒತ್ತೆಯಾಳು ಯೆಹೂದ್ ಸುರಕ್ಷಿತವಾಗಿದ್ದಾರೆ ಎಂದು ಮಧ್ಯವರ್ತಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದೆ. ಮುಂದಿನ ಶನಿವಾರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಹೇಳಿದೆ. ಆದರೆ, ಸಮಸ್ಯೆ ಬಗೆಹರಿಯುವವರೆಗೆ ಪ್ಯಾಲೆಸ್ತೀನಿಯನ್ನರನ್ನು ಉತ್ತರ ಗಾಜಾಗೆ ಹಿಂತಿರುಗಲು ಅವಕಾಶ ನೀಡಲಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಹಾಗಾಗಿ, ಉತ್ತರ ಗಾಝಾಕ್ಕೆ ಮರಳುವ ಆಶಯದೊಂದಿಗೆ ರಸ್ತೆಗಳಲ್ಲಿ ಜಮಾಯಿಸಿದ್ದ ಜನಸಮೂಹದ ಮೇಲೆ ಇಸ್ರೇಲಿ ಮಿಲಿಟರಿ ಗುಂಡು ಹಾರಿಸಿದೆ ಎಂದು ವರದಿಯಾಗಿದೆ. ಗುಂಡಿನ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡರು ಎಂದು ಎಪಿ ವರದಿ ಮಾಡಿದೆ.

ಅದಾಗ್ಯೂ, ಕದನ ವಿರಾಮ ಒಪ್ಪಂದದ ಭಾಗವಾಗಿ ಇಸ್ರೇಲ್ ಸರ್ಕಾರ ಶನಿವಾರ ಇನ್ನೂರು ಕೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಹಮಾಸ್ ಬಿಡುಗಡೆ ಮಾಡಿದ ಪಟ್ಟಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಆದರೆ, ಇಸ್ರೇಲಿಗಳನ್ನು ಕೊಂದ ಆರೋಪದಲ್ಲಿ ಶಿಕ್ಷೆಗೊಳಗಾದವರನ್ನು ಮನೆಗೆ ಮರಳಲು ಅನುಮತಿಸಲಾಗುವುದಿಲ್ಲ ಎಂದು ಅದು ತಿಳಿಸಿದೆ. ಬಿಡುಗಡೆಯಾದವರಲ್ಲಿ ಸುಮಾರು 70 ಜನರನ್ನು ಅಲ್ಲಿಂದ ಈಜಿಪ್ಟ್ ಮತ್ತು ಇನ್ನೊಂದು ದೇಶಕ್ಕೆ ಗಡೀಪಾರು ಮಾಡಲಾಗುವುದು ಎಂದು ಪ್ಯಾಲೆಸ್ತೀನಿ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 15 ರಂದು, ಕತಾರ್ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಮತ್ತು ಒತ್ತೆಯಾಳು ವಿನಿಮಯ ಒಪ್ಪಂದಕ್ಕೆ ಬರಲಾಗಿದೆ ಎಂದು ಘೋಷಿಸಿತು. ಈ ಮಾತುಕತೆಗಳಲ್ಲಿ ಕತಾರ್‌ ಪ್ರಮುಖ ಮಧ್ಯವರ್ತಿಯಾಗಿತ್ತು. ಜನವರಿ 18 ರಂದು ಇಸ್ರೇಲಿ ಸಚಿವ ಸಂಪುಟ ಈ ಒಪ್ಪಂದಕ್ಕೆ ಅನುಮೋದನೆ ನೀಡಿತು.

ಭಾನುವಾರ ಪ್ರಾರಂಭವಾದ ಕದನ ವಿರಾಮದ ಮೊದಲ ಆರು ವಾರಗಳ ಹಂತದಲ್ಲಿ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ 33 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಈ ಹಂತದಲ್ಲಿ ಇಸ್ರೇಲ್ ಸೇನೆಯು ಗಾಜಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಹಿಂದೆ ಸರಿಯಬೇಕಾಗುತ್ತದೆ ಮತ್ತು ಮುತ್ತಿಗೆ ಹಾಕಿದ ಪ್ರದೇಶಕ್ಕೆ ಮಾನವೀಯ ನೆರವು ನೀಡಲಾಗುತ್ತದೆ.

ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದ ತಮ್ಮ ಪ್ರದೇಶಗಳಿಗೆ ಮರಳಲು ಸಹ ಅನುಮತಿಸುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.

ಎರಡನೇ ಹಂತದ ಕದನ ವಿರಾಮದ ಹದಿನಾರನೇ ದಿನದಂದು ಮಾತುಕತೆಗಳು ಪ್ರಾರಂಭವಾಗಲಿವೆ ಮತ್ತು “ಯುದ್ಧಕ್ಕೆ ಶಾಶ್ವತ ಅಂತ್ಯ” ವನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಇಸ್ರೇಲ್ ಹಿಡಿದಿರುವ ಹೆಚ್ಚಿನ ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಪುರುಷರು ಸೇರಿದಂತೆ ಉಳಿದ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದನ್ನು ಇದು ಒಳಗೊಂಡಿರುತ್ತದೆ.

ಇದನ್ನೂಓದಿ:  5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...