Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...