Homeಮುಖಪುಟಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಕರಡು ನಿಯಮಗಳನ್ನು ಹಿಂಪಡೆಯಬೇಕೆಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ಒತ್ತಾಯಿಸಿದ್ದು, ಅವುಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವವಿದ್ಯಾಲಯಗಳನ್ನು ನಡೆಸುವ ಅಧಿಕಾರವನ್ನು ಈ ನಿಯಮಗಳ ಮೂಲಕ ರಾಜ್ಯ ಸರ್ಕಾರಗಳಿಂದ ಕೇಂದ್ರ ಸರ್ಕಾರವು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಜನವರಿ 6 ರಂದು ಬಿಡುಗಡೆಯಾದ ಯುಜಿಸಿ ಕರಡು ನಿಯಮಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿವೆ. ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಕುಲಪತಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಬಗ್ಗೆ ಕೇಂದ್ರ ಸರ್ಕಾರವು ಯೋಚಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಕೇಂದ್ರ ಸರ್ಕಾರದಿಂದ ನೇಮಕಗೊಂಡ ರಾಜ್ಯಪಾಲರಾಗಿದ್ದಾರೆ. ಇದು ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಂದ ಕೇಂದ್ರ ಸರ್ಕಾರವು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಆಯ್ಕೆ ಮಾಡಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತಿದೆ ಎಂಬ ಆತಂಕಕ್ಕೆ ಕಾರಣವಾಗಿದೆ.

ಶೈಕ್ಷಣಿಕ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳನ್ನು ಉಪಕುಲಪತಿಗಳನ್ನಾಗಿ ಮಾಡಲು ಅನುಮತಿಸುವ ಕರಡು ನಿಯಮಗಳಲ್ಲಿನ ನಿಬಂಧನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಆಕ್ಷೇಪಿಸಿದ್ದಾರೆ. ಇದು ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವಿಲ್ಲದ ವ್ಯಕ್ತಿಗಳನ್ನು ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನಾಗಿ ನೇಮಿಸಲು ಕಾರಣವಾಗಲಿದೆ ಎಂದು ಅವರು ಕಳೆದ ವಾರ ವಾದಿಸಿದ್ದರು.

ಭಾನುವಾರ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ, ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಹೊಸ ನಿಯಮಗಳನ್ನು ಪರಿಚಯಿಸುವ ಪ್ರಸ್ತಾಪದ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. “ಕೇಂದ್ರವು ವಿಶ್ವವಿದ್ಯಾಲಯಗಳ ಆಡಳಿತವನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯು ಕೆಲವು ವ್ಯಕ್ತಿಗಳಿಂದ ಸುಳ್ಳು ಪ್ರಚಾರಕ್ಕೆ ವೇದಿಕೆಗಳಾಗಲು ಕಾರಣವಾಗಲಿದೆ” ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಈ ವಿಷಯದ ಬಗ್ಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ “ಸಮನ್ವಯ” ಮಾಡಿಕೊಳ್ಳುವುದಾಗಿ ರೇವಂತ್ ರೆಡ್ಡಿ ಹೇಳಿದ್ದು, ಶೀಘ್ರದಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಈ ವಿಷಯವನ್ನು ಚರ್ಚಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯು ಜನವರಿ 9 ರಂದು ಕರಡು ನಿಯಮಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತ್ತು. ಜನವರಿ 21 ರಂದು ಕೇರಳ ವಿಧಾನಸಭೆ ಕೂಡಾ ನಿರ್ಣಯ ಅಂಗೀಕರಿಸಿದ್ದು, ಜನವರಿ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರಡನ್ನು ವಿರೋಧಿಸಿದ್ದಾರೆ. ಅವರು ಇದನ್ನು, ಕನ್ನಡಿಗರಿಗೆ ಬಗೆಯುವ “ದ್ರೋಹ” ಎಂದು ಕರೆದಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024 ಅನ್ನು ಅಂಗೀಕರಿಸಿತ್ತು. ಈ ಮಸೂದೆಯು, ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಿದ್ದು, ಈ ಸ್ಥಾನಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿತ್ತು.

ಆದಾಗ್ಯೂ, ವಿಶ್ವವಿದ್ಯಾಲಯ ಅನುದಾನ ಆಯೋಗವು ಪ್ರಸ್ತಾವಿತ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಪರಿಷ್ಕೃತ ಪ್ರಕ್ರಿಯೆಯು “ಅಸ್ಪಷ್ಟತೆಯನ್ನು ನಿವಾರಿಸುತ್ತದೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದೆ. ಜನವರಿ 10 ರಂದು ಮಾತನಾಡಿರುವ ಆಯೋಗದ ಅಧ್ಯಕ್ಷ ಎಂ. ಜಗದೀಶ್, ಹೊಸ ನಿಯಮಗಳು ಕುಲಪತಿ-ಶೋಧನಾ-ಕಮ್-ಆಯ್ಕೆ ಸಮಿತಿಯ ಸಂಯೋಜನೆಯನ್ನು ನಿರ್ದಿಷ್ಟಪಡಿಸುವ ಮೂಲಕ “ತುಂಬಾ ಅಗತ್ಯವಿರುವ ಸ್ಪಷ್ಟತೆ”ಯನ್ನು ತರುತ್ತವೆ ಎಂದು ಹೇಳಿದ್ದಾರೆ.

ಈ ಸಮಿತಿಯು ಮೂವರು ಸದಸ್ಯರನ್ನು ಹೊಂದಿರುತ್ತದೆ – ಒಬ್ಬರು ಕುಲಪತಿಗಳಿಂದ ಆಯ್ಕೆ ಮಾಡಲ್ಪಟ್ಟವರು, ಇನ್ನೊಬ್ಬರು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಿಂದ ಮತ್ತು ಮೂರನೇ ಒಬ್ಬರು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಅಥವಾ ಸೆನೆಟ್‌ನಿಂದ ಆಯ್ಕೆಯಾಗುತ್ತಾರೆ ಎಂದು ಜಗದೀಶ್ ಹೇಳಿದ್ದರು.

ಇದನ್ನೂಓದಿ:  ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...