Homeಅಂತರಾಷ್ಟ್ರೀಯಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

- Advertisement -
- Advertisement -

ಅಮೆರಿಕದಿಂದ ಗಡೀಪಾರು ಮಾಡಲಾದ ಹಲವಾರು ವಲಸಿಗರನ್ನು ಹೊತ್ತ ವಿಮಾನವು ಶನಿವಾರ ಬ್ರೆಸಿಲ್‌ನ ಉತ್ತರ ನಗರವಾದ ಮನೌಸ್‌ನಲ್ಲಿ ಇಳಿದಿದೆ. ಈ ವೇಳೆ ಪ್ರಯಾಣಿಕರಿಗೆ ಕೈಕೋಳಗಳನ್ನು ಹಾಕಿ ಕಳುಹಿಸಲಾಗಿದ್ದು, ಈ ಬಗ್ಗೆ ಬ್ರೆಜಿಲ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ ಈ ನಡೆಯು ಮಾನವ ಹಕ್ಕುಗಳ “ಸ್ಪಷ್ಟ ನಿರ್ಲಕ್ಷ್ಯ” ಎಂದು ಕರೆದಿದೆ ಎಂದು ಎಎಫ್‌ಪಿ ವರದಿ ಮಾಡಿದೆ.  

ಬ್ರೆಜಿಲ್ ವಿದೇಶಾಂಗ ಸಚಿವಾಲಯವು ಘಟನೆಯನ್ನು ಖಂಡಿಸಿದ್ದು, ಪ್ರಯಾಣಿಕರನ್ನು “ಅವಮಾನಕರವಾಗಿ ನಡೆಸಿಕೊಂಡಿರುವ” ಬಗ್ಗೆ ಅಮೆರಿಕದಿಂದ ವಿವರಣೆಯನ್ನು ಕೋರುವುದಾಗಿ ಹೇಳಿದೆ. ವಿಮಾನ ಬಂದ ನಂತರ ಬ್ರೆಜಿಲ್‌ನ ನ್ಯಾಯ ಸಚಿವಾಲಯವು ಅಮೆರಿಕದ ಅಧಿಕಾರಿಗಳಿಗೆ “ತಕ್ಷಣವೆ ಕೈಕೋಳವನ್ನು ತೆಗೆದುಹಾಕುವಂತೆ” ಆದೇಶಿಸಿದೆ. ವಲಸಿಗರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲ್ಯಾಟಿನ್ ಅಮೇರಿಕನ್ ದೇಶಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ವಿರೋಧಿ ನಿಲುವನ್ನು ಎದುರಿಸುತ್ತಿವೆ. ಅದೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನೂತನ ಅಧ್ಯಕ್ಷ ಟ್ರಂಪ್‌ ಅನಿಯಮಿತ ವಲಸೆ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ದೊಡ್ಡ ಪ್ರಮಾಣದ ಗಡೀಪಾರುಗಳನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 88 ಬ್ರೆಜಿಲಿಯನ್ನರನ್ನು ಕರೆದೊಯ್ದ ವಿಮಾನದ ಬಗ್ಗೆ ದೇಶದ ನ್ಯಾಯ ಸಚಿವ ರಿಕಾರ್ಡೊ ಲೆವಾಂಡೋವ್ಸ್ಕಿ ಅವರು ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಮಾತನಾಡಿ, ಬ್ರೆಜಿಲಿಯನ್ ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟವಾದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದಾರೆ. ಬ್ರೆಜಿಲ್ ಅಧಿಕಾರಿಗಳು ಅಮೆರಿಕ ಸರ್ಕಾರದ ಈ ಅವಮಾನಕರ ನಡವಳಿಕೆಯನ್ನು ವಿವರಿಸಲು ತ್ವರಿತವಾಗಿ ಕರೆ ನೀಡಿದ್ದಾರೆ.

ಗಡಿಪಾರಾದ ಬ್ರೆಸಿಲ್ ಪ್ರಜೆ, ಕಳೆದ ಏಳು ತಿಂಗಳುಗಳನ್ನು ಬಂಧನದಲ್ಲಿ ಕಳೆದ 31 ವರ್ಷದ ಕಂಪ್ಯೂಟರ್ ತಂತ್ರಜ್ಞ ಎಡ್ಗರ್ ಡ ಸಿಲ್ವಾ ಮೌರಾ, “ವಿಮಾನದಲ್ಲಿ ಅವರು ನಮಗೆ ನೀರು ನೀಡಲಿಲ್ಲ. ನಮ್ಮ ಕೈಕಾಲುಗಳನ್ನು ಕಟ್ಟಲಾಗಿತ್ತು. ಅವರು ನಮ್ಮನ್ನು ಶೌಚಾಲಯಕ್ಕೂ ಹೋಗಲು ಬಿಡಲಿಲ್ಲ” ಎಂದು ಅನುಭವವನ್ನು ವಿವರಿಸಿದ್ದಾರೆ. ಜೊತೆಗೆ, ವಿಮಾನವು ತುಂಬಾ ಬಿಸಿಯಾಗಿತ್ತು, ಕೆಲವರು ಮೂರ್ಛೆ ಹೋದರು ಎಂದು ಅವರು ಹೇಳಿದ್ದಾರೆ.

21 ವರ್ಷದ ಫ್ರೀಲ್ಯಾನ್ಸರ್ ಲೂಯಿಸ್ ಆಂಟೋನಿಯೊ ರೊಡ್ರಿಗಸ್ ಸ್ಯಾಂಟೋಸ್, ತಾಂತ್ರಿಕ ಸಮಸ್ಯೆಯಿಂದಾಗಿ ಹವಾನಿಯಂತ್ರಣವಿಲ್ಲದೆ ನಾಲ್ಕು ಗಂಟೆಗಳ ಹಾರಾಟದ ಸಮಯದಲ್ಲಿ “ಉಸಿರಾಟದ ಸಮಸ್ಯೆಗಳಿಂದ” ಬಳಲುತ್ತಿರುವ ಸಹ ಪ್ರಯಾಣಿಕರ “ದುಃಸ್ವಪ್ನ”ವನ್ನು ವಿವರಿಸಿದ್ದಾರೆ. “ವಿಷಯಗಳು ಈಗಾಗಲೇ ಬದಲಾಗಿದ್ದು, ವಲಸಿಗರನ್ನು ಅಪರಾಧಿಗಳಂತೆ ಪರಿಗಣಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮೂಲತಃ ಬೆಲೊಗೆ ಹೋಗುವ ವಿಮಾನ ಹಾರಿಜಾಂಟೆ, ತಾಂತ್ರಿಕ ಸಮಸ್ಯೆಯಿಂದಾಗಿ ಮನೌಸ್‌ನಲ್ಲಿ ಇಳಿಯಬೇಕಾಯಿತು. ಆದಾಗ್ಯೂ, ಗಡೀಪಾರಿಗೆ ಒಳಗಾದ ಜನರಿರುವ ವಿಮಾನವು ಟ್ರಂಪ್‌ ಅವರ ಇತ್ತೀಚಿನ ಯಾವುದೇ ವಲಸೆ ಆದೇಶಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ವರದಿಯಾಗಿದ್ದು, 2017 ರ ದ್ವಿಪಕ್ಷೀಯ ಒಪ್ಪಂದದ ಭಾಗ ಈ ಗಡಿಪಾರು ನಡೆಸಲಾಗಿದೆ ಎಂದು ಸರ್ಕಾರಿ ಮೂಲವೊಂದು ಸ್ಪಷ್ಟಪಡಿಸಿದೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...