Homeಅಂತರಾಷ್ಟ್ರೀಯಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

- Advertisement -
- Advertisement -

ಅಮೆರಿಕದಿಂದ ಗಡೀಪಾರು ಮಾಡಲಾದ ಹಲವಾರು ವಲಸಿಗರನ್ನು ಹೊತ್ತ ವಿಮಾನವು ಶನಿವಾರ ಬ್ರೆಸಿಲ್‌ನ ಉತ್ತರ ನಗರವಾದ ಮನೌಸ್‌ನಲ್ಲಿ ಇಳಿದಿದೆ. ಈ ವೇಳೆ ಪ್ರಯಾಣಿಕರಿಗೆ ಕೈಕೋಳಗಳನ್ನು ಹಾಕಿ ಕಳುಹಿಸಲಾಗಿದ್ದು, ಈ ಬಗ್ಗೆ ಬ್ರೆಜಿಲ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ ಈ ನಡೆಯು ಮಾನವ ಹಕ್ಕುಗಳ “ಸ್ಪಷ್ಟ ನಿರ್ಲಕ್ಷ್ಯ” ಎಂದು ಕರೆದಿದೆ ಎಂದು ಎಎಫ್‌ಪಿ ವರದಿ ಮಾಡಿದೆ.  

ಬ್ರೆಜಿಲ್ ವಿದೇಶಾಂಗ ಸಚಿವಾಲಯವು ಘಟನೆಯನ್ನು ಖಂಡಿಸಿದ್ದು, ಪ್ರಯಾಣಿಕರನ್ನು “ಅವಮಾನಕರವಾಗಿ ನಡೆಸಿಕೊಂಡಿರುವ” ಬಗ್ಗೆ ಅಮೆರಿಕದಿಂದ ವಿವರಣೆಯನ್ನು ಕೋರುವುದಾಗಿ ಹೇಳಿದೆ. ವಿಮಾನ ಬಂದ ನಂತರ ಬ್ರೆಜಿಲ್‌ನ ನ್ಯಾಯ ಸಚಿವಾಲಯವು ಅಮೆರಿಕದ ಅಧಿಕಾರಿಗಳಿಗೆ “ತಕ್ಷಣವೆ ಕೈಕೋಳವನ್ನು ತೆಗೆದುಹಾಕುವಂತೆ” ಆದೇಶಿಸಿದೆ. ವಲಸಿಗರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲ್ಯಾಟಿನ್ ಅಮೇರಿಕನ್ ದೇಶಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ವಿರೋಧಿ ನಿಲುವನ್ನು ಎದುರಿಸುತ್ತಿವೆ. ಅದೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನೂತನ ಅಧ್ಯಕ್ಷ ಟ್ರಂಪ್‌ ಅನಿಯಮಿತ ವಲಸೆ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ದೊಡ್ಡ ಪ್ರಮಾಣದ ಗಡೀಪಾರುಗಳನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 88 ಬ್ರೆಜಿಲಿಯನ್ನರನ್ನು ಕರೆದೊಯ್ದ ವಿಮಾನದ ಬಗ್ಗೆ ದೇಶದ ನ್ಯಾಯ ಸಚಿವ ರಿಕಾರ್ಡೊ ಲೆವಾಂಡೋವ್ಸ್ಕಿ ಅವರು ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಮಾತನಾಡಿ, ಬ್ರೆಜಿಲಿಯನ್ ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟವಾದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದಾರೆ. ಬ್ರೆಜಿಲ್ ಅಧಿಕಾರಿಗಳು ಅಮೆರಿಕ ಸರ್ಕಾರದ ಈ ಅವಮಾನಕರ ನಡವಳಿಕೆಯನ್ನು ವಿವರಿಸಲು ತ್ವರಿತವಾಗಿ ಕರೆ ನೀಡಿದ್ದಾರೆ.

ಗಡಿಪಾರಾದ ಬ್ರೆಸಿಲ್ ಪ್ರಜೆ, ಕಳೆದ ಏಳು ತಿಂಗಳುಗಳನ್ನು ಬಂಧನದಲ್ಲಿ ಕಳೆದ 31 ವರ್ಷದ ಕಂಪ್ಯೂಟರ್ ತಂತ್ರಜ್ಞ ಎಡ್ಗರ್ ಡ ಸಿಲ್ವಾ ಮೌರಾ, “ವಿಮಾನದಲ್ಲಿ ಅವರು ನಮಗೆ ನೀರು ನೀಡಲಿಲ್ಲ. ನಮ್ಮ ಕೈಕಾಲುಗಳನ್ನು ಕಟ್ಟಲಾಗಿತ್ತು. ಅವರು ನಮ್ಮನ್ನು ಶೌಚಾಲಯಕ್ಕೂ ಹೋಗಲು ಬಿಡಲಿಲ್ಲ” ಎಂದು ಅನುಭವವನ್ನು ವಿವರಿಸಿದ್ದಾರೆ. ಜೊತೆಗೆ, ವಿಮಾನವು ತುಂಬಾ ಬಿಸಿಯಾಗಿತ್ತು, ಕೆಲವರು ಮೂರ್ಛೆ ಹೋದರು ಎಂದು ಅವರು ಹೇಳಿದ್ದಾರೆ.

21 ವರ್ಷದ ಫ್ರೀಲ್ಯಾನ್ಸರ್ ಲೂಯಿಸ್ ಆಂಟೋನಿಯೊ ರೊಡ್ರಿಗಸ್ ಸ್ಯಾಂಟೋಸ್, ತಾಂತ್ರಿಕ ಸಮಸ್ಯೆಯಿಂದಾಗಿ ಹವಾನಿಯಂತ್ರಣವಿಲ್ಲದೆ ನಾಲ್ಕು ಗಂಟೆಗಳ ಹಾರಾಟದ ಸಮಯದಲ್ಲಿ “ಉಸಿರಾಟದ ಸಮಸ್ಯೆಗಳಿಂದ” ಬಳಲುತ್ತಿರುವ ಸಹ ಪ್ರಯಾಣಿಕರ “ದುಃಸ್ವಪ್ನ”ವನ್ನು ವಿವರಿಸಿದ್ದಾರೆ. “ವಿಷಯಗಳು ಈಗಾಗಲೇ ಬದಲಾಗಿದ್ದು, ವಲಸಿಗರನ್ನು ಅಪರಾಧಿಗಳಂತೆ ಪರಿಗಣಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮೂಲತಃ ಬೆಲೊಗೆ ಹೋಗುವ ವಿಮಾನ ಹಾರಿಜಾಂಟೆ, ತಾಂತ್ರಿಕ ಸಮಸ್ಯೆಯಿಂದಾಗಿ ಮನೌಸ್‌ನಲ್ಲಿ ಇಳಿಯಬೇಕಾಯಿತು. ಆದಾಗ್ಯೂ, ಗಡೀಪಾರಿಗೆ ಒಳಗಾದ ಜನರಿರುವ ವಿಮಾನವು ಟ್ರಂಪ್‌ ಅವರ ಇತ್ತೀಚಿನ ಯಾವುದೇ ವಲಸೆ ಆದೇಶಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ವರದಿಯಾಗಿದ್ದು, 2017 ರ ದ್ವಿಪಕ್ಷೀಯ ಒಪ್ಪಂದದ ಭಾಗ ಈ ಗಡಿಪಾರು ನಡೆಸಲಾಗಿದೆ ಎಂದು ಸರ್ಕಾರಿ ಮೂಲವೊಂದು ಸ್ಪಷ್ಟಪಡಿಸಿದೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...