Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...