Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...