Homeಮುಖಪುಟಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ - ಮಹಾರಾಷ್ಟ್ರ ಸಚಿವ...

ಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ – ಮಹಾರಾಷ್ಟ್ರ ಸಚಿವ ಪಾಟೀಲ್

ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ

- Advertisement -
- Advertisement -

ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಲ್ಲಿ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರ ಕೈವಾಡ ಇರುವ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದರೆ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಳ್ಳಲಿದ್ದೇನೆ ಎಂದು ಅವರ ಸಂಪುಟ ಸಹೋದ್ಯೋಗಿ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ದೇಶಮುಖ್ ಹತ್ಯೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಬಿಜೆಪಿ ನಾಯಕ ಪಾಟೀಲ್ ಭಾನುವಾರ ಸಾಂಗ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸರಪಂಚ್ ಹತ್ಯೆಗೆ ಸಂಬಂಧಿಸಿದ ಸುಲಿಗೆ ಪ್ರಕರಣದಲ್ಲಿ ಸಚಿವ ಮುಂಡೆ ಅವರ ಸಹಚರ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿದೆ. ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ. ಎನ್‌ಸಿಪಿಯು ಮಹಾರಾಷ್ಟ್ರದ ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಲ್ಲಿ ವಿಂಡ್‌ಮಿಲ್ ಯೋಜನೆಯನ್ನು ನಿರ್ವಹಿಸುತ್ತಿರುವ ಇಂಧನ ಸಂಸ್ಥೆಯ ವಿರುದ್ಧ ಸುಲಿಗೆ ಪ್ರಯತ್ನವನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಯಿತ್ತು.

ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕ ಮುಂಡೆ ಅವರನ್ನು ಕರಾದ್ ಅವರೊಂದಿಗಿನ ಸಂಪರ್ಕದ ಬಗ್ಗೆ ಆಡಳಿತ ಮೈತ್ರಿಕೂಟದ ಕೆಲವು ಸಹೋದ್ಯೋಗಿಗಳು ಮತ್ತು ವಿರೋಧ ಪಕ್ಷಗಳು ಟೀಕಿಸುತ್ತಿವೆ.

“ಸಂತೋಷ್ ದೇಶಮುಖ್ ಹತ್ಯೆಯ ತನಿಖೆ ನಡೆಯುತ್ತಿದೆ. ಪ್ರತಿಯೊಂದು ವಿಷಯವೂ ವಿಭಿನ್ನವಾಗಿದೆ. ಸರ್ಕಾರದ ಮುಖ್ಯಸ್ಥರಾಗಿ ದೇವೇಂದ್ರ ಫಡ್ನವೀಸ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಪೂರ್ಣ ಸಾಮರ್ಥ್ಯ ಹೊಂದಿದ್ದಾರೆ. ಆರೋಪಗಳಲ್ಲಿ ಹುರುಳಿದೆ ಎಂದು ಅವರು ಭಾವಿಸಿದರೆ, ಅವರು ತಕ್ಷಣ ಕ್ರಮ ಕೈಗೊಂಡು ಮುಂಡೆ ಅವರನ್ನು ರಾಜೀನಾಮೆ ನೀಡುವಂತೆ ಕೇಳುತ್ತಾರೆ” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಈಗಾಗಲೇ ಸರಪಂಚ್ ದೇಶಮುಖ್ ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಠಿಣ ಆರೋಪಗಳನ್ನು ಹೊರಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಬಿಜೆಪಿ ನಾಯಕರೂ ಆಗಿರುವ ಪಾಟೀಲ್ ಹೇಳಿದ್ದಾರೆ. ಪೊಲೀಸ್ ಯಂತ್ರಾಂಗವೂ ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಅದರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿಯಾಗಿ, ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಾಲ್ಮಿಕ್ ಕರಾದ್ ಮತ್ತು ಇತರ ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ)ಯನ್ನು ಅನ್ವಯಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ. ಕರದ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...