Homeಮುಖಪುಟಆರ್ ಜಿ ಕರ್ ಪ್ರಕರಣ | ಬಂಗಾಳ ಸರ್ಕಾರ, ಸಿಬಿಐ ಸಲ್ಲಿಸಿದ್ದ ಅವಳಿ ಅರ್ಜಿಗಳ ವಿಚಾರಣೆ...

ಆರ್ ಜಿ ಕರ್ ಪ್ರಕರಣ | ಬಂಗಾಳ ಸರ್ಕಾರ, ಸಿಬಿಐ ಸಲ್ಲಿಸಿದ್ದ ಅವಳಿ ಅರ್ಜಿಗಳ ವಿಚಾರಣೆ ಪ್ರಾರಂಭಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಅಪರಾಧಿ ಸಂಜಯ್ ರಾಯ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸಿಬಿಐ ಸಲ್ಲಿಸಿದ್ದ ಎರಡು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಸೋಮವಾರ ಆರಂಭಿಸಿದೆ. ಆರ್ ಜಿ ಕರ್ ಪ್ರಕರಣ

ರಾಜ್ಯ ಸರ್ಕಾರಕ್ಕಿಂತ ಭಿನ್ನವಾಗಿ, ಪ್ರಕರಣದಲ್ಲಿ ತನಿಖೆ ಮತ್ತು ಪ್ರಾಸಿಕ್ಯೂಷನ್ ಸಂಸ್ಥೆಯಾಗಿದ್ದ ಕಾರಣ, ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ಹಕ್ಕನ್ನು ಸಿಬಿಐ ಹೊಂದಿದೆ ಎಂದು ಹೇಳಿಕೊಂಡಿದೆ.

ಅಪರಾಧಿ ಮರಣದಂಡನೆ ವಿಧಿಸಿದ ಸೀಲ್ಡಾ ಸೆಷನ್ಸ್ ನ್ಯಾಯಾಲಯದ ಆದೇಶವು ಅಸಮರ್ಪಕವಾಗಿದೆ ಎಂದು ಸಿಬಿಐ ಹೇಳಿಕೊಂಡಿದ್ದು, ಸಿಬಿಐ ಮತ್ತು ರಾಜ್ಯ ಸರ್ಕಾರ ಎರಡೂ ಪ್ರತ್ಯೇಕವಾಗಿ ಅಪರಾಧಿಗೆ ಮರಣದಂಡನೆ ವಿಧಿಸಬೇಕೆಂದು ಕೋರಿವೆ. ಆರ್ ಜಿ ಕರ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ, ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಅಧ್ಯಕ್ಷತೆಯ ವಿಭಾಗೀಯ ಪೀಠದ ಮುಂದೆ ದಿನದ ವಾದಗಳನ್ನು ಆರಂಭಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ತನಗೆ ಇದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿತ್ತು.

ಕೋಲ್ಕತ್ತಾದ ಪ್ರತಿಷ್ಠಿತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್‌ ಅಪರಾಧಿ ಎಂದು ನ್ಯಾಯಾಲಯ ಹೇಳಿದ್ದು, ಸೋಮವಾರ (ಜ.20) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 103(1)ರ ಅಡಿಯಲ್ಲಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಕೋಲ್ಕತ್ತಾದ ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ತಿಳಿಸಿದ್ದರು.

ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ಪರಿಹಾರ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ವೇಳೆ ಕೇಂದ್ರ ತನಿಖಾ ದಳವು (ಸಿಬಿಐ) ಆರೋಪಿ ಸಂಜಯ್ ರಾಯ್‌ಗೆ ‘ಮರಣದಂಡನೆ’ ವಿಧಿಸುವಂತೆ ಕೋರಿತ್ತು. ಅಪರಾಧಿಗೆ ಮರಣದಂಡನೆ ವಿಧಿಸಲು ಈ ಪ್ರಕರಣ “ಅಪರೂಪದಲ್ಲಿ ಅಪರೂಪ” ವರ್ಗಕ್ಕೆ ಸೇರುವುದಿಲ್ಲ ಎಂದು ನ್ಯಾಯಾಧೀಶ ದಾಸ್ ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಅಪರಾಧಿ ಸಂಜಯ್ ರಾಯ್ “ತಾನು ಏನೂ ತಪ್ಪು ಮಾಡಿಲ್ಲ. ತನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಸುಮ್ಮನೆ ಸಿಲುಕಿಸಲಾಗಿದೆ. ನನಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರಿಗೆ ಬೇಕಾದುದ್ದಕ್ಕೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

ಅಪರಾಧಿ ಪರ ವಕೀಲರು ವಾದ ಮಂಡಿಸಿ, “ಇದು ಅಪರೂಪದ ಪ್ರಕರಣವಾಗಿದ್ದರೂ ಸಹ, ಸುಧಾರಣೆಗೆ ಅವಕಾಶವಿರಬೇಕು. ಅಪರಾಧಿ ಸುಧಾರಣೆ ಅಥವಾ ಪುನರ್ವಸತಿಗೆ ಏಕೆ ಅರ್ಹನಲ್ಲ ಎಂದು ನ್ಯಾಯಾಲಯ ತೋರಿಸಬೇಕು. ಸರ್ಕಾರಿ ಅಭಿಯೋಜಕರು ಈ ಸಂಬಂಧ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಬೇಕು ಮತ್ತು ವ್ಯಕ್ತಿಯು ಸುಧಾರಣೆಗೆ ಅರ್ಹನಲ್ಲ ಎಂಬುದಕ್ಕೆ ಕಾರಣಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ, ಸಂತ್ರಸ್ತೆಯ ಕುಟುಂಬದ ಪರ ವಕೀಲರು, ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ವಿಧಿಸುವಂತೆ ಕೋರಿದ್ದಾರೆ. ಸಂತ್ರಸ್ತೆಯ ತಂದೆ ಕೂಡ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದು, ಬೀದಿಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್‌ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ರಾಯ್ ದೋಷಿ ಎಂದು ನ್ಯಾಯಾಧೀಶರು ಶನಿವಾರ ಆದೇಶ ಪ್ರಕಟಿಸಿದ್ದರು.

ಇದನ್ನೂಓದಿ:  ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...