Homeಮುಖಪುಟಕಾಡು ಬೆಳೆಸಲು ಜೀವ ಮುಡುಪಿಟ್ಟ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ

ಕಾಡು ಬೆಳೆಸಲು ಜೀವ ಮುಡುಪಿಟ್ಟ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ

- Advertisement -
- Advertisement -

ಸಂಶೋಧಕ, ಯುವ ಬರಹಗಾರ ಅರುಣ್ ಜೋಳದಕೂಡ್ಲಿಗಿಯವರು ತಮ್ಮ ಎಲೆ ಮರೆ-7ರ ಅಂಕಣದಲ್ಲಿ ಭಟ್ರಳ್ಳಿ ಗೂಳೆಪ್ಪನವರ ಬಗ್ಗೆ ಬರೆದಿದ್ದರು. ಈಗ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ ದೊರೆತಿದೆ.

ನಂಜುಂಡಪ್ಪ ಅವರ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕುಗಳಲ್ಲಿ ಚಳ್ಳಕೆರೆ ಒಳಗೊಂಡಂತೆ ಮೊಳಕಾಲ್ಮೂರು ತಾಲೂಕು ಸೇರುತ್ತದೆ. ಹಾಗೆ ನೋಡಿದರೆ ಇದು ಕರ್ನಾಟಕದ ನಡುಮಧ್ಯೆ ಬರುವ ಭೂಭಾಗ. ಈ ಬಯಲ ಬಿಸಿಲಿಗೆ ಬಿರುಕುಬಿಟ್ಟ ನೆಲದಂತೆಯೂ, ಬಟ್ಟಂಬಯಲ ಆಲಯದಂತೆಯೂ ಇದೆ. ಹಿರಿಯೂರು ಚಳ್ಳಕೆರೆ ಮಾರ್ಗವಾಗಿ ಬಳ್ಳಾರಿಗೆ ಚಲಿಸುತ್ತಿದ್ದರೆ ಈ ಭಾಗದ ಬಂಡೆಗಳಿಂದ ಸುತ್ತುವರಿದ ಬೆಟ್ಟಗಳು ಎದುರಾಗುತ್ತವೆ. ಬಿತ್ತನೆ ಇಲ್ಲದ ಹೊಲಗಳು ಬಿಸಿಲ ಉಡುಪುತೊಟ್ಟು ದುಃಖಿಸುತ್ತಿರುವಂತೆ ಭಾಸವಾಗುತ್ತದೆ. ಸಂಗಾತಿಯಾಗಿ ಪೌಷ್ಠಿಕಾಂಶದ ಕೊರತೆಯಿಂದ ನರಳುತ್ತಿರುವ ಮಕ್ಕಳಂತಹ ಕುರುಚಲು ಕಾಡು ಅಲ್ಲಲ್ಲಿ ಕುಪ್ಪೆಕುಪ್ಪೆಯಾಗಿ ಕಾಣುತ್ತದೆ. ಈ ಮಧ್ಯೆಯೂ ಜೀವಚೈತನ್ಯದ ಕುರುಹು ಎಂಬಂತೆ ಹಾಡುವ ಹಕ್ಕಿಗಳು ಸುಳಿದಾಡುವ ಜೀವರಾಶಿ. ಉಳಿದಂತೆ ಬಯಲೆಂಬ ಬಯಲ ಜತೆ ಬಿಸಿಲೆಂಬ ಬಿಸಿಲು. ಇಂತಹ ಪರಿಸರದಲ್ಲಿ ಹಸಿರಿನ ಕನಸೊತ್ತು ಕಾಡಿನ ಕಾವಲಿಗೆ ತನ್ನ ಜೀವವನ್ನೆ ತೇದು ಗಂಧದ ವಾಸನೆ ಬೀರಿದಾತ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಭಟ್ರಳ್ಳಿಯ ತಳವಾರ ಗೂಳೆಪ್ಪ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಾಲಸಾಗರ ವ್ಯಾಪ್ತಿಯ ರಕ್ಷಿತ ಅರಣ್ಯವನ್ನು ಪ್ರವೇಶಿಸುತ್ತಿದ್ದಂತೆ ಭಟ್ರಳ್ಳಿ ಗೂಳೆಪ್ಪ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ಹಚ್ಚಹಸಿರಿನ ಕಾಡು ಸಿಗುತ್ತದೆ. ನಾನೊಮ್ಮೆ ಗೂಳೆಪ್ಪನನ್ನು ಭೇಟಿ ಮಾಡಲೆಂದು ಹೋದಾಗ ಗೂಳೆಪ್ಪ ಮಾತನಾಡುತ್ತಾ ಕಾಡಿನೊಳಗೆ ಕರೆದುಕೊಂಡು ಹೋಗತೊಡಗಿದರು. ತಾನು ಅಲ್ಲಲ್ಲಿ ತೋಡಿದ ನೀರುಗುಂಡಿಗಳನ್ನು ತೋರಿಸುತ್ತಾ ನೀರು ನಿಲ್ಲಿಸುವ ಸಾಹಸದ ಕಥೆಗಳನ್ನು ಹೇಳತೊಡಗಿದರು. ನಡಿಗೆಯ ಆರಂಭದಲ್ಲಿ ಬಿಡಿಬಿಡಿಯಾಗಿದ್ದ ಗಿಡಮರಗಳು ನಿಧಾನಕ್ಕೆ ಹೆಚ್ಚಾಗತೊಡಗಿದವು. ಮುಂದೆ ಸ್ವಲ್ಪ ದೂರದಲ್ಲಿ ಸಾಲುಸಾಲು ಆಸಿನ (ಆರಿಗಿಡ) ಮರಗಳು ಕಾಣತೊಡಗಿದವು. 50 ಹೆಕ್ಟೇರ್ ಪ್ರದೇಶದ ಈ ಕಾಡನ್ನು ಗೂಳೆಪ್ಪ ಕಣ್ಣಲ್ಲಿ ಕಣ್ಣಿಟ್ಟು ಕಾಪಿಟ್ಟಿದ್ದಾನೆ.
ಗೂಳೆಪ್ಪ ಈ ಮರಗಳನ್ನು ಯಾವಾಗ ನೆಟ್ಟವು ಎಂದು ಲೆಕ್ಕ ಇಟ್ಟು ಹೇಳುತ್ತಾರೆ. ಕೆಲವು 1995 ರಲ್ಲಿ ನೆಟ್ಟವಾಗಿದ್ದರೆ ಮತ್ತೆ ಕೆಲವು 1997 ರಲ್ಲಿ ನೆಟ್ಟವುಗಳು. ಅವೆಲ್ಲಾ ಈಗ ಎತ್ತರಕ್ಕೆ ಬೆಳೆದು ಗೂಳೆಪ್ಪನ ಹೆಸರೇಳುತ್ತಿವೆ. ಇಡೀ ಕಾಡಿನ ಜೀವನಾಡಿಯನ್ನು ಕೇಳಿಸಿಕೊಳ್ಳುವಷ್ಟು ಈ ಕಾಡಿನ ಜತೆ ಈತ ಬೆಸೆದುಕೊಂಡಿದ್ದಾನೆ. ಈ ಕಾಡನ್ನು ಸುತ್ತಿದ್ದರೆ ಕಡಿದು ಮೊಟಕಾದ ಒಂದೇ ಒಂದು ಬೊಡ್ಡೆಯೂ ಕಾಣಲು ಸಿಗುವುದಿಲ್ಲ. ಅಷ್ಟರಮಟ್ಟಿಗೆ ಗೂಳೆಪ್ಪನ ಕಾವಲು ಕಾಡನ್ನು ಸಂರಕ್ಷಿಸಿದೆ. ಆಲ, ಬೇವು, ಅರಳಿ, ನೇರಲ, ಬಿಕ್ಕೆ, ಕಮರ, ತಪ್ಸೆ, ದೊಂಡು ಜಾಲಿ, ಉಲಿಪೆ, ಸಪಳೆ, ಆಸು ಹೀಗೆ ಹತ್ತಾರು ಜಾತಿಯ ಮರಗಿಡಗಳು ನಿರಾತಂಕವಾಗಿ ಬೆಳೆಯುತ್ತಿವೆ. ಕವಳೆ, ಸೀತಾಫಲ, ಬಿಕ್ಕೆ, ಕಾರೆ, ಬರಗಿ, ಬೆಳವಿ, ಹುಣಸೆ, ಹತ್ತಿ ಮುಂತಾದ ಹಣ್ಣಿನ ಮರಗಿಡಗಳು ಕಾಲಾನುಸಾರ ಹಣ್ಣು ಕೊಡುತ್ತಿವೆ. ಕರಡಿ, ಕಾಡುಹಂದಿ, ಚಿರತೆ, ನರಿ, ಮೊಲ, ತೋಳ ಮೊದಲಾದ ಪ್ರಾಣಿಗಳು, ನವಿಲು, ಬೆಳವ, ಕೋಗಿಲೆ, ಕೌಜುಗ, ಗಿಡುಗ, ಕಾಜಾಣ, ಚಿವುಟ ಗುಬ್ಬಿ ಮೊದಲಾದ ಪಕ್ಷಿಗಳು ಒಳಗೊಂಡಂತೆ ಒಂದು ಕುಟುಂಬದ ಸದಸ್ಯರಂತೆ ನಲಿದಾಡಿಕೊಂಡಿವೆ.

ಹೀಗೆ ಗೂಳೆಪ್ಪ ಕಾಡಿಗೆ ಅಂಟಿಕೊಂಡ ಕಥೆಯೂ ಕುತೂಹಲಕಾರಿಯಾಗಿದೆ. ಸರಿಸುಮಾರು 30 ವರ್ಷದ ಹಿಂದೆ ಅರಣ್ಯ ಇಲಾಖೆಯು ಕಾಡಿನಲ್ಲಿ ಸಸಿ ನೆಡುವ ಕೆಲಸಕ್ಕೆ ದಿನಗೂಲಿ ಲೆಕ್ಕದಲ್ಲಿ ಗೂಳೆಪ್ಪನನ್ನು ಒಳಗೊಂಡಂತೆ ಅನೇಕರನ್ನು ಕೆಲಸಕ್ಕೆ ಹಚ್ಚಿತು. ಹೀಗೆ ಎಲ್ಲರಂತೆ ಗೂಳೆಪ್ಪನೂ ಸಸಿ ನೆಡುತ್ತಾ ಕಾಡಿನ ನಂಟಿಗೆ ಬಿದ್ದ. ಕೆಲಸ ಕಡಿಮೆಯಾದಂತೆ ಇಲಾಖೆ ಕೆಲಸಗಾರರ ಸಂಖ್ಯೆಯನ್ನು ಕಡಿತಗೊಳಿಸುತ್ತಾ ಬಂತು. ನಂತರ ಮಳೆಗಾಲದ ಆರಂಭಕ್ಕಷ್ಟೇ ಒಂದೆರಡು ತಿಂಗಳುಗಳಿಗೆ ಈ ಕೆಲಸ ಸೀಮಿತವಾಯಿತು. ಬರುಬರುತ್ತಾ ನಿಂತೇ ಹೋಯಿತು. ಹೀಗಿರುವಾಗ ಗೂಳೆಪ್ಪನಿಗೆ ಕಾಡಿನ ನಂಟು ಅಷ್ಟೊತ್ತಿಗೆ ಗಟ್ಟಿಯಾಗಿತ್ತು. ಇಲಾಖೆಯವರು ಕೂಲಿ ಕೊಟ್ರೆಷ್ಟು ಬಿಟ್ರೆಷ್ಟು ಸಸಿ ನೆಡುತ್ತಾ ಕಾಡನ್ನ ಕಾಯ್ತೀನಿ ಎಂಬ ನಿರ್ಧಾರಕ್ಕೆ ಬಂದರು. ಈ ಮಧ್ಯೆ ಅರಣ್ಯ ಇಲಾಖೆಯು ನೇಮಿಸಿದ ಕಾಡಿನ ವಾಚರುಗಳು ತಮ್ಮ ಎಂದಿನ ಸಂಬಳಕ್ಕಾಗಿ ಡ್ಯೂಟಿ ಮಾಡುತ್ತಿದ್ದರೆ, ಗೂಳೆಪ್ಪ ಕೂಲಿಯೂ ಇಲ್ಲದೆ ಕಾಡು ಕಾಯುವುದನ್ನು ತನ್ನ ನಿತ್ಯದ ಕರ್ಮವನ್ನಾಗಿಸಿಕೊಂಡ.

ದಿನವೂ ಗೂಳೆಪ್ಪನ ದಿನಚರಿ ಶುರುವಾಗುವುದು ಬೆಳಗ್ಗೆ 5 ಗಂಟೆಗೆ. ಅಷ್ಟೊತ್ತಿಗೆ ಊಟ ಮಾಡಿ, ಬುತ್ತಿ ನೀರು ತಗೊಂದು ಕೈಲೊಂದು ಮಚ್ಚು ಕೋಲಿಡಿದು ಕಾಡಿಗೆ ಹೊರಟರೆ ಮತ್ತೆ ಬರುವುದು ಸಂಜೆ ಏಳರ ಹೊತ್ತಿಗೆ. ಇಂತಹ ದಿನಚರಿಯನ್ನು ಈಗ್ಗೆ 30 ವರ್ಷಗಳಿಂದ ಮಾಡುತ್ತಾ ಬಂದಿರುವುದೇ ಒಂದು ಅಪರೂಪದ ಸಂಗತಿಯಾಗಿದೆ. ಗೂಳೆಪ್ಪ ಕಾಡಿಗೆ ಹೋಗುವುದನ್ನು ನೋಡಿದರೆ ಸಾಕು ಯಾರೂ ಆ ಕಡೆ ಸುಳಿಯುವುದಿಲ್ಲ. ಮರ ಕಡಿಯುವುದಿರಲಿ ಆಡು ಕುರಿ ದನಕರು ಮೇಯಿಸುವುದೂ ಇಲ್ಲಿ ನಿಷಿದ್ಧ. ಕೆಲವೊಮ್ಮೆ ಈತನ ಕಣ್ತಪ್ಪಿಸಿ ಮರ ಕಡಿವ ಕೆಲವರನ್ನು ರೇಂಜರರಿಗೆ ಹಿಡಿದುಕೊಟ್ಟದ್ದಕ್ಕೆ ಗೂಳೆಪ್ಪ ಊರವರ ವಿರೋಧವನ್ನೂ ಎದುರಿಸಬೇಕಾಯಿತು. ಇದರಿಂದಾಗಿ ಸುತ್ತಮುತ್ತಣ ಊರವರ ಜತೆ ಸಣ್ಣಪುಟ್ಟ ಜಗಳಗಳೂ ಮನಸ್ತಾಪಗಳೂ ನಡೆದವು. ಇದೀಗ ಇಂತಹ ಯಾವ ಸಂಘರ್ಷಗಳೂ ನಡೆಯುವಂತಿಲ್ಲ. ಸುತ್ತಮುತ್ತಣ ಊರವರಿಗೆ ಗೂಳೆಪ್ಪನ ಬಗ್ಗೆ ಎಂಥದೋ ಪ್ರೀತಿಸ್ನೇಹದ ಬೆಸುಗೆ ಸಾಧ್ಯವಾಗಿದೆ.

ಗೂಳೆಪ್ಪನ ಮನದಲ್ಲಿ ಅವಿತು ಕುಳಿತು ಬಿಕ್ಕಳಿಸುವ ದುಃಖದ ಕಡಲೊಂದಿದೆ. ಅದು ಗೂಳೆಪ್ಪನನ್ನು ಇನ್ನಷ್ಟು ಗಟ್ಟಿಗೊಳಿಸಿದಂತಿದೆ. ಆರು ಜನ ಮಕ್ಕಳು ಚಿಕ್ಕವರಿರುವಾಗಲೆ ಮಡದಿ ಅಕಾಲಿಕ ಮರಣವನ್ನಪ್ಪುತ್ತಾಳೆ. ಮಡದಿಯ ಸಾವು ಗೂಳೆಪ್ಪನನ್ನು ಇನ್ನಿಲ್ಲದ ಕಷ್ಟಕ್ಕೆ ಸಿಲುಕಿಸುತ್ತದೆ. ಇಂತಹ ಕಡುಕಷ್ಟದಲ್ಲಿ ಗೂಳೆಪ್ಪ ಮಕ್ಕಳಿಗೆ ಅಡುಗೆ ಮಾಡಿಟ್ಟು, ಅವರನ್ನೆಲ್ಲಾ ಶಾಲೆಗೆ ಕಳಿಸಿ ಮತ್ತೆ ತನ್ನ ಕಾಡುಕಾಯುವ ಕಾಯಕಕ್ಕೆ ಹೋಗುತ್ತಿದ್ದರು. ಈ ಮಧ್ಯೆ ಮರುಮದುವೆಗೆ ಸಲಹೆಗಳು ಬಂದರೂ ಗೂಳೆಪ್ಪ ಅತ್ತ ಕಡೆ ಗಮನ ಹರಿಸಲಿಲ್ಲ. ಬಹುಶಃ ಕಾಡಿನ ಗಿಡ ಮರ ಬಳ್ಳಿಗಳ ಜತೆಗಿನ ಒಡನಾಟವೇ ಅವರ ಒಂಟಿತನವನ್ನು ನೀಗಿ ಜೀವನೋತ್ಸಾಹವನ್ನು ತುಂಬಿದಂತಿದೆ.

ಗೂಳೆಪ್ಪನ ಈತನಕದ ಅನುಭವದಲ್ಲಿ ಹತ್ತು ಜನ ರೇಂಜರುಗಳು ಬಂದುಹೋಗಿದ್ದಾರೆ. ಇದರಲ್ಲಿ ದಿದಿಗಿ ಸಾಹೇಬರು ಎನ್ನುವ ರೇಂಜರನ್ನು ಗೂಳೆಪ್ಪ ಪ್ರೀತಿಯಿಂದ ನೆನೆಯುತ್ತಾರೆ. ಅವರು ತುಂಬಾ ಸ್ಟ್ರಿಕ್ಟ್ ಆಫೀಸರ್ ಆಗಿದ್ದರು ಯಾವ ಪಿಳ್ಳೆ ನರಿಯೂ ಕಾಡನ್ನು ಪ್ರವೇಶ ಮಾಡುವಂತಿರಲಿಲ್ಲ ಎನ್ನುವುದು ಆತನ ಅಭಿಪ್ರಾಯ. ಹಾಗಾಗಿ ಇವರಿದ್ದಾಗ ಗೂಳೆಪ್ಪನಿಗೆ ಆನೆಯ ಬಲ ಬಂದಂತಾಗಿತ್ತು. ಈ ಸಂದರ್ಭದಲ್ಲಿಯೇ ಗೂಳೆಪ್ಪನ ದಿನಗೂಲಿಯು ಸಂಬಳವಾಗಿ ಪರಿವರ್ತನೆ ಹೊಂದಿತು. ಇದರಿಂದಾಗಿ ಇದೀಗ ಗೂಳೆಪ್ಪ ನಿಯಮಿತವಾಗಿ ಒಂದಷ್ಟು ಸಂಬಳವನ್ನು ಪಡೆಯುವಂತಾಗಿದೆ. ಗೂಳೆಪ್ಪ ಕಾಯುವ ಕಾಡು ಗುಡೆಕೋಟೆ ಕರಡಿಧಾಮದ ವ್ಯಾಪ್ತಿಗೆ ಬಂದಿದೆ. ಎಂದಿನಂತೆ ಕಾಡಿನ ಮರ ಗಿಡ ಬಳ್ಳಿ ಹಕ್ಕಿ ಕ್ರಿಮಿಕೀಟ ಪ್ರಾಣಿಗಳ ಜತೆ ಪಿಸುಮಾತನ್ನಾಡುತ್ತಾ ಗೂಳೆಪ್ಪ ಕಾಡು ಕಾಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

  • ಅರುಣ್ ಜೋಳದ ಕೂಡ್ಲಿಗಿ

ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...