Homeಮುಖಪುಟವಕ್ಫ್‌ ತಿದ್ದುಪಡಿ ಪರಿಶೀಲನೆ - ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅದನ್ನು ಅಂಗೀಕರಿಸಿದೆ. ಈ ಮೂಲಕ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ವೇದಿಕೆಯನ್ನು ನಿಗದಿಪಡಿಸಿದೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ಸಮಿತಿಯು ಆಡಳಿತಾರೂಢ ಎನ್‌ಡಿಎ ಸದಸ್ಯರು ಸೂಚಿಸಿದ 14 ತಿದ್ದುಪಡಿಗಳನ್ನು ಅಂಗೀಕರಿಸಿದರೆ, ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಎಲ್ಲವನ್ನೂ 10:16 ಕ್ಕೆ ಧ್ವನಿ ಮತದ ಮೂಲಕ ತಿರಸ್ಕರಿಸಲಾಯಿತು. ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಯು 1995 ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿತ್ತು.

ನಿಯಮಗಳನ್ನು ಉಲ್ಲಂಘಿಸಿ ಕಲಾಪವನ್ನು ಬುಡಮೇಲು ಮಾಡಲಾಗಿದೆ ಎಂದು ಆರೋಪಿಸಿ ಸಮಿತಿಯ ಅಧ್ಯಕ್ಷರ ವಿರುದ್ಧ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ್ದರೂ, ತಿದ್ದುಪಡಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮತಕ್ಕೆ ಹಾಕಲಾಗಿದೆ ಎಂದು ಜಗದಾಂಬಿಕ ಪಾಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎಂಕೆ ಸಂಸದ ಎ. ರಾಜಾ ಮಾತನಾಡಿ, “ಅಧ್ಯಕ್ಷರು ಸ್ವತಃ ತಿದ್ದುಪಡಿಗಳನ್ನು ಮಂಡಿಸಿದವರ ಹೆಸರುಗಳನ್ನು (ನಾವು ನೀಡಿದ) ಕರೆದರು, ಅವರೇ ನಮ್ಮ ಪರವಾಗಿ ತಿದ್ದುಪಡಿಗಳನ್ನು ಮಂಡಿಸಿದರು, ಮತಗಳ ಎಣಿಕೆ ನಡೆಸಿದರು, ನಂತರ ನಮ್ಮ ತಿದ್ದುಪಡಿಗಳನ್ನು ತಿರಸ್ಕರಿಸುವುದಾಗಿ ಘೋಷಿಸಿದರು. ಒಂದು ವೇಳೆ ಇದು ಮಸೂದೆಯಾದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.” ಎಂದು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದಾಂಬಿಕ ಪಾಲ್, ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡುವ ಬದಲು, ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು ಈ ಬದಲಾವಣೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. 1995 ರ ವಕ್ಫ್ ಕಾಯ್ದೆಯಲ್ಲಿ, ಆ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಮತ್ತೊಂದು ವಿವಾದಾತ್ಮಕ ನಿಬಂಧನೆಗೆ ಬದಲಾವಣೆಗಳನ್ನು ಸಮಿತಿಯು ಅನುಮೋದಿಸಿದೆ. ಇದು ಕಡ್ಡಾಯ ಎಂಬ ಪದವನ್ನು ಕೈಬಿಟ್ಟು, ವಿದ್ವಾಂಸರನ್ನು ಒಳಗೊಂಡಂತೆ ಮೂರು ಸದಸ್ಯರಿಗೆ ಹೆಚ್ಚಿಸುವ ಮೂಲಕ ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

‘ಬಳಕೆದಾರರ ವಕ್ಫ್(ಬೈ ಯೂಸರ್)’ ನಿಬಂಧನೆಯ ಮೇಲೆ ಮತ್ತೊಂದು ಬದಲಾವಣೆ ಪ್ರಸ್ತಾಪಿಸಲಾಗಿತ್ತಾದರೂ, ಮಸೂದೆ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ‘ಬಳಕೆದಾರ ವಕ್ಫ್(ಬೈಯೂಸರ್)’ ಕಾನೂನು ಆಸ್ತಿಯನ್ನು ನೋಂದಾಯಿಸುವವರೆಗೆ ಹಿಂದಿನಿಂದ ಬಳಕೆಯಾದ ತಕ್ಷಣ ಅದು ವಕ್ಫ್‌ ಆಗುವುದಿಲ್ಲ ಎಂಬ ತಿದ್ದುಪಡಿಗಳನ್ನು ಸಮಿತಿಯು ಅನುಮೋದಿಸಿತು.

ಕಾಂಗ್ರೆಸ್ ಸಂಸದ, ಜೆಪಿಸಿ ಸದಸ್ಯ ಇಮ್ರಾನ್ ಮಸೂದ್ ಇದನ್ನು ವಿರೋಧಿಸಿದ್ದು, 90% ವಕ್ಫ್ ಆಸ್ತಿಗಳನ್ನು ಇನ್ನೂ ನೋಂದಾಯಿಸಲಾಗಿಲ್ಲ ಎಂದು ಹೇಳಿದ್ವದಾರೆ. ಸರ್ಕಾರವು ಹೊಸ ಮಸೂದೆಯನ್ನು ತರುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಹೊಸದೇನಿದೆ?

ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿ ಬದಲಿಗೆ ಆಸ್ತಿಯು ವಕ್ಫ್ ಆಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅಧಿಕಾರಿಯನ್ನು ನೇಮಿಸುವ ಹಕ್ಕು. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರರನ್ನು ಸೇರಿಸುವ ಕಡ್ಡಾಯ ಷರತ್ತನ್ನು ಕೈಬಿಡಲಾಗಿದೆ. ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆ ಪ್ರಸ್ತಾಪಿಸಲಾಗಿದ್ದು, ಅದರಲ್ಲಿ ವಿದ್ವಾಂಸರು ಸೇರಿದಂತೆ ಮೂರು ಸದಸ್ಯರ ಹೆಚ್ಚಳ.

ಸಂಸದೀಯ ಸಮಿತಿಯು ಮಂಗಳವಾರ ಸದಸ್ಯರ ನಡುವೆ ಅಂತಿಮ ಕರಡನ್ನು ಪ್ರಸಾರ ಮಾಡಲಿದೆ. ವರದಿಯನ್ನು ಅಂಗೀಕರಿಸಲು ಜನವರಿ 29 ರಂದು ಸಭೆ ಸೇರಲಿದೆ ಎಂದು ವರದಿಯಾಗಿದೆ. ಜನವರಿ 31 ರಂದು ಲೋಕಸಭಾ ಸ್ಪೀಕರ್‌ಗೆ ವರದಿಯನ್ನು ಸಲ್ಲಿಸಲಾಗುವುದು ಮತ್ತು ಫೆಬ್ರವರಿ 5 ರ ದೆಹಲಿ ಚುನಾವಣೆಗೆ ಮೊದಲು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂಓದಿ:  ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...