Homeಮುಖಪುಟವಕ್ಫ್‌ ತಿದ್ದುಪಡಿ ಪರಿಶೀಲನೆ - ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅದನ್ನು ಅಂಗೀಕರಿಸಿದೆ. ಈ ಮೂಲಕ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ವೇದಿಕೆಯನ್ನು ನಿಗದಿಪಡಿಸಿದೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ಸಮಿತಿಯು ಆಡಳಿತಾರೂಢ ಎನ್‌ಡಿಎ ಸದಸ್ಯರು ಸೂಚಿಸಿದ 14 ತಿದ್ದುಪಡಿಗಳನ್ನು ಅಂಗೀಕರಿಸಿದರೆ, ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಎಲ್ಲವನ್ನೂ 10:16 ಕ್ಕೆ ಧ್ವನಿ ಮತದ ಮೂಲಕ ತಿರಸ್ಕರಿಸಲಾಯಿತು. ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಯು 1995 ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿತ್ತು.

ನಿಯಮಗಳನ್ನು ಉಲ್ಲಂಘಿಸಿ ಕಲಾಪವನ್ನು ಬುಡಮೇಲು ಮಾಡಲಾಗಿದೆ ಎಂದು ಆರೋಪಿಸಿ ಸಮಿತಿಯ ಅಧ್ಯಕ್ಷರ ವಿರುದ್ಧ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ್ದರೂ, ತಿದ್ದುಪಡಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮತಕ್ಕೆ ಹಾಕಲಾಗಿದೆ ಎಂದು ಜಗದಾಂಬಿಕ ಪಾಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎಂಕೆ ಸಂಸದ ಎ. ರಾಜಾ ಮಾತನಾಡಿ, “ಅಧ್ಯಕ್ಷರು ಸ್ವತಃ ತಿದ್ದುಪಡಿಗಳನ್ನು ಮಂಡಿಸಿದವರ ಹೆಸರುಗಳನ್ನು (ನಾವು ನೀಡಿದ) ಕರೆದರು, ಅವರೇ ನಮ್ಮ ಪರವಾಗಿ ತಿದ್ದುಪಡಿಗಳನ್ನು ಮಂಡಿಸಿದರು, ಮತಗಳ ಎಣಿಕೆ ನಡೆಸಿದರು, ನಂತರ ನಮ್ಮ ತಿದ್ದುಪಡಿಗಳನ್ನು ತಿರಸ್ಕರಿಸುವುದಾಗಿ ಘೋಷಿಸಿದರು. ಒಂದು ವೇಳೆ ಇದು ಮಸೂದೆಯಾದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.” ಎಂದು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದಾಂಬಿಕ ಪಾಲ್, ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡುವ ಬದಲು, ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು ಈ ಬದಲಾವಣೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. 1995 ರ ವಕ್ಫ್ ಕಾಯ್ದೆಯಲ್ಲಿ, ಆ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಮತ್ತೊಂದು ವಿವಾದಾತ್ಮಕ ನಿಬಂಧನೆಗೆ ಬದಲಾವಣೆಗಳನ್ನು ಸಮಿತಿಯು ಅನುಮೋದಿಸಿದೆ. ಇದು ಕಡ್ಡಾಯ ಎಂಬ ಪದವನ್ನು ಕೈಬಿಟ್ಟು, ವಿದ್ವಾಂಸರನ್ನು ಒಳಗೊಂಡಂತೆ ಮೂರು ಸದಸ್ಯರಿಗೆ ಹೆಚ್ಚಿಸುವ ಮೂಲಕ ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

‘ಬಳಕೆದಾರರ ವಕ್ಫ್(ಬೈ ಯೂಸರ್)’ ನಿಬಂಧನೆಯ ಮೇಲೆ ಮತ್ತೊಂದು ಬದಲಾವಣೆ ಪ್ರಸ್ತಾಪಿಸಲಾಗಿತ್ತಾದರೂ, ಮಸೂದೆ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ‘ಬಳಕೆದಾರ ವಕ್ಫ್(ಬೈಯೂಸರ್)’ ಕಾನೂನು ಆಸ್ತಿಯನ್ನು ನೋಂದಾಯಿಸುವವರೆಗೆ ಹಿಂದಿನಿಂದ ಬಳಕೆಯಾದ ತಕ್ಷಣ ಅದು ವಕ್ಫ್‌ ಆಗುವುದಿಲ್ಲ ಎಂಬ ತಿದ್ದುಪಡಿಗಳನ್ನು ಸಮಿತಿಯು ಅನುಮೋದಿಸಿತು.

ಕಾಂಗ್ರೆಸ್ ಸಂಸದ, ಜೆಪಿಸಿ ಸದಸ್ಯ ಇಮ್ರಾನ್ ಮಸೂದ್ ಇದನ್ನು ವಿರೋಧಿಸಿದ್ದು, 90% ವಕ್ಫ್ ಆಸ್ತಿಗಳನ್ನು ಇನ್ನೂ ನೋಂದಾಯಿಸಲಾಗಿಲ್ಲ ಎಂದು ಹೇಳಿದ್ವದಾರೆ. ಸರ್ಕಾರವು ಹೊಸ ಮಸೂದೆಯನ್ನು ತರುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಹೊಸದೇನಿದೆ?

ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿ ಬದಲಿಗೆ ಆಸ್ತಿಯು ವಕ್ಫ್ ಆಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅಧಿಕಾರಿಯನ್ನು ನೇಮಿಸುವ ಹಕ್ಕು. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರರನ್ನು ಸೇರಿಸುವ ಕಡ್ಡಾಯ ಷರತ್ತನ್ನು ಕೈಬಿಡಲಾಗಿದೆ. ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆ ಪ್ರಸ್ತಾಪಿಸಲಾಗಿದ್ದು, ಅದರಲ್ಲಿ ವಿದ್ವಾಂಸರು ಸೇರಿದಂತೆ ಮೂರು ಸದಸ್ಯರ ಹೆಚ್ಚಳ.

ಸಂಸದೀಯ ಸಮಿತಿಯು ಮಂಗಳವಾರ ಸದಸ್ಯರ ನಡುವೆ ಅಂತಿಮ ಕರಡನ್ನು ಪ್ರಸಾರ ಮಾಡಲಿದೆ. ವರದಿಯನ್ನು ಅಂಗೀಕರಿಸಲು ಜನವರಿ 29 ರಂದು ಸಭೆ ಸೇರಲಿದೆ ಎಂದು ವರದಿಯಾಗಿದೆ. ಜನವರಿ 31 ರಂದು ಲೋಕಸಭಾ ಸ್ಪೀಕರ್‌ಗೆ ವರದಿಯನ್ನು ಸಲ್ಲಿಸಲಾಗುವುದು ಮತ್ತು ಫೆಬ್ರವರಿ 5 ರ ದೆಹಲಿ ಚುನಾವಣೆಗೆ ಮೊದಲು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂಓದಿ:  ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...