Homeಮುಖಪುಟಚಂಡೀಗಢ ಮೇಯರ್ ಚುನಾವಣೆ | ಸ್ವತಂತ್ರ ವೀಕ್ಷಕರನ್ನು ನೇಮಿಸಿದ ಸುಪ್ರೀಂಕೋರ್ಟ್

ಚಂಡೀಗಢ ಮೇಯರ್ ಚುನಾವಣೆ | ಸ್ವತಂತ್ರ ವೀಕ್ಷಕರನ್ನು ನೇಮಿಸಿದ ಸುಪ್ರೀಂಕೋರ್ಟ್

ಕಳೆದ ವರ್ಷದ ಚುನಾವಣೆಯ ವೇಳೆ ಚುನಾವಣಾ ಅಧಿಕಾರಿ ವಂಚನೆ ನಡೆಸಿದ್ದ ಹಿನ್ನಲೆ

- Advertisement -
- Advertisement -

ಚಂಡೀಗಢದಲ್ಲಿ ಮುಂಬರುವ ಮೇಯರ್ ಚುನಾವಣೆಯ ಮತದಾನವನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯನ್ನು ಸ್ವತಂತ್ರ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚಂಡೀಗಢ ಮೇಯರ್ ಚುನಾವಣೆ

ಜನವರಿ 30 ರಂದು ನಡೆಯಲಿರುವ ಚುನಾವಣೆಯನ್ನು ರಹಸ್ಯ ಮತದಾನದ ಬದಲು “ಕೈ ಎತ್ತುವ” ಮೂಲಕ ನಡೆಸಬೇಕೆಂದು ಚಂಡೀಗಢ ಮೇಯರ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದರ ನಂತರ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ನ್ಯಾಯಮೂರ್ತಿ ಜೈಶ್ರೀ ಠಾಕೂರ್ ಅವರನ್ನು ಈ ಹುದ್ದೆಗೆ ನೇಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕುಲದೀಪ್‌ ಕುಮಾರ್ ಆರಂಭದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಈ ವಿಷಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆ ವೇಳೆಗೆ ಅವರು ಮೇಯರ್ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ ಎಂಬ ಕಾರಣಕ್ಕೆ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲು ಸಹ ಅವರು ಕೋರಿದ್ದರು. ಆದಾಗ್ಯೂ, ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಇದರ ನಂತರ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣೆಗಳು ನ್ಯಾಯಯುತವಾಗಿ ನಡೆಯುವಂತೆ ಸ್ವತಂತ್ರ ವೀಕ್ಷಕರನ್ನು ನೇಮಿಸುವ ಸೀಮಿತ ಉದ್ದೇಶಕ್ಕಾಗಿ ಕುಲದೀಪ್‌ ಕುಮಾರ್ ಅವರ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚಂಡೀಗಢ ಮೇಯರ್ ಚುನಾವಣೆ

ಸ್ವತಂತ್ರ ವೀಕ್ಷಕರ ಸಮ್ಮುಖದಲ್ಲಿ ಚುನಾವಣೆ ನಡೆಸಬೇಕು ಎಂದು ಪೀಠ ಹೇಳಿದ್ದು, ಇಡೀ ಪ್ರಕ್ರಿಯೆಯನ್ನು ಕ್ಯಾಮೆರಾದಲ್ಲಿ ದಾಖಲಿಸಬೇಕು ಎಂದು ತಿಳಿಸಿದೆ. 2024 ರ ವೇಳೆ ಚಂಡೀಗಢದಲ್ಲಿ ನಡೆದ ಮೇಯರ್ ಚುನಾವಣೆಯ ಸಮಯದಲ್ಲಿ ನಡೆದ ಅಕ್ರಮಗಳನ್ನು ಸಹ ಇದು ಗಣನೆಗೆ ತೆಗೆದುಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ, ಚುನಾವಣೆಯ ಸಮಯದಲ್ಲಿ ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಮತಪತ್ರಗಳನ್ನು ವಿರೂಪ ಮಾಡಿ ಅವುಗಳನ್ನು ಅಮಾನ್ಯಗೊಳಿಸಿದ್ದರು. ನಂತರ ಅವರು ಬಿಜೆಪಿಯ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿದ್ದರು. ಇದರ ನಂತರ, ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ ಫಲಿತಾಂಶಗಳನ್ನು ರದ್ದುಗೊಳಿಸಿ ಆಮ್ ಆದ್ಮಿ ಪಕ್ಷದ ನಾಯಕನನ್ನು ಮೇಯರ್ ಹುದ್ದೆಗೆ ಮಾನ್ಯವಾಗಿ ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಿತ್ತು.

ಸೋಮವಾರ ನಡೆದ ವಿಚಾರಣೆಯಲ್ಲಿ, ಕುಲದೀಪ್‌ ಕುಮಾರ್ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಗುರ್ಮಿಂದರ್ ಸಿಂಗ್, ಚುನಾವಣೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಬೇಕು ಎಂದು ಪೀಠಕ್ಕೆ ತಿಳಿಸಿದ್ದಾರೆ. ಹಿಂದಿನ ವರ್ಷ ನಡೆದ ವಿವಾದವನ್ನು ತಪ್ಪಿಸಲು ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೇಮಕಾತಿಗೆ ತಮ್ಮ ಆಕ್ಷೇಪಣೆ ಇಲ್ಲ ಎಂದು ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಆದಾಗ್ಯೂ, “ಪ್ರತಿ ಬಾರಿ ಇತಿಹಾಸ ಪುನರಾವರ್ತನೆಯಾಗದಿರಬಹುದು” ಎಂದು ಮೆಹ್ತಾ ಹೇಳಿದ್ದು, ಇತರ ಪುರಸಭೆಗಳ ಚುನಾವಣೆಗಳಿಗೆ ವೀಕ್ಷಕರ ನೇಮಕವು ಇದು ಪೂರ್ವನಿದರ್ಶನವಾಗಬಾರದು ಎಂದು ಅವರು ಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂಓದಿ:  ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...