Homeಮುಖಪುಟಕೇಜ್ರಿವಾಲ್ ವಿರುದ್ಧ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿಯಿಂದ ಮಾನನಷ್ಟ ಮೊಕದ್ದಮೆ?

ಕೇಜ್ರಿವಾಲ್ ವಿರುದ್ಧ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿಯಿಂದ ಮಾನನಷ್ಟ ಮೊಕದ್ದಮೆ?

- Advertisement -
- Advertisement -

ಹರಿಯಾಣ ಸರ್ಕಾರ ಕೈಗಾರಿಕಾ ತ್ಯಾಜ್ಯವನ್ನು ಯಮುನಾ ನೀರಿನಲ್ಲಿ ಸುರಿಯುವ ಮೂಲಕ ವಿಷಪೂರಿತಗೊಳಿಸುತ್ತಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೊಂಡ ನಂತರ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ, ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲು ಬಿಜೆಪಿ ಭಾರತೀಯ ಚುನಾವಣಾ ಆಯೋಗಕ್ಕೂ (ಇಸಿ) ಭೇಟಿ ನೀಡಲಿದೆ. ಕೇಜ್ರಿವಾಲ್ ಆರೋಪ ಮಾಡುವ ಬದಲು ಆಡಳಿತದತ್ತ ಗಮನಹರಿಸಬೇಕೆಂದು ಸಿಎಂ ಸೈನಿ ಸಲಹೆ ನೀಡಿದರು.

ಕೇಜ್ರಿವಾಲ್ ಆರೋಪಗಳನ್ನು ಮಾಡುವ ಮತ್ತು ಪಲಾಯನ ಅಭ್ಯಾಸವನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು. “ಅರವಿಂದ್ ಕೇಜ್ರಿವಾಲ್ ಅಮೋನಿಯಾ ಬಗ್ಗೆ ಮಾತನಾಡುತ್ತಾರೆ. ಅವರು ನೀರಿನ ಕೊರತೆಯನ್ನು ಹೇಳಿಕೊಳ್ಳುತ್ತಾರೆ. ಆದರೆ, ಯಾವುದೇ ಕೊರತೆಯಿಲ್ಲ; ವಿತರಣಾ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ. ಅವರು 10 ವರ್ಷಗಳಲ್ಲಿ ನೀರಿನ ವಿತರಣೆಯನ್ನು ನಿರ್ವಹಿಸಲು ಸಾಧ್ಯವಿಲ್ಲ. ಅವರು ಭರವಸೆ ನೀಡಿದ್ದರೂ ಜನರಿಗೆ ಕಲುಷಿತ ನೀರು ಸಿಗುತ್ತಿದೆ” ಎಂದು ಸೈನಿ ಹೇಳಿದರು.

“ಆರೋಪ ಮಾಡಿ ನಂತರ ಪಲಾಯನ ಅವರ (ಅರವಿಂದ್ ಕೇಜ್ರಿವಾಲ್) ಸ್ವಭಾವ ಮತ್ತು ಚಿಂತನೆ. ‘ಥೂಕೋ ಉಗುಳಿ ಓಡಿ ಎಂಬ ಮಾತಿದೆ; ಕೇಜ್ರಿವಾಲ್ ಮಾಡುವುದೂ ಇದನ್ನೇ. ನೀವು ನಿಮ್ಮ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಬೇಕೆಂದು ನಾನು ಹೇಳಿದೆ ಮತ್ತು ನಾನು ನನ್ನ ಮುಖ್ಯ ಕಾರ್ಯದರ್ಶಿಯನ್ನು ಸೋನಿಪತ್‌ನಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಲು ಕೇಳುತ್ತೇನೆ. ಯಮುನಾ ದೆಹಲಿಗೆ ಎಲ್ಲಿಂದ ಪ್ರವೇಶಿಸುತ್ತಿದೆ ಎಂಬುದನ್ನು ಪರಿಶೀಲಿಸಲಿ” ಎಂದು ಸೈನಿ ಹೇಳಿದರು.

ಹರಿಯಾಣ ಸರ್ಕಾರದ ಸಚಿವ ಶ್ಯಾಮ್ ಸಿಂಗ್ ರಾಣಾ, “ಆಪ್ ಸರ್ಕಾರ ತಮ್ಮ ಮುಖ್ಯ ಕಾರ್ಯದರ್ಶಿ ಅಥವಾ ಮುಖ್ಯ ಎಂಜಿನಿಯರ್ ಅನ್ನು ಕಳುಹಿಸಿ, ದೆಹಲಿಗೆ ಕಳುಹಿಸಲಾಗುತ್ತಿರುವ ನೀರನ್ನು ಪರೀಕ್ಷಿಸಬಹುದು, ನಂತರವೇ ಅವರು ಏನಾದರೂ ಹೇಳಬೇಕು” ಎಂದು ಹೇಳಿದರು.

ಮುಖ್ಯವಾಗಿ, ದೆಹಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳ ಮೊದಲು, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದೆಹಲಿಗೆ ಸರಬರಾಜು ಮಾಡಲಾದ ಯಮುನಾ ನೀರನ್ನು ‘ವಿಷ’ಗೊಳಿಸಿದೆ ಎಂದು ಕೇಜ್ರಿವಾಲ್ ಆರೋಪಿಸಿದರು. ಇದು ಸಾಮೂಹಿಕ ಸಾವುನೋವುಗಳಿಗೆ ಕಾರಣವಾಗಬಹುದು ಎಂದು ಹೇಳಿಕೊಂಡರು.

“ಬಿಜೆಪಿಯ ಹರಿಯಾಣ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದೆಹಲಿ ಜಲ ಮಂಡಳಿಯ ಜಾಗರೂಕತೆಯು ಕುಡಿಯುವ ನೀರಿನೊಂದಿಗೆ ವಿಷಪೂರಿತ ನೀರನ್ನು ಬೆರೆಸುವುದನ್ನು ತಡೆಯಿತು ಎಂದು ಹೇಳಿಕೊಂಡರು.

“ಈ ನೀರು ದೆಹಲಿಗೆ ಬಂದು ಕುಡಿಯುವ ನೀರಿನೊಂದಿಗೆ ಬೆರೆತಿದ್ದರೆ, ದೆಹಲಿಯಲ್ಲಿ ಅನೇಕ ಜನರು ಸಾಯುತ್ತಿದ್ದರು. ಇದು ಸಾಮೂಹಿಕ ನರಮೇಧಕ್ಕೆ ಕಾರಣವಾಗುತ್ತಿತ್ತು” ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಆರೋಪಿಸಿದರು. ದೆಹಲಿಯಲ್ಲಿರುವ ನೀರು ಸಂಸ್ಕರಣಾ ಘಟಕಗಳು ಈ ರೀತಿಯ ಕಲುಷಿತ ನೀರನ್ನು ಸಂಸ್ಕರಿಸಲು ಸಜ್ಜಾಗಿಲ್ಲ. ಇದು ದೆಹಲಿಯ ಮೂರನೇ ಒಂದು ಭಾಗದಷ್ಟು ನೀರಿನ ಕೊರತೆಯನ್ನು ಉಂಟುಮಾಡಿದೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿ ಜಲ ಮಂಡಳಿಯ ಸಿಇಒ ಏನು ಹೇಳಿದ್ದೇನು?

ಕೇಜ್ರಿವಾಲ್ ಅವರ ಹೇಳಿಕೆಯ ನಂತರ ದೆಹಲಿ ಜಲ ಮಂಡಳಿಯ ಸಿಇಒ ಶಿಲ್ಪಾ ಶಿಂಧೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಹರಿಯಾಣವು ಯಮುನಾ ಮೂಲಕ ದೆಹಲಿಯನ್ನು ತಲುಪುವ ಕಚ್ಚಾ ನೀರಿನಲ್ಲಿ ವಿಷವನ್ನು ಬಿಡುಗಡೆ ಮಾಡಿದೆ ಎಂಬ ಆರೋಪಗಳು ವಾಸ್ತವಿಕವಾಗಿ ತಪ್ಪಾಗಿದ್ದು, ಯಾವುದೇ ಆಧಾರವಿಲ್ಲದೆ ಮತ್ತು ದಾರಿತಪ್ಪಿಸುತ್ತವೆ ಎಂದು ಹೇಳಿದರು. ಇಂತಹ ಸುಳ್ಳು ಹೇಳಿಕೆಗಳು ದೆಹಲಿ ನಿವಾಸಿಗಳಲ್ಲಿ ಭಯ ಹುಟ್ಟಿಸಲು ಕಾರಣವಾಗುತ್ತವೆ ಮತ್ತು ಮೇಲ್ಭಾಗದ ರಾಜ್ಯಗಳೊಂದಿಗಿನ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದರು.

ಇದನ್ನೂ ಓದಿ; ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...