Homeಮುಖಪುಟಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

- Advertisement -
- Advertisement -

”ಹಿಂದೂ ದೇವತೆಗಳಿಗೆ ಅವಮಾನ, ಭಾರತ ವಿರೋಧಿ ಭಾವನೆ ಹರಡುವುದು ಮತ್ತು ಧಾರ್ಮಿಕ ಉದ್ವಿಗ್ನತೆ ಪ್ರಚೋದಿಸುವುದು” ಸೇರಿದಂತೆ 2016-17ರಲ್ಲಿ ಕೆಲವು ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿಯ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಪತ್ರಕರ್ತೆ ರಾಣಾ ಅಯ್ಯೂಬ್

ನ್ಯಾಯಾಲಯದ ಮುಂದೆ ಸಲ್ಲಿಸಲಾದ ಅರ್ಜಿಯಲ್ಲಿನ ಆರೋಪವು ಎಫ್‌ಐಆರ್‌ ದಾಖಲು ಮಾಡಬೇಕಾಗಿದ್ದ ಕಾಗ್ನಿಜೇಬಲ್‌ ಅಪರಾಧವಾಗಿದ್ದು, ನಗರ ಪೊಲೀಸರಿಗೆ ಈ ವಿಷಯವನ್ನು “ನ್ಯಾಯಯುತವಾಗಿ” ತನಿಖೆ ಮಾಡಲು ನಿರ್ದೇಶಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ. ಪತ್ರಕರ್ತೆ ರಾಣಾ ಅಯ್ಯೂಬ್

ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ರಮಣ್ ಸಿಂಗ್ ವಿಚಾರಣೆ ನಡೆಸುತ್ತಿದ್ದರು. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ರಾಣಾ ಅವರು ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಣಾ ಅವರ ಪೋಸ್ಟ್‌ಗಳು, ಹಿಂದೂ ದೇವತೆಗಳಿಗೆ ಅವಮಾನ, ಭಾರತ ವಿರೋಧಿ ಭಾವನೆ ಹರಡುವುದು ಮತ್ತು ಧಾರ್ಮಿಕ ಉದ್ವಿಗ್ನತೆ ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ ಎಂದು ಅರ್ಜಿಯು ಹೇಳಿಕೊಂಡಿದೆ.

ಜನವರಿ 25 ರಂದು ನ್ಯಾಯಾಲಯ ಆದೇಶ ಹೊರಡಿಸಿದ್ದು, “ಪ್ರಕರಣದ ವಾಸ್ತವಾಂಶಗಳ ಪ್ರಕಾರ, ಪ್ರಾಥಮಿಕವಾಗಿ ಕಾಗ್ನಿಜೇಬಲ್ ಅಪರಾಧಗಳನ್ನು IPCಯ ಸೆಕ್ಷನ್ 153 A (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಶಿಕ್ಷೆ), 295 A (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 505 (ಸಾರ್ವಜನಿಕ ತೊಂದರೆಗೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಮಾಡಲಾಗಿದೆ” ಎಂದು ಅರ್ಜಿಯು ಆರೋಪಿಸಿತ್ತು.

“ದೂರುದಾರರು ಸಲ್ಲಿಸಿದ ಸಂಗತಿಗಳು ಪೊಲೀಸ್ ತನಿಖೆಯ ರೂಪದಲ್ಲಿ ರಾಜ್ಯ ಯಂತ್ರದ ಹಸ್ತಕ್ಷೇಪದ ಅಗತ್ಯವಿರುತ್ತದೆ ಮತ್ತು ದೂರುದಾರರು (ವಕೀಲರು) ಸಾಕ್ಷ್ಯಗಳನ್ನು ಸಂಗ್ರಹಿಸುವ ಸ್ಥಿತಿಯಲ್ಲಿರುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ದೂರಿನ ವಿಷಯಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಲು ಮತ್ತು ಪ್ರಕರಣವನ್ನು ನ್ಯಾಯಯುತವಾಗಿ ತನಿಖೆ ಮಾಡಲು ದಕ್ಷಿಣ ದೆಹಲಿಯ ಸೈಬರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ (SHO) ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅನುಸರಣಾ ವರದಿಯನ್ನು ಸ್ವೀಕರಿಸಲು ಮಂಗಳವಾರ ವಿಚಾರಣೆಯನ್ನು ಮುಂದೂಡಿದೆ.

ಇದನ್ನೂಓದಿ:  ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...