HomeUncategorizedಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ.

- Advertisement -
- Advertisement -

ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿವೆ. ಅವುಗಳ ಸಾಲಿಗೆ ಇಲ್ಲೊಂದು ವಿಭಿನ್ನ ಪ್ರಯತ್ನವೂ ಸೇರ್ಪಡೆಯಾಗಿ ದೇಶದ ಗಮನ ಸೆಳೆಯುತ್ತಿದೆ. ಅದು ಕೂಡ ಏಕಾಂಗಿ ಹೋರಾಟ.

ಉತ್ತರಖಂಡದ ರುದ್ರಪುರ್ ದ ನಿವಾಸಿಯಾದ ಓಂಕಾರ್‌ ಸಿಂಗ್‌ ದಿಲಾನ್‌ ಎಂಬುವವರು ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂಬ ಘೋಷಣೆಯ ಬ್ಯಾನರ್ ಅನ್ನು ಚಿಕ್ಕ ಬಂಡಿಗೆ ಅಂಟಿಸಿ ಬೆನ್ನಿಗೆ ಕಟ್ಟಿಕೊಂಡು ದೇಶ ಸುತ್ತುತ್ತಿದ್ದಾರೆ. ಅವರ ಬಂಡಿಗೆ ಎರಡು ಭಾರತದ ತ್ರಿವರ್ಣ ಧ್ವಜವನ್ನು ಕಟ್ಟಿ ಹಾರಿಸುವುದು ವಿಶೇಷವಾಗಿದೆ.

ಆಗಸ್ಟ್‌ 15ರಂದು ಉತ್ತರಖಂಡದಿಂದ ಹೊರಟ ಅವರು ನವೆಂಬರ್‌ 13 ರಂದು ಚನ್ನೈಗೆ ಹೋಗುವ ಮಾರ್ಗವಾಗಿ ಕರ್ನಾಟಕದ ಬೆಳಗಾವಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ವಿಡಿಯೋ ನೋಡಿ

 

ನಾನು ರುದ್ರಪುರದಿಂದ ಬರುತ್ತಿದ್ದೇನೆ. ಜೈಪುರ ಮತ್ತು ಮುಂಬೈ ಮೂಲ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದೇನೆ.  ಚನ್ನೈ-ಕಲ್ಕತ್ತಾ ಮುಗಿಸಿ ದೆಹಲಿಗೆ ತಲುಪುತ್ತೇನೆ. ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ನನ್ನ ಹಕ್ಕೊತ್ತಾಯ. ಮುಂದುವರಿದ ಬಹಳಷ್ಟು ದೇಶಗಳು ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸುತ್ತವೆ. ಇವಿಯಂನಿಂದ ಚುನಾವಣಾ ಅಕ್ರಮ ನಡೆದು ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹಾಗಾಗಿ ಪ್ರಜಾಪ್ರಭುತ್ವ ರಕ್ಷಿಸಲು ನಾನು ಈ ಯಾತ್ರಾ ಹೋರಾಟ ಕೈಗೊಂಡಿದ್ದೇನೆ ಎನ್ನುತ್ತಾರೆ.

ಇದು ಅದಾನಿ ಮತ್ತು ಅಂಬಾನಿಯವರ ಗುಲಾಮಿ ಸರ್ಕಾರವಾಗಿದೆ. ಅವರಿಗಾಗಿ ಕೆಲಸ ಮಾಡುತ್ತಾರೆ. ಮೋದಿಯವರು ಜನರ ಓಟಿನಿಂದ ಗೆದ್ದಿಲ್ಲ. ಹಾಗಾಗಿ ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದಾರೆ. ಇದರಿಂದ ದೇಶ ಹಾಳಾಗುತ್ತಿದೆ ಎಂದಿದ್ದಾರೆ. ಯುವಜನರು ಮೋದಿಗೆ ಓಟು ಹಾಕಿದ್ದಾರೆ. ಇನ್ನು ಅವರು ಪಕೋಡಾ ಮಾರಬೇಕಷ್ಟೆ ಎಂದು ಚಟಾಕಿ ಹಾರಿಸಿದ್ದಾರೆ.

ಅವರಿಗೆ ಹೋದಲೆಲ್ಲಾ ಜನ ಬೆಂಬಲ ನೀಡಿದ್ದಾರೆ ಮಾತ್ರವಲ್ಲ ಅವರಿಗೆ ಊಟ ವಸತಿ ನೀಡಿ ಸಹಕರಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ. ಈಗಾಗಲೇ ಮೂರು ತಿಂಗಳು ಪೂರೈಸಿದ್ದಾರೆ. ನೋಡೋಣ ಮುಂದೆ ಏನಾಗುತ್ತದೆ ಎಂದು…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...