Homeಚಳವಳಿಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : 'ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್' ನೋಂದಾಯಿಸಿದ ಸರ್ಕಾರ

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದ ಕಾರ್ಮಿಕರ ಸುದೀರ್ಘ ಹೋರಾಟಕ್ಕೆ ಮಣಿದ ತಮಿಳುನಾಡು ಕಾರ್ಮಿಕ ಇಲಾಖೆಯು ಜನವರಿ 27, ಸೋಮವಾರದಂದು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ ಸಿಕ್ಕಂತಾಗಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಸೆಪ್ಟೆಂಬರ್ 9, 2024ರಿಂದ ಅಕ್ಟೋಬರ್ 15, 2024ರವರೆಗೆ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಸೆಂಟರ್ ಆಫ್‌ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಇವರಿಗೆ ಸಾಥ್ ನೀಡಿತ್ತು.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿತ್ತು.

ಒಕ್ಕೂಟದ ನೋಂದಣಿಯು ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿತ್ತು. ಅವರು ಕಂಪನಿಯೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕಾದರೆ ಅಥವಾ ಅನ್ಯಾಯವನ್ನು ಪ್ರಶ್ನಿಸಬೇಕಾದರೆ ಸಾಮೂಹಿಕ ಧ್ವನಿಯ ಅಗತ್ಯವಿತ್ತು.

ಪ್ರತಿಭಟನೆ ಪ್ರಾರಂಭಗೊಂಡ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕಂಪನಿಯು ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಗಿತ್ತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದು ಹಾಕಲಾಗಿತ್ತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಕಂಪನಿಯ ಹೆಸರನ್ನು ಬಳಸುವುದರಿಂದ ಕಂಪನಿಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸ್ಯಾಮ್‌ಸಂಗ್ ಇಂಡಿಯಾ ವಾದಿಸಿತ್ತು. “ಸ್ಯಾಮ್‌ಸಂಗ್ ಒಂದು ಅಂತಾರಾಷ್ಟ್ರೀಯ ಕಂಪನಿ. ಕಾರ್ಮಿಕರು ಒಕ್ಕೂಟ ರಚಿಸುವ ಹಕ್ಕನ್ನು ಹೊಂದಿದ್ದರೂ, ಸ್ಯಾಮ್‌ಸಂಗ್ ಹೆಸರನ್ನು ಬಳಸುವ ಮೂಲಭೂತ ಹಕ್ಕನ್ನು ಅವರು ಹೊಂದಿಲ್ಲ. ಮುಷ್ಕರದಿಂದಾಗಿ ನಮಗೆ 100 ಮಿಲಿಯನ್ ಡಾಲರ್ ನಷ್ಟವಾಗಿದೆ” ಎಂದು ಕಂಪನಿಯ ವಕೀಲರು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದರು.

ಡಿಸೆಂಬರ್ 5, 2024ರಂದು, ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳಲ್ಲಿ ಒಕ್ಕೂಟದ ನೋಂದಣಿ ಬಗ್ಗೆ ನಿರ್ಧರಿಸುವಂತೆ ನಿರ್ದೇಶನ ನೀಡಿತ್ತು. ಜನವರಿ 27, 2025ರಂದು ಕಾರ್ಮಿಕ ಇಲಾಖೆಯು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಜಯ ದೊರೆತಿದೆ.

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...