Homeಮುಖಪುಟಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಅವರ ಪುತ್ರ ಮಹಾರಾಷ್ಟ್ರದ ಮಾಜಿ ಶಾಸಕ ಜೀಶನ್ ಸಿದ್ದಿಕ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳನ್ನು ಹೆಸರಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ತಂದೆಯ ಹತ್ಯೆಯ ತನಿಖೆಯ ಸಮಯದಲ್ಲಿ ಬಾಂದ್ರಾದಲ್ಲಿನ ಕೊಳೆಗೇರಿ ಅಭಿವೃದ್ಧಿ ಯೋಜನೆಗಳ ಸಮಸ್ಯೆಗಳನ್ನು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ. ಬಾಬಾ ಸಿದ್ದೀಕಿ ಹತ್ಯೆ ತನಿಖೆ

ಸಂದರ್ಭವೊಂದರಲ್ಲಿ ಡೆವಲಪರ್ ಒಬ್ಬ ತನ್ನ ತಂದೆಯ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಜೀಶನ್ ಸಿದ್ದಿಕ್ ಪೊಲೀಸರಿಗೆ ತಿಳಿಸಿದ್ದಾರೆ. ಪುನರಾಭಿವೃದ್ಧಿ ಯೋಜನೆಗಳಿಗಾಗಿ ಅನೇಕ ಡೆವಲಪರ್‌ಗಳು ತಮ್ಮ ತಂದೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಇದೇ ವೇಳೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 12, 2024 ರಂದು ಮಾಜಿ ರಾಜ್ಯ ಸಚಿವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯ ಭಾಗವಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಬಾಬಾ ಸಿದ್ದಿಕಿ (66) ಅವರನ್ನು ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ತಮ್ಮ ಮಗನ ಕಚೇರಿಯ ಹೊರಗೆ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೀಡಾಗಿದ್ದಾರೆ. ಬಾಬಾ ಸಿದ್ದೀಕಿ ಹತ್ಯೆ ತನಿಖೆ

ಮುಂಬೈನ ಬಾಂದ್ರಾ ಪ್ರದೇಶದ ಕೊಳೆಗೇರಿ ನಿವಾಸಿಗಳ ಹಕ್ಕುಗಳಿಗಾಗಿ ತಾನು ಮತ್ತು ತನ್ನ ತಂದೆ ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಜೀಶನ್ ಸಿದ್ದಿಕ್ ಪೊಲೀಸರಿಗೆ ತಿಳಿಸಿದ್ದು, ಪುನರಾಭಿವೃದ್ಧಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

“ನನ್ನ ತಂದೆಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದ ಅನೇಕ ಡೆವಲಪರ್‌ಗಳು ಇದ್ದಾರೆ. ನನ್ನ ತಂದೆಗೆ ಅವರ ದೈನಂದಿನ ಕೆಲಸದ ಬಗ್ಗೆ ಡೈರಿ ಬರೆಯುವ ಅಭ್ಯಾಸವಿತ್ತು. ಕೊಲೆಯಾದ ದಿನ ಸಂಜೆ 5.30 ರಿಂದ 6 ರ ಸುಮಾರಿಗೆ ಮೋಹಿತ್ ಕಾಂಬೋಜ್ (ಬಿಜೆಪಿ ಕಾರ್ಯಕರ್ತ) ನನ್ನ ತಂದೆಯನ್ನು ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದರು ಎಂದು ನನಗೆ ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

ಮುಂದ್ರಾ ಬಿಲ್ಡರ್ಸ್‌ನ ಬಾಂದ್ರಾದಲ್ಲಿನ ಯೋಜನೆಗೆ ಸಂಬಂಧಿಸಿದಂತೆ ಮೋಹಿತ್ ನನ್ನ ತಂದೆಯನ್ನು ಭೇಟಿಯಾಗಲು ಬಯಸಿದ್ದರು ಎಂದು ಜೀಶನ್ ಅವರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಎಸ್‌ಆರ್‌ಎ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳೊಂದಿಗೆ ನಡೆದ ಸಭೆಯ ಸಮಯದಲ್ಲಿ ಬಿಲ್ಡರ್ ಒಬ್ಬರು ನನ್ನ ತಂದೆಯ ಬಗ್ಗೆ ನಿಂದನೀಯ ಪದಗಳನ್ನು ಬಳಸಿದ್ದಾರೆ. ನನ್ನ ತಂದೆಯ ಕೊಲೆಯ ತನಿಖೆಯಲ್ಲಿ ಮೇಲೆ ತಿಳಿಸಲಾದ ಎಲ್ಲಾ ವಿಷಯಗಳನ್ನು ವಿವರವಾಗಿ ತನಿಖೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಜೀಸರ್ ಸಿದ್ದೀಕಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಶೇಷ ಎಂಸಿಒಸಿಎ ನ್ಯಾಯಾಲಯಕ್ಕೆ 4,500 ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬಂಧಿತ 26 ಆರೋಪಿಗಳ ವಿರುದ್ಧ ದಾಖಲಾಗಿದ್ದು, ಶುಭಂ ಲೋಂಕರ್, ಯಾಸಿನ್ ಅಖ್ತರ್ ಮತ್ತು ಅನ್ಮೋಲ್ ಬಿಷ್ಣೋಯ್ ಎಂಬ ಮೂವರು ವ್ಯಕ್ತಿಗಳನ್ನು ವಾಂಟೆಡ್ ಆರೋಪಿಗಳೆಂದು ಆರೋಪಿಸಲಾಗಿದೆ. ಎಲ್ಲಾ ಆರೋಪಿಗಳ ಮೇಲೆ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...