Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...