Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...