Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...