Homeಮುಖಪುಟಮುಸ್ಲಿಮರು ಆ್ಯಪಲ್ ವಾಚ್ ಕದ್ದರೆಂದು ಕೋಮು ಬಣ್ಣದ ಸುಳ್ಳು ಕಥೆ ಹೆಣೆದ ವೈದ್ಯ

ಮುಸ್ಲಿಮರು ಆ್ಯಪಲ್ ವಾಚ್ ಕದ್ದರೆಂದು ಕೋಮು ಬಣ್ಣದ ಸುಳ್ಳು ಕಥೆ ಹೆಣೆದ ವೈದ್ಯ

- Advertisement -
- Advertisement -

ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳು ತನ್ನ ಆ್ಯಪಲ್ ವಾಚ್ ಕಳವು ಮಾಡಿದ್ದಾರೆ ಎಂದು ವೈದ್ಯರೊಬ್ಬರು ಸುಳ್ಳು ಆರೋಪ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ವೈದ್ಯನ ಆರೋಪದ ಬಗ್ಗೆ ಪರಿಶೀಲನೆ ನಡೆಸಿರುವ ಭದ್ರತಾ ತಂಡ ಸಿಐಎಸ್‌ಎಫ್‌, ಅವರ ಆರೋಪ ಸುಳ್ಳು ಎಂದಿದೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ತನ್ನ ಆಪಲ್ ವಾಚ್ ಕಳ್ಳತನವಾಗಿದೆ ಎಂದು ಡಾ.ತುಷಾರ್ ಮೆಹ್ತಾ ಎಂಬವರು ಜನವರಿ 25ರಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದರು. ಸುಹೈಬ್ ಮತ್ತು ಎಂ.ಡಿ ಸಾಕಿಬ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಆಪಾದಿತ ಕಳ್ಳತನದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದ್ದರು. ಈ ಕುರಿತು ವಾಸ್ತವಾಂಶ ಪರಿಶೀಲನೆ ನಡೆಸದೆ ಮಾಧ್ಯಮಗಳು ಧಾವಂತದಲ್ಲಿ ಸುದ್ದಿ ಪ್ರಕಟಿಸಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ತುಷಾರ್ ಮೆಹ್ತಾ ಅವರ ಪೋಸ್ಟ್ ಚರ್ಚೆಗೆ ಒಳಗಾಗುತ್ತಿದ್ದಂತೆ ಪರಿಶೀಲನೆ ನಡೆಸಿದ ಸಿಐಎಸ್‌ಎಫ್‌, ಯಾವುದೇ ಕಳ್ಳತನದ ಘಟನೆಗಳು ನಡೆದಿಲ್ಲ ಎಂದಿದೆ.

ಡಾ.ತುಷಾರ್ ಮೆಹ್ತಾ ಪೋಸ್ಟ್‌ನಲ್ಲಿ ಏನಿತ್ತು?

“ಇಂದು ವಿಚಿತ್ರ ಮತ್ತು ಆಘಾತಕಾರಿ ಘಟನೆಯೊಂದು ನಡೆಯಿತು. ನಾನು ದೆಹಲಿ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗಾಗಿ ನನ್ನ ಆ್ಯಪಲ್ ವಾಚ್‌ನ್ನು ಟ್ರೇನಲ್ಲಿ ಇರಿಸಿದ್ದೆ. ಸ್ಕ್ಯಾನರ್ ದಾಟಿ ಮುಂದೆ ಬಂದಾಗ ನಾನು ವಸ್ತುಗಳನ್ನು ಮತ್ತೆ ನನ್ನ ಲ್ಯಾಪ್‌ಟಾಪ್ ಬ್ಯಾಗ್‌ಗೆ ತುಂಬಲು ಪ್ರಾರಂಭಿಸಿದೆ. ಈ ವೇಳೆ ಏನೋ ಕಾಣೆಯಾಗಿದೆ ಎಂದು ನನಗೆ ಅನಿಸಿತು. ಆಗ ನನ್ನ ವಾಚ್‌ ಕಾಣಿಸುತ್ತಿಲ್ಲ ಎಂಬುವುದು ನನ್ನ ಗಮನಕ್ಕೆ ಬಂತು. ನಾನು ಅಲ್ಲಿ ನಿಂತಿದ್ದ ಸಿಐಎಸ್‌ಎಫ್‌ ಸಿಬ್ಬಂದಿಗೆ ಈ ಬಗ್ಗೆ ಕೇಳಿದೆ. ಅವರು ನನ್ನ ಬ್ಯಾಗ್, ಪಾಕೆಟ್ ಇತ್ಯಾದಿಗಳನ್ನು ಮತ್ತೆ ನೋಡುವಂತೆ ಹೇಳಿದರು. ಅದನ್ನು ನಾನು ಮೊದಲೇ ಪರಿಶೀಲಿಸಿದ್ದೆ, ನಾನು ಕುತೂಹಲದಿಂದ ತಿರುಗಿ ನಡೆದುಕೊಂಡು ಹೋಗುವಾಗ ಯಾರೋ ನನ್ನತ್ತ ಹಿಂತಿರುಗಿ ನೋಡುತ್ತಿರುವುದನ್ನು ನೋಡಿದೆ. ನಾನು ಆ ವ್ಯಕ್ತಿಯನ್ನು ಹಿಂಬಾಲಿಸಿದೆ. ಕೆಲವು ಹೆಜ್ಜೆ ಮುಂದೆ ನಡೆದಾಗ, ನಾನು ಆ ವ್ಯಕ್ತಿ ವಾಚ್ ಅಂಗಡಿಯೊಂದರಲ್ಲಿ ನಿಂತಿರುವುದನ್ನು ಗಮನಿಸಿದೆ. ನಾನು ತಕ್ಷಣ ಅವನ ಬಳಿಗೆ ಹೋಗಿ ಅವನ ಪ್ಯಾಂಟ್ ಜೇಬಿನಲ್ಲಿದ್ದ ವಾಚ್ ತೆಗೆದುಕೊಂಡೆ. ಈ ವೇಳೆ ಸಂಬಂಧವಿಲ್ಲದಿದ್ದರೂ ವಾಚ್ ಅಂಗಡಿಯವ ನನ್ನ ಜೊತೆ ಕೆಟ್ಟದಾಗಿ ವರ್ತಿಸಿದ. ಇದರಿಂದಾಗಿ ಅವರಿಬ್ಬರು ಮೊದಲೇ ಪರಿಚಯಸ್ಥರು ಎಂದು ನನಗೆ ಮನವರಿಕೆಯಾಯಿತು. ಬಳಿಕ ನಮ್ಮ ನಡುವೆ ವಾಗ್ವಾದ ನಡೆಯಿತು. ಅಷ್ಟರಲ್ಲಿ ಇನ್ನೋರ್ವ ಅಲ್ಲಿಂದ ಪರಾರಿಯಾಗಿದ್ದಾನೆ. ವಿಮಾನಕ್ಕೆ ತಡವಾಗಿದ್ದರಿಂದ ನಾನು ಅಲ್ಲಿಂದ ಹೊರಟು ಬಂದೆ. ಈ ವೇಳೆ ಸಿಐಎಸ್‌ಎಫ್‌ ಸಿಬ್ಬಂದಿ ಅಂಗಡಿಯವನ ಜೊತೆ ಬಂದು ನಾನು ಕೆಟ್ಟ ವರ್ತನೆ ಮಾಡಿದ್ದೇನೆ ಎಂದು ಕ್ಷಮೆ ಕೇಳುವಂತೆ ಸೂಚಿಸಿದ್ದಾರೆ. ಈ ವೇಳೆ ನಾನು ಸಿಐಎಸ್‌ಎಫ್‌ನ ಹಿರಿಯ ಅಧಿಕಾರಿಗೆ ಕರೆ ಮಾಡಿ ಮಾತನಾಡಿದೆ. ಆ ಬಳಿಕ ಸಿಐಎಸ್‌ಎಫ್‌ ಸಿಬ್ಬಂದಿ ನನಗೆ ತೆರಳಲು ಅನುವು ಮಾಡಿಕೊಟ್ಟರು. ವಾಚ್ ಅಂಗಡಿಯವನ ಹೆಸರು ಸುಹೈಬ್ ಮತ್ತು ಕಳ್ಳತನ ಮಾಡಿದ ವ್ಯಕ್ತಿಯ ಹೆಸರು ಎಂ.ಡಿ ಸಾಕಿಬ್. ಭದ್ರತಾ ತಪಾಸಣೆ ವೇಳೆ ನಿಮ್ಮ ವಸ್ತುಗಳ ಬಗ್ಗೆ ದಯವಿಟ್ಟು ಗಮನ ಇಟ್ಟುಕೊಳ್ಳಿ” ಎಂದು ಡಾ.ತುಷಾರ್ ಮೆಹ್ತಾ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ವಾಸ್ತವವೇನು?

ಡಾ.ತುಷಾರ್ ಮೆಹ್ತಾ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿಐಎಸ್‌ಎಫ್‌ ಸಿಬ್ಬಂದಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿ ಈ ಬಗ್ಗೆ ತನಿಖೆ ನಡೆಸಿದೆ. ಈ ವೇಳೆ ಡಾ. ಮೆಹ್ತಾ ಅವರೇ ಟ್ರೇಯಿಂದ ತಮ್ಮ ವಾಚ್‌ನ್ನು ತೆಗೆದುಕೊಂಡು ಬೋರ್ಡಿಂಗ್ ಗೇಟ್‌ಗೆ ಹೋಗುವ ಮೊದಲು ಅದನ್ನು ಧರಿಸಿದ್ದರು ಎನ್ನುವುದು ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಮೆಹ್ತಾ ಹೇಳಿರುವಂತೆ ಯಾವುದೇ ಸಿಐಎಸ್‌ಎಫ್‌ ಸಿಬ್ಬಂದಿಯೊಂದಿಗೆ ಅವರು ಮಾತುಕತೆ ನಡೆಸಿರುವ ಬಗ್ಗೆ ಅಥವಾ ಇತರ ವ್ಯಕ್ತಿಗಳ ಅನುಮಾನಾಸ್ಪದ ನಡವಳಿಕೆಯ ಬಗ್ಗೆ ಪುರಾವೆಗಳಿಲ್ಲ ಎಂದು ಅಧಿಕೃತ ಹೇಳಿಕೆಯಲ್ಲಿ ಸಿಐಎಸ್‌ಎಫ್‌ ಸ್ಪಷ್ಟಪಡಿಸಿದೆ.

ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಕೂಡ ಸಿಐಎಸ್‌ಎಫ್‌ ಪರಿಶೀಲನೆ ನಡೆಸಿ ವಾಸ್ತವಾಂಶವನ್ನು ಪತ್ತೆ ಹಚ್ಚಿರುವುದನ್ನು ಒಪ್ಪಿಕೊಂಡಿದೆ.

ಸಿಐಎಸ್‌ಎಫ್‌ ವಾಸ್ತವಾಂಶ ಪತ್ತೆ ಹಚ್ಚಿದ ಬಳಿಕ ಡಾ. ಮೆಹ್ತಾ ತಮ್ಮ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಡಾ.ತುಷಾರ್ ಮೆಹ್ತಾ ಅವರ ಸುಳ್ಳು ಆರೋಪ ಮತ್ತು ಆ ಬಳಿಕ ಸಿಐಎಸ್‌ಎಫ್‌, ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಸ್ಪಷ್ಟೀಕರಣದ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್‌ಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ OpIndia (ಓಪ್ ಇಂಡಿಯಾ) “ದೆಹಲಿ ವಿಮಾನ ನಿಲ್ದಾಣದಲ್ಲಿ ಸುಹೈಬ್ ಮತ್ತು ಸಾಕಿಬ್ ತನ್ನ ವಾಚ್ ಕದ್ದಿರುವುದಾಗಿ ವೈದ್ಯ ಡಾ. ತುಷಾರ್ ಮೆಹ್ತಾ ಆರೋಪಿಸಿದ್ದಾರೆ” ಎಂದು ಜನವರಿ 27ರಂದು ಸುದ್ದಿ ಪ್ರಕಟಿಸಿದೆ. ಆದರೆ, ಜನವರಿ 25ರಂದೇ ಆ ರೀತಿಯ ಘಟನೆ ನಡೆದಿಲ್ಲ ಎಂದು ಸಿಐಎಸ್‌ಎಫ್‌ ಸ್ಪಷ್ಟನೆ ಕೊಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ “ಸಿಐಎಸ್‌ಎಫ್‌ ಸ್ಪಷ್ಟೀಕರಣದ ಬಳಿಕವೂ ಓಪ್ ಇಂಡಿಯಾ ಈ ರೀತಿ ಸುದ್ದಿ ಪ್ರಕಟಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ, ಉನ್ನತ ಮಟ್ಟದ ಅಕ್ಷರಸ್ಥ ವೈದ್ಯ ಎನ್ನಲಾದ ವ್ಯಕ್ತಿ ಇಬ್ಬರು ಮುಸ್ಲಿಂ ವ್ಯಕ್ತಿಗಳ ಹೆಸರುಗಳನ್ನು ಉಲ್ಲೇಖಿಸಿ ಸುಳ್ಳಾರೋಪ ಮಾಡಿರುವುದು ವಿಪರ್ಯಾಸ. ಅವರು ಯಾವ ಕಾರಣಕ್ಕೆ ಕೋಮು ಬಣ್ಣದ ಸುಳ್ಳು ಕಥೆ ಕಟ್ಟಿದರು ಎಂದು ಗೊತ್ತಾಗಿಲ್ಲ.

ಸುಳ್ಳು ಸುದ್ದಿ ಹಬ್ಬಿದ ಡಾ. ಮೆಹ್ತಾ ವಿರುದ್ಧ ಪೊಲೀಸ್ ದೂರು ದಾಖಲಿಸಲು ಸಿಐಎಸ್‌ಎಫ್ ಮತ್ತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಚಿಂತನೆ ನಡೆಸುತ್ತಿವೆ ಎಂದು ವರದಿಯಾಗಿದೆ.

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...