Homeಮುಖಪುಟಮಹಾರಾಷ್ಟ್ರ| ಅಪರೂಪದ ವೈದ್ಯಕೀಯ ವಿದ್ಯಮಾನ; ಜನಿಸಲಿರುವ ಮಗುವಿನೊಳಗೆ ಭ್ರೂಣ ಪತ್ತೆ!

ಮಹಾರಾಷ್ಟ್ರ| ಅಪರೂಪದ ವೈದ್ಯಕೀಯ ವಿದ್ಯಮಾನ; ಜನಿಸಲಿರುವ ಮಗುವಿನೊಳಗೆ ಭ್ರೂಣ ಪತ್ತೆ!

- Advertisement -
- Advertisement -

ಅತ್ಯಂತ ಅಪರೂಪದ ವೈದ್ಯಕೀಯ ವಿದ್ಯಮಾನದಲ್ಲಿ, ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಹುಟ್ಟಲಿರುವ ಮಗುವಿನ ಹೊಟ್ಟೆಯೊಳಗೊಂದು ಬ್ರೂಣ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ 32 ವರ್ಷದ ಮಹಿಳೆಯೊಬ್ಬರು ‘ಸೋನೋಗ್ರಫಿ’ಗೆ ಒಳಗಾದಾಗ ಸರ್ಕಾರಿ ಆಸ್ಪತ್ರೆಯಲ್ಲಿ ‘ಭ್ರೂಣದಲ್ಲಿ ಭ್ರೂಣ’ ಪ್ರಕರಣ ಪತ್ತೆಯಾಗಿದೆ. ಈ ಅಪರೂಪದ ಜನ್ಮಜಾತ ಅಸಂಗತತೆಯನ್ನು ವಿಶ್ವಾದ್ಯಂತ ಸುಮಾರು 200 ಪ್ರಕರಣಗಳಲ್ಲಿ ಮಾತ್ರ ದಾಖಲಿಸಲಾಗಿದೆ, ಭಾರತದಲ್ಲಿ ಕೇವಲ 15-20 ಪ್ರಕರಣಗಳು ವರದಿಯಾಗಿವೆ.

“ಆರಂಭದಲ್ಲಿ ನನಗೆ ಆಶ್ಚರ್ಯವಾಯಿತು, ನಂತರ ಚಿತ್ರಗಳನ್ನು ಎಚ್ಚರಿಕೆಯಿಂದ ಮರುಪರಿಶೀಲಿಸಿದೆ” ಎಂದು ಭ್ರೂಣವನ್ನು ಕಂಡುಹಿಡಿದ ಸ್ತ್ರೀರೋಗ ತಜ್ಞ ಡಾ. ಪ್ರಸಾದ್ ಅಗರ್ವಾಲ್ ಹೇಳಿದರು.

“ಅದು ಬೆಳವಣಿಗೆಯಾಗುತ್ತಿರಲಿಲ್ಲ, ಇದು ನಿಜಕ್ಕೂ ಭ್ರೂಣದದೊಳಗೊಂದು ಭ್ರೂಣದ ಪ್ರಕರಣವಾಗಿತ್ತು” ಎಂದು ಅವರು ಹೇಳಿದರು.

ಮಹಿಳೆ ತನ್ನ ಒಂಬತ್ತನೇ ತಿಂಗಳ ಗರ್ಭಧಾರಣೆಯಲ್ಲಿದ್ದಳು, ಈ ಅಸಂಗತತೆಯು ಅತ್ಯಂತ ಅಪರೂಪ ಮತ್ತು ಅನಿರೀಕ್ಷಿತತೆಯಿಂದಾಗಿ ಹಿಂದಿನ ಸ್ಕ್ಯಾನ್‌ಗಳಲ್ಲಿ ಪತ್ತೆಯಾಗಲಿಲ್ಲ. “ಹಿಂದಿನ ಸೋನೋಗ್ರಫಿಯಲ್ಲಿ ಇದನ್ನು ಪತ್ತೆಯಾಗಿರಲಿಲ್ಲ. ಏಕೆಂದರೆ, ಇದು ಬಹಳ ಅಪರೂಪದ ಸ್ಥಿತಿಯಾಗಿದ್ದು, ಅಂತಹ ಸ್ಥಿತಿ ಅಸ್ತಿತ್ವದಲ್ಲಿರಬಹುದು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಆದ್ದರಿಂದ, ನಾನು ಒಂದೆರಡು ವೈದ್ಯರಿಂದ ವಿವರವಾದ ಅಧ್ಯಯನವನ್ನು ಮಾಡಿ ಅದನ್ನು ದೃಢಪಡಿಸಿದೆ” ಎಂದು ಡಾ. ಅಗರ್ವಾಲ್ ಹೇಳಿದರು.

“ತಾಯಿಗೆ ಸಾಮಾನ್ಯ ಹೆರಿಗೆಯಾಗುವ ಸಾಧ್ಯತೆಯಿದೆ” ಎಂದು ಬುಲ್ಧಾನಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಭಗವತ್ ಭೂಸಾರಿ ವಿವರಿಸಿದರು. “ಆದರೂ, ಜನನದ ನಂತರ ಮಗುವಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರಬಹುದು” ಎಂದು ಅವರು ಹೇಳಿದರು.

ಈ ಸ್ಥಿತಿಯ ನಿಖರವಾದ ಕಾರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗಿಲ್ಲ. ಆದರೆ, ಇದು ಒಂದೇ ರೀತಿಯ ಅವಳಿಗಳ ಬೆಳವಣಿಗೆಯ ಸಮಯದಲ್ಲಿ ಅಸಹಜತೆಯಿಂದ ಉಂಟಾಗುತ್ತದೆ ಎಂದು ನಂಬಲಾಗಿದೆ. ಪರಾವಲಂಬಿ ಅವಳಿ ಸ್ವತಂತ್ರವಾಗಿ ಬದುಕಲು ಸಾಧ್ಯವಿಲ್ಲವಾದ್ದರಿಂದ ಇದನ್ನು ನಿಜವಾದ ಅವಳಿ ಗರ್ಭಧಾರಣೆಯ ಬದಲು ಬೆಳವಣಿಗೆಯ ಅಸಂಗತತೆ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ; ಆಂಧ್ರ ಪ್ರದೇಶ| ₹1 ಕೋಟಿ ವಿಮೆ ಪಡೆಯಲು ತಂಗಿಯನ್ನೇ ಕೊಂದ ವ್ಯಕ್ತಿ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....