Homeಮುಖಪುಟವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ

ವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ

- Advertisement -
- Advertisement -

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕರಡು ವರದಿ ಮತ್ತು ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಮಾಡಿದ ಆವೃತ್ತಿಯನ್ನು ಬಹುಮತದಿಂದ ಅಂಗೀಕರಿಸಿದೆ ಎಂದು ಅಧ್ಯಕ್ಷ ಜಗದಾಂಬಿಕಾ ಪಾಲ್ ಬುಧವಾರ (ಜ.29) ತಿಳಿಸಿದ್ದಾರೆ.

ಸಮಿತಿಯ 16 ಸದಸ್ಯರು ಕರಡು ವರದಿಯ ಪರ ಮತ ಚಲಾಯಿಸಿದರೆ, 11 ಸದಸ್ಯರು ವಿರೋಧಿಸಿದ್ದಾರೆ ಎಂದು ಪಾಲ್ ಹೇಳಿದ್ದಾರೆ. ಸಂಸದೀಯ ಸಮಿತಿ ಸದಸ್ಯರಿಗೆ ತಮ್ಮ ಭಿನ್ನಾಭಿಪ್ರಾಯ ತಿಳಿಸಲು ಇಂದು ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ.

ಇಲ್ಲಿಯವರೆಗೆ, ತೃಣಮೂಲ ಕಾಂಗ್ರೆಸ್ ಸಂಸದರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ನದಿಮುಲ್ ಹಕ್, ಡಿಎಂಕೆ ಸಂಸದ ಎ ರಾಜಾ, ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಅವರು ಔಪಚಾರಿಕವಾಗಿ ತಮ್ಮ ಭಿನ್ನಾಭಿಪ್ರಾಯವನ್ನು ಸಲ್ಲಿಸಿದ್ದಾರೆ.

ಅಂತಿಮ ವರದಿ ಪರಿಶೀಲಿಸಲು ತಮಗೆ ಕಡಿಮೆ ಸಮಯ ನೀಡಲಾಗಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ಸದಸ್ಯರು, ಕರಡು ವರದಿ ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಟೀಕಿಸಿದ್ದಾರೆ.

ಇದು “ಪ್ರಜಾಪ್ರಭುತ್ವ ವಿರೋಧಿ” ನಡೆ ಎಂದಿರುವ ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್, ಎಲ್ಲಾ ವಿರೋಧ ಪಕ್ಷದ ಸದಸ್ಯರು ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸಲ್ಲಿಸುತ್ತಾರೆ ಎಂದು ಹೇಳಿದ್ದಾರೆ.

ಜಗದಾಂಬಿಕಾ ಪಾಲ್ ಅವರು ಪರಿಷ್ಕೃತ ಮಸೂದೆಯನ್ನು ಗುರುವಾರ (ಜನವರಿ 30) ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸುವ ನಿರೀಕ್ಷೆಯಿದೆ.

ವಕ್ಫ್ (ತಿದ್ದುಪಡಿ) ಮಸೂದೆ- 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ ನಂತರ, ಆಗಸ್ಟ್ 8, 2024 ರಂದು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗಿತ್ತು.

ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು ಜಾರಿಗೆ ತಂದ 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ಸೋಮವಾರ (ಜನವರಿ 27) ಸಂಸದೀಯ ಸಮಿತಿಯು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿದೆ ಮತ್ತು ವಿರೋಧ ಪಕ್ಷದ ಸದಸ್ಯರು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ತಿರಸ್ಕರಿಸಿದೆ.

ಅನುಮೋದಿತ ತಿದ್ದುಪಡಿಗಳಲ್ಲಿ ವಕ್ಫ್‌ ಸಮಿತಿಯಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಒಂದು. ತಿದ್ದುಪಡಿಯ ಪ್ರಕಾರ, ವಕ್ಫ್‌ ಸಮಿತಿಗಳಲ್ಲಿ ಇಬ್ಬರು ಮುಸ್ಲಿಮೇತರರು ಸದಸ್ಯರಾಗಬಹುದು.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳ ಜೊತೆಗೆ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ವಕ್ಪ್‌ನ ಕೆಲ ಹುದ್ದೆಗಳಿಗೆ ನೇಮಿಸಲು ಅವಕಾಶ ನೀಡುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಸದಸ್ಯರನ್ನು ಎರಡರಿಂದ ಮೂರಕ್ಕೆ ಹೆಚ್ಚಿಸುವುದು ತಿದ್ದುಪಡಿಗಳಲ್ಲಿ ಸೇರಿವೆ.

100ನೇ ರಾಕೆಟ್ ಯಶಸ್ವಿ ಉಡಾವಣೆ : ಇಸ್ರೋ ಹೊಸ ಮೈಲಿಗಲ್ಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...