Homeಮುಖಪುಟಎಎಪಿ ನಾಯಕರನ್ನು ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ಗೆ ಹೋಲಿಸಿದ ಪ್ರಧಾನಿ ಮೋದಿ

ಎಎಪಿ ನಾಯಕರನ್ನು ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ಗೆ ಹೋಲಿಸಿದ ಪ್ರಧಾನಿ ಮೋದಿ

- Advertisement -
- Advertisement -

ಯಮುನಾ ನದಿಯಲ್ಲಿ “ವಿಷ” ಬೆರೆಸಲಾಗುತ್ತಿದೆ ಎಂಬ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೆಹಲಿ ಚುನಾವಣೆಯಲ್ಲಿ ತಮ್ಮ ಸೋಲಿನ ಭಯದಿಂದ ಎಎಪಿ (ಆಪ್‌ಡಾ = ವಿಪತ್ತು) ಜನರು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ. ಫೆಬ್ರವರಿ 5 ರ ವಿಧಾನಸಭಾ ಚುನಾವಣೆಗೆ ಮುನ್ನ ಕರ್ತಾರ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನರನ್ನು ವಂಚಿಸುವ ಮೂಲಕ ಕುಖ್ಯಾತಿ ಪಡೆದಿದ್ದ ಸರಣಿ ಕೊಲೆಗಾರ ಚಾರ್ಲ್ಸ್ ಸೋಭರಾಜ್‌ಗೆ ಎಎಪಿ ನಾಯಕರನ್ನು ಹೋಲಿಸಿದ್ದಾರೆ. ಎಎಪಿ ನಾಯಕರನ್ನು

“‘ಶೀಶ್ ಮಹಲ್ ನಿರ್ಮಿಸಿದವರು ಮತ್ತು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಹಣವನ್ನು ಲೂಟಿ ಮಾಡಿದವರು ಬಡವರ ಕಲ್ಯಾಣದ ಬಗ್ಗೆ ಎಂದಿಗೂ ಯೋಚಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಅವರು ದೆಹಲಿಯಲ್ಲಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಈ ಆಪ್‌-ಡಾ ಜನರು ಜನರು ಸಿಕ್ಕಿಹಾಕಿಕೊಳ್ಳುವಷ್ಟು ಮುಗ್ಧತೆಯಿಂದ ಸುಳ್ಳುಗಳನ್ನು ಮಾತನಾಡುತ್ತಾರೆ” ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಾರ್ಲ್ಸ್ ಶೋಭರಾಜ್ ಬಗ್ಗೆ ನೀವು ಕೇಳಿರಬಹುದು, ಅವರು ಪ್ರಸಿದ್ಧ ದರೋಡೆಕೋರರಾಗಿದ್ದರು. ಅವರು ಮುಗ್ಧತೆಯಿಂದ ಜನರನ್ನು ವಂಚಿಸುವುದರಲ್ಲಿ ಎಷ್ಟು ಪರಿಣಿತರಾಗಿದ್ದರು ಎಂದರೆ ಪ್ರತಿ ಬಾರಿಯೂ ಜನರು ಅವರಿಂದ ಮೋಸ ಹೋಗುತ್ತಿದ್ದರು. ಅದಕ್ಕಾಗಿಯೇ ಅಂತಹ ಜನರ ಬಗ್ಗೆ ಪತ್ರಿಯೊಬ್ಬರು ಜಾಗರೂಕರಾಗಿರಬೇಕು” ಎಂದು ಅವರು ಹೇಳಿದ್ದಾರೆ.

“ಆಪ್‌-ಡಾ” ಸರ್ಕಾರದ ನೆಪಗಳು, ನಕಲಿ ಭರವಸೆಗಳು ಹಾಗೂ “ಲೂಟಿ ಮತ್ತು ಸುಳ್ಳುಗಳು” ಕೆಲಸ ಮಾಡುವುದಿಲ್ಲ ಎಂದು ದೆಹಲಿ ಸ್ಪಷ್ಟಪಡಿಸಿದೆ ಎಂದು ಮೋದಿ ಹೇಳಿದ್ದಾರೆ. 25 ವರ್ಷಗಳ ಕಾಂಗ್ರೆಸ್ ಮತ್ತು ಎಎಪಿ ಸರ್ಕಾರಗಳು ಇದ್ದು, ಈ ಬಾರಿ ಸೇವೆ ಸಲ್ಲಿಸಲು ನಮಗೆ ಅವಕಾಶ ನೀಡುವಂತೆ ಮತದಾರರಿಗೆ ಅವರು ಮನವಿ ಮಾಡಿದ್ದಾರೆ.

ಎಎಪಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದ ಮೋದಿ, ಕಳೆದ ಎರಡು ಚುನಾವಣೆಗಳಲ್ಲಿ, ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಭರವಸೆಯ ಮೇರೆಗೆ ಪಕ್ಷವು ಮತಗಳನ್ನು ಕೇಳಿತು. ಆದರೆ ಈಗ ಈ ವಿಷಯವು ಮತಗಳನ್ನು ನೀಡುವುದಿಲ್ಲ ಎಂದು ಹೇಳುತ್ತದೆ, ಇದು ವಂಚನೆ ಮತ್ತು ನಾಚಿಕೆಯಿಲ್ಲದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.

ಎಎಪಿ ಇತಿಹಾಸ, ಹರಿಯಾಣದ ಜನರು ಮತ್ತು ದೇಶ ಮರೆಯದ “ಪಾಪ” ಮಾಡಿದೆ ಎಂದು ಅವರು ತಿಳಿಸಿದ್ದಾರೆ. “ಮಾಜಿ ಮುಖ್ಯಮಂತ್ರಿಯೊಬ್ಬರು ಹರಿಯಾಣದ ಜನರ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಆಪ್‌-ಡಾ ಜನರು ಸೋಲಿನ ಭಯದಿಂದ ಹತಾಶರಾಗಿದ್ದಾರೆ. ಹರಿಯಾಣ ದೆಹಲಿಗಿಂತ ಭಿನ್ನವಾಗಿದೆಯೇ? ಅವರಿಗೆ ದೆಹಲಿಯಲ್ಲಿ ಮಕ್ಕಳು ಮತ್ತು ಸಂಬಂಧಿಕರಿಲ್ಲವೇ? ಅವರು ತಮ್ಮದೇ ಜನರಿಗೆ ವಿಷ ಬೆರೆಸುತ್ತಾರೆಯೇ?” ಎಂದು ಕೇಜ್ರಿವಾಲ್ ಅವರನ್ನು ಟೀಕಿಸುತ್ತಾ ಮೋದಿ ಹೇಳಿದ್ದಾರೆ.

ದೆಹಲಿಯ ಜನರು, ಪ್ರಧಾನಿ ಮೋದಿ, ರಾಯಭಾರ ಕಚೇರಿಗಳಲ್ಲಿರುವ ರಾಜತಾಂತ್ರಿಕರು ಮತ್ತು ರಾಷ್ಟ್ರ ರಾಜಧಾನಿಯಲ್ಲಿರುವ ನ್ಯಾಯಾಧೀಶರು ಹರಿಯಾಣದ ಅದೇ ನೀರನ್ನು ಕುಡಿಯುತ್ತಾರೆ ಎಂದು ಅವರು ಹೇಳಿದ್ದಾರೆ. “ಮೋದಿಗೆ ವಿಷ ನೀಡಲು, ಹರಿಯಾಣ ಬಿಜೆಪಿ ನೀರಿನಲ್ಲಿ ವಿಷ ಬೆರೆಸಿದೆ ಎಂದು ಯಾರಾದರೂ ಭಾವಿಸಲು ಸಾಧ್ಯವೆ? ನೀವು ಏನು ಹೇಳುತ್ತಿದ್ದೀರಿ? ತಪ್ಪುಗಳನ್ನು ಕ್ಷಮಿಸುವುದು ಭಾರತೀಯರ ಸ್ವಭಾವ, ಆದರೆ ದೆಹಲಿ ಅಥವಾ ಭಾರತ ಎರಡೂ ದುರುದ್ದೇಶದಿಂದ ಮಾಡಿದ ಪಾಪಗಳನ್ನು ಕ್ಷಮಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ: ಮನೆ ಜಪ್ತಿಯಿಂದ ಮನನೊಂದಿದ್ದ ಮಹಿಳೆ ವಿಷ ಕುಡಿದು ಸಾವು

ಮೈಕ್ರೋ ಫೈನಾನ್ಸ್ ಕಿರುಕುಳ: ಮನೆ ಜಪ್ತಿಯಿಂದ ಮನನೊಂದಿದ್ದ ಮಹಿಳೆ ವಿಷ ಕುಡಿದು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...