Homeಮುಖಪುಟತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ 2019 ಜಾರಿಗೆ ಬಂದ ನಂತರ ಮುಸ್ಲಿಂ ಮಹಿಳೆಯರು ದಾಖಲಿಸಿರುವ ಪ್ರಕರಣಗಳ ಅಂಕಿ – ಅಂಶಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೋರಿದೆ. ಬಾಕಿ ಇರುವ ತ್ರಿವಳಿ ತಲಾಖ್ ಪ್ರಕರಣಗಳು ಮತ್ತು ಕಾಯ್ದೆಯ ವಿರುದ್ಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಯಾವುದೇ ಅರ್ಜಿಯಗಳ ಅಂಕಿ ಅಂಶವನ್ನು ನ್ಯಾಯಾಲಯ ಕೇಳಿದೆ. ಈ ಕಾನೂನು, ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ಮಾಡುವ ಪದ್ದತಿಯನ್ನು ಅಪರಾಧ ಎಂದು ಹೇಳುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠವು 2019 ರ ಈ ಕಾನೂನನ್ನು, ವಿಶೇಷವಾಗಿ ತ್ರಿವಳಿ ತಲಾಖ್ ಪದ್ಧತಿಯನ್ನು ಅಪರಾಧೀಕರಿಸುವ ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಗಳ ಗುಂಪನ್ನು ವಿಚಾರಣೆ ನಡೆಸುತ್ತಿದೆ. ತ್ರಿವಳಿ ತಲಾಖ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಎರಡೂ ಕಡೆಯಿಂದ ಲಿಖಿತ ವಾದಗಳನ್ನು ಸಲ್ಲಿಸಿ. ನೋಂದಾಯಿಸಲಾದ ಎಫ್‌ಐಆರ್‌ಗಳ ಸಂಖ್ಯೆಯ ಡೇಟಾವನ್ನು ಪರಿಶೀಲಿಸಿ ಮತ್ತು ನಮಗೆ ನೀಡಿ” ಎಂದು ನ್ಯಾಯಾಲಯವು ಸಂಕ್ಷಿಪ್ತ ಪ್ರಾಥಮಿಕ ವಿಚಾರಣೆಯ ನಂತರ ಆದೇಶಿಸಿತು. ಅರ್ಜಿದಾರರು ಪದ್ಧತಿಯ ಅಪರಾಧೀಕರಣವನ್ನು ಮಾತ್ರ ಪ್ರಶ್ನಿಸುತ್ತಿದ್ದಾರೆ ಮತ್ತು ಪದ್ಧತಿಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ನ್ಯಾಯಾಲಯವು ಹೇಳಿದೆ.

“ಇಲ್ಲಿನ ಯಾವುದೇ ವಕೀಲರು ಈ ಪದ್ಧತಿ ಸರಿ ಎಂದು ಹೇಳುತ್ತಿಲ್ಲ ಎಂದು ನನಗೆ ಖಚಿತವಾಗಿದೆ. ಆದರೆ ಅವರು ಹೇಳುತ್ತಿರುವುದು ಈ ಪದ್ಧತಿಯನ್ನು ನಿಷೇಧಿಸಿದಾಗ ಮತ್ತು ಏಕಕಾಲದಲ್ಲಿ ಮೂರು ಬಾರಿ ತಲಾಖ್ ಉಚ್ಚರಿಸುವ ಮೂಲಕ ವಿಚ್ಛೇದನ ನಡೆಯಲು ಸಾಧ್ಯವಿಲ್ಲವೇ ಎಂಬುವುದಾಗಿದೆ” ಎಂದು ಸಿಜೆಐ ಖನ್ನಾ ಹೇಳಿದ್ದಾರೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಈ ಪ್ರತಿಗಾಮಿ ಪದ್ಧತಿ ಮುಂದುವರೆದಿದೆಯೇ ಮತ್ತು ಮಹಿಳೆಯರು ಮುಂದೆ ಬರುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸಲು ಅಂಕಿಅಂಶಗಳು ಮುಖ್ಯವಾಗುತ್ತವೆ ಎಂದು ವಾದಿಸಿದ್ದಾರೆ. “ಮಹಿಳೆಯರನ್ನು ರಕ್ಷಿಸಲು ಇದು ಅಗತ್ಯವಿದ್ದು, ಅದನ್ನು ತಡೆಯುವಂತಿರಬೇಕು. (ಅರ್ಜಿದಾರರು ಎತ್ತಿರುವ) ಅನುಪಾತದ ವಾದದ ಮೇಲೆ, 3 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ವಿಧಿಸುವ ಅನೇಕ (ಇತರ) ಅಪರಾಧಗಳು ಅದರಲ್ಲಿ ಇವೆ” ಎಂದು ಅವರು ವಾದಿಸಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ನಿಜಾಮ್ ಪಾಷಾ, ಬೇರೆ ಯಾವುದೇ ಸಮುದಾಯದಲ್ಲಿ ಹೆಂಡತಿಯನ್ನು ತ್ಯಜಿಸುವುದು ಕ್ರಿಮಿನಲ್ ಅಪರಾಧವಲ್ಲ, ಆದರೆ ಮುಸ್ಲಿಮರಿಗೆ ಮಾತ್ರ ಇದನ್ನು ಕ್ರಿಮಿನಲ್ ಅಪರಾಧವನ್ನಾಗಿ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಎಸ್‌ಜಿ ಮೆಹ್ತಾ “ಇತರ ಸಮುದಾಯಗಳಲ್ಲಿ ತ್ರಿವಳಿ ತಲಾಖ್ ಕೂಡ ಪ್ರಚಲಿತವಾಗಿಲ್ಲ.” ಎಂದು ಹೇಳಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಎಂ.ಆರ್. ಶಂಶಾದ್, ವೈವಾಹಿಕ ಪ್ರಕರಣಗಳಲ್ಲಿ ತಿಂಗಳುಗಟ್ಟಲೆ ಎಫ್‌ಐಆರ್‌ಗಳು ದಾಖಲಾಗುವುದಿಲ್ಲ ಮತ್ತು ಇಲ್ಲಿ ಕೇವಲ ಹೇಳಿಕೆಗಾಗಿ ಎಫ್‌ಐಆರ್ ದಾಖಲಿಸಲಾಗುತ್ತದೆ ಎಂದು ವಾದಿಸಿದರು. ಈ ವೇಳೆ ಮೆಹ್ತಾ ಅವರು, “ಯಾವುದೇ ನಾಗರಿಕ ವಿಭಾಗದಲ್ಲಿ, ಅಂತಹ ಪದ್ಧತಿ ಇಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ನಂತರ ನ್ಯಾಯಾಲಯವು ಈ ಅರ್ಜಿಗಳನ್ನು ‘ಮುಸ್ಲಿಂ ಮಹಿಳೆಯರ ಸಾಂವಿಧಾನಿಕ ನೀತಿಗಳಿಗೆ ಸವಾಲು (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ, 2019’ ಎಂದು ಪ್ರಕರಣಗಳ ಪಟ್ಟಿಯಲ್ಲಿ ತೋರಿಸಲಾಗುವುದು ಎಂದು ಆದೇಶಿಸಿ ಪ್ರಕರಣವನ್ನು ಮುಂದೂಡಿತು.

ಆಗಸ್ಟ್ 2017 ರಲ್ಲಿ, ಶಾಯರಾ ಬಾನೋ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತ್ವರಿತ ತ್ರಿವಳಿ ತಲಾಖ್ (ತಲಾಖ್-ಇ-ಬಿದತ್) ಪದ್ಧತಿಯನ್ನು ಸಂವಿಧಾನಬಾಹಿರ ಮತ್ತು 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಎಂದು ರದ್ದುಗೊಳಿಸಿತ್ತು. ಇದರ ನಂತರ, ಸಂಸತ್ತು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ, 2019 ಅನ್ನು ಜಾರಿಗೆ ತಂದಿತ್ತು. ಈ ಕಾನೂನು ತ್ವರಿತ ತ್ರಿವಳಿ ತಲಾಖ್ ಅನ್ನು ಅಪರಾಧೀಕರಿಸುತ್ತದೆ.

ಇದನ್ನೂಓದಿ:  ದೆಹಲಿ ಚುನಾವಣೆ: ಪ್ರಚಾರಕ್ಕಾಗಿ AIMIMನ ತಾಹಿರ್ ಹುಸೇನ್ ಗೆ 6 ದಿನ ಪೆರೋಲ್

ದೆಹಲಿ ಚುನಾವಣೆ: ಪ್ರಚಾರಕ್ಕಾಗಿ AIMIMನ ತಾಹಿರ್ ಹುಸೇನ್ ಗೆ 6 ದಿನ ಪೆರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...