Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮುಂಬೈನಲ್ಲಿ 2014ರಲ್ಲಿ ನಡೆದಿದ್ದ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಗುರಿಯಾಗಿದ್ದ ಚಂದ್ರಭಾನ್ ಸನಪ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ.

ಸಾಕ್ಷ್ಯಾಧಾರಗಳಲ್ಲಿನ ಪ್ರಮುಖ ಲೋಪಗಳು ಮತ್ತು ಕಾರ್ಯವಿಧಾನದ ನ್ಯೂನತೆಗಳು ಶಿಕ್ಷೆ ರದ್ದುಗೊಳಿಸಲು ಪ್ರಮುಖ ಕಾರಣಗಳಾಗಿವೆ ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯ ಹೇಳಿದೆ.

ವಿಜಯವಾಡದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದಾಗಿದೆ. ಯುವತಿಯ ಭಾಗಶಃ ಸುಟ್ಟುಹೋದ ಮತ್ತು ಕೊಳೆತ ದೇಹವು ಜನವರಿ 16, 2014ರಂದು ಮುಂಬೈನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಪತ್ತೆಯಾಗಿತ್ತು. ತನಿಖಾಧಿಕಾರಿಗಳು ಬೆರಳಿನಲ್ಲಿದ್ದ ಉಂಗುರದ ಮೂಲಕ ಆಕೆಯನ್ನು ಗುರುತಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯು ಉಸಿರುಗಟ್ಟಿದ್ದರಿಂದ ಮತ್ತು ತಲೆ, ಜನನಾಂಗದ ಮೇಲಾದ ತೀವ್ರ ತರದ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಬಯಲಾಗಿತ್ತು.

ಘಟನಾ ಸ್ಥಳದಲ್ಲಿದ್ದ ಸಂತ್ರಸ್ತೆಗೆ ಸೇರಿದ್ದೆಂದು ಹೇಳಲಾದ ಟ್ರಾಲಿ ಬ್ಯಾಗ್ ಮತ್ತು ಆಕೆಯ ಗುರುತಿನ ಚೀಟಿ ಸೇರಿದಂತೆ ಹಲವಾರು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ, ಆರೋಪಿ ಚಂದ್ರಭಾನ್ ಸನಪ್ ಅವರನ್ನು ಬಂಧಿಸಲಾಗಿತ್ತು. ಸಾಂದರ್ಭಿಕ ಸಾಕ್ಷ್ಯಗಳು, ಕುರ್ಲಾದ ಲೋಕಮಾನ್ಯ ತಿಲಕ್ ಟರ್ಮಿನಸ್‌ನ ಸಿಸಿಟಿವಿ ದೃಶ್ಯಾವಳಿಗಳು ಮತ್ತು ನ್ಯಾಯಾಂಗೇತರ ತಪ್ಪೊಪ್ಪಿಗೆಗಳ ಆಧಾರದ ಮೇಲೆ ಪ್ರಾಸಿಕ್ಯೂಷನ್ ಆರೋಪವನ್ನು ರೂಪಿಸಿತ್ತು.

ಆದಾಗ್ಯೂ, ಸುಪ್ರೀಂ ಕೋರ್ಟ್ ಪ್ರಕರಣದಲ್ಲಿನ ಗಂಭೀರ ದೋಷಗಳನ್ನು ಎತ್ತಿ ತೋರಿಸಿದೆ. ಸಿಸಿಟಿವಿ ದೃಶ್ಯಾವಳಿಗಳು ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65-ಬಿ ಅಡಿಯಲ್ಲಿ ಮಾನ್ಯ ಪ್ರಮಾಣಪತ್ರವನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಇದು ಕಾನೂನುಬದ್ಧವಾಗಿ ಸ್ವೀಕಾರಾರ್ಹವಲ್ಲ. ಮರಣದಂಡನೆ ಪ್ರಕರಣಗಳಲ್ಲಿ ಸಾಕ್ಷ್ಯಗಳು ಕಟ್ಟುನಿಟ್ಟಾದ ಕಾನೂನು ಮಾನದಂಡಗಳನ್ನು ಪೂರೈಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಸಾಕ್ಷಿಗಳ ಹೇಳಿಕೆಗಳಲ್ಲಿನ ಅಸಂಗತತೆ, ಸಾಕ್ಷ್ಯಗಳನ್ನು ಪಡೆಯುವಲ್ಲಿನ ವಿಳಂಬ ಮತ್ತು ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದ ಬಗ್ಗೆ ಅನುಮಾನಗಳನ್ನು ನ್ಯಾಯಾಲಯವು ಎತ್ತಿ ತೋರಿಸಿದೆ. ಹೆಚ್ಚುವರಿಯಾಗಿ, ಅತ್ಯಾಚಾರ ಆರೋಪಗಳನ್ನು ಬೆಂಬಲಿಸಲು ವಿಧಿವಿಜ್ಞಾನ ದೃಢೀಕರಣದ ಕೊರತೆಯನ್ನು ನ್ಯಾಯಾಲಯ ಟೀಕಿಸಿದೆ.

ಖುಲಾಸೆ ತೀರ್ಪು ನೀಡುತ್ತಾ, ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರು, ಅಪರಾಧವನ್ನು ಅನುಮಾನಾತೀತವಾಗಿ ಸಾಬೀತುಪಡಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಸಾಂದರ್ಭಿಕ ಸಾಕ್ಷ್ಯಗಳು ಸನಪ್ ಮತ್ತು ಅಪರಾಧ ನಡುವಿನ ಸಂಬಂಧವನ್ನು ಸರಿಯಾಗಿ ರುಜುವಾತು ಮಾಡುತ್ತಿಲ್ಲ. ಇದು ಅನುಮಾನಕ್ಕೆ ಅವಕಾಶ ನೀಡುತ್ತದೆ ಎಂದಿದ್ದಾರೆ.

ಈ ತೀರ್ಪಿನೊಂದಿಗೆ, ಸನಪ್ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ, ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ತನಿಖಾ ವೈಫಲ್ಯಗಳ ಬಗ್ಗೆ ಕಳವಳ ವ್ಯಕ್ತವಾಗಿದೆ.

ಈ ಪ್ರಕರಣದಲ್ಲಿ, ಎರಡು ವಾರಗಳ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ರಜೆಯ ನಂತರ ಆಂಧ್ರ ಪ್ರದೇಶದ ಮಚ್ಲಿಪಟ್ಟಣದಿಂದ ಮುಂಬೈಗೆ ಮರಳಿದ್ದ ಎಸ್ತರ್ ಅನುಹ್ಯ (23) ಎಂಬ ಯುವತಿ ಜನವರಿ 16, 2014 ರಂದು ಮುಂಬೈನ ಕಂಜುರ್ ಮಾರ್ಗ್ ಬಳಿ ಶವವಾಗಿ ಪತ್ತೆಯಾಗಿದ್ದರು.

ಎಸ್ತರ್ ಅನುಹ್ಯ ಅವರು ಮುಂಬೈನಲ್ಲಿ ಟಿಸಿಎಸ್‌ನಲ್ಲಿ ಉದ್ಯೋಗಿಯಾಗಿದ್ದರು ಮತ್ತು ಕೊನೆಯದಾಗಿ ಲೋಕಮಾನ್ಯ ತಿಲಕ್ ಟರ್ಮಿನಸ್ ರೈಲ್ವೆ ನಿಲ್ದಾಣದಿಂದ ಹೊರಬರುವಾಗ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದರು.

ದೆಹಲಿ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...