Homeಮುಖಪುಟಕುಂಭ ಮೇಳದಲ್ಲಿ ಕಾಲ್ತುಳಿತ | ಕನಿಷ್ಠ 15 ಜನರು ಸಾವು ; ವರದಿ

ಕುಂಭ ಮೇಳದಲ್ಲಿ ಕಾಲ್ತುಳಿತ | ಕನಿಷ್ಠ 15 ಜನರು ಸಾವು ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಬುಧವಾರ (ಜ.29) ಬೆಳಗ್ಗಿನ ಜಾವ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

‘ಮೌನಿ ಅಮಾವಾಸ್ಯೆ’ ಪ್ರಯುಕ್ತ ಪವಿತ್ರ ಸ್ನಾನಕ್ಕಾಗಿ (ಎರಡನೇ ಶಾಹಿ ಸ್ನಾನ) ತ್ರಿವೇಣಿ ಸಂಗಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಪ್ರದೇಶದ ಸುಮಾರು 12 ಕಿ.ಮೀ ವ್ಯಾಪ್ತಿಯಲ್ಲಿ ನದಿ ತೀರದಲ್ಲಿ ಮಹಾ ಕುಂಭ ಮೇಳ ಪ್ರಯುಕ್ತ ಲಕ್ಷಾಂತರ ಜನರು ಸೇರಿದ್ದರು. ಬುಧವಾರ ಬೆಳಗಿನ ಜಾವ 1ರಿಂದ 2 ಗಂಟೆಯ ಸುಮಾರಿಗೆ ಕಾಲ್ತುಳಿತ ದುರಂತ ಸಂಭವಿಸಿದೆ. ಈ ವೇಳೆ ಹಲವಾರು ಜನರು ಗಾಯಗೊಂಡಿದ್ದು, ಅನೇಕ ಕುಟುಂಬಗಳು ಬೇರ್ಪಟ್ಟಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುಮಾರು 10 ಮಂದಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಘಟನೆ ನಡೆದ ತಕ್ಷಣ ಆಂಬ್ಯಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಕುಂಭಮೇಳ ಪ್ರದೇಶದ ತಾತ್ಕಾಲಿಕ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಎರಡನೇ ಪವಿತ್ರ ಸ್ನಾನವನ್ನು ತಾತ್ಕಾಲಿಕ ನಿಲ್ಲಿಸಲಾಯಿತು. ಸ್ನಾನ ಮಾಡಿದವರು ಸ್ಥಳದಿಂದ ದೂರ ಹೋಗುವಂತೆ ಅಧಿಕಾರಿಗಳು ಮನವಿ ಮಾಡಿದರು ಎಂದು ವರದಿ ಹೇಳಿದೆ.

ಬೆಳಗಾವಿಯ ಮೂವರು ಸಾವು :

ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50), ಅವರ ಪುತ್ರಿ ಮೇಘಾ ಹತ್ತರವಾಠ (18) ಮತ್ತು ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಎಂಬವರು ಸಾವನ್ನಪ್ಪಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಕೆಲವು ಭಕ್ತರು ಬ್ಯಾರಿಕೇಡ್‌ಗಳನ್ನು ದಾಟಿ ಹಾರಿದ್ದರಿಂದ ಕಾಲ್ತುಳಿತ ಉಂಟಾಯಿತು. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಹಾ ಕುಂಭ ಮೇಳದ ಬಗ್ಗೆ ವದಂತಿಗಳನ್ನು ಹರಡದಂತೆ ಅವರು ಮನವಿ ಮಾಡಿದ್ದಾರೆ.

ವಿಐಪಿ ಸಂಪ್ರದಾಯಕ್ಕೆ ಲಗಾಮು ಹಾಕಿ: ರಾಹುಲ್ ಗಾಂಧಿ

ಕಾಲ್ತುಳಿತ ದುರಂತಕ್ಕೆ ಅಸಮರ್ಪಕ ವ್ಯವಸ್ಥೆ ಮತ್ತು ಸಾಮಾನ್ಯ ಭಕ್ತರ ಬದಲಿಗೆ ವಿಐಪಿ ಚಲನವಲನಕ್ಕೆ ವಿಶೇಷ ಆದ್ಯತೆ ನೀಡಿರುವುದು ಕಾರಣ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರಗಳ ವಿರುದ್ದ ಕಿಡಿಕಾರಿದ್ದಾರೆ. ವಿಐಪಿ ಸಂಪ್ರದಾಯಕ್ಕೆ ಸಂಪೂರ್ಣ ಲಗಾಮು ಹಾಕಬೇಕಿದ್ದು, ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕಿದೆ ಎಂದಿದ್ದಾರೆ.

ಸಾವು ನೋವುಗಳ ಸಂಖ್ಯೆಯ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಮೌನ ವಹಿಸಿದ್ದರೂ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅನೇಕ ಕೇಂದ್ರ ಸಚಿವರು, ಹಲವಾರು ಮುಖ್ಯಮಂತ್ರಿಗಳು ಮತ್ತು ಪಕ್ಷಾತೀತವಾಗಿ ವಿರೋಧ ಪಕ್ಷದ ನಾಯಕರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಕಾಲ್ತುಳಿತದಿಂದಾಗಿ ಮುಂದೂಡಲ್ಪಟ್ಟಿದ್ದ ಅಖಾಡಗಳ ಸಾಂಪ್ರದಾಯಿಕ ಸ್ನಾನ ‘ಅಮೃತ ಸ್ನಾನ’ ಮಧ್ಯಾಹ್ನ 2.30ಕ್ಕೆ ಪುನರಾರಂಭವಾಗಿದೆ ಎಂದು ದಿ ಹಿಂದೂ ವರದಿ ಹೇಳಿದೆ.

ತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....