Homeಕರ್ನಾಟಕಕುಂಭ ಮೇಳದಲ್ಲಿ ಕಾಲ್ತುಳಿತ | ಮೃತರ ಸಂಖ್ಯೆ 30ಕ್ಕೆ ಏರಿಕೆ : ಬೆಳಗಾವಿಯ ನಾಲ್ವರು ಸಾವು

ಕುಂಭ ಮೇಳದಲ್ಲಿ ಕಾಲ್ತುಳಿತ | ಮೃತರ ಸಂಖ್ಯೆ 30ಕ್ಕೆ ಏರಿಕೆ : ಬೆಳಗಾವಿಯ ನಾಲ್ವರು ಸಾವು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೆ (ಜ.30, ಬೆಳಿಗ್ಗೆ 8 ಗಂಟೆಯ ವೇಳೆಗೆ) ಏರಿಕೆಯಾಗಿದೆ. ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಕರ್ನಾಟಕದ ಬೆಳಗಾವಿಯ ನಾಲ್ವರು ಸಾವಿಗೀಡಾಗಿದ್ದಾರೆ.

ಜನವರಿ 29ರಂದು ಬುಧವಾರ ಮೌನಿ ಅಮವಾಸ್ಯೆ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಜನರು ಕುಂಭ ಮೇಳ ನಡೆಯುತ್ತಿರುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಪ್ರದೇಶದಲ್ಲಿ ಜಮಾಯಿಸಿದ್ದರು. ಈ ವೇಳೆ ಜನರ ಒತ್ತಡ ಹೆಚ್ಚಾಗಿ ಬ್ಯಾರಿಕೇಡ್‌ಗಳು ಕುಸಿದಿದೆ. ನಂತರ ನಡೆದ ನೂಕುನುಗ್ಗಲಿನಿಂದ ಅವಘಡ ಸಂಭವಿಸಿದೆ.

“ಬುಧವಾರ ಬೆಳಗ್ಗಿನ ಜಾವ 1 ರಿಂದ 2 ಗಂಟೆಯ ನಡುವಿನ ‘ಬ್ರಹ್ಮ ಮುಹೂರ್ತ’ದಲ್ಲಿ ಪುಣ್ಯ ಸ್ನಾನ (ಎರಡನೇ ಶಾಹಿ ಸ್ನಾನ) ಮಾಡಲು ಅಖಾರ ಮಾರ್ಗದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಬ್ಯಾರಿಕೇಡ್‌ಗಳು ಕುಸಿದು ಬಿದ್ದಿವೆ. ಹಾಗಾಗಿ, ಜನರು ಒಂದು ಬದಿಯಿಂದ ಇನ್ನೊಂದು ಬದಿಗೆ ಧಾವಿಸಿದ್ದಾರೆ. ಈ ವೇಳೆ ಬ್ರಹ್ಮ ಮುಹೂರ್ತ ಸ್ನಾನಕ್ಕಾಗಿ ಕಾಯುತ್ತಿದ್ದ 30 ಜನರು ಕಾಲ್ತುಳಿತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60 ಮಂದಿ ಗಾಯಗೊಂಡಿದ್ದಾರೆ” ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ವೈಭವ್ ಕೃಷ್ಣ ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮೊದಲು ಜನಸಂದಣಿಯನ್ನು ತೆರವುಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಮೃತರನ್ನು ಗುರುತಿಸಿದೆವು ಎಂದು ವೈಭವ್ ಕೃಷ್ಣ ಹೇಳಿದ್ದಾರೆ.

ಮೃತರಲ್ಲಿ ಇದುವರೆಗೆ 25 ಜನರನ್ನು ಗುರುತಿಸಲಾಗಿದೆ. ಅವರಲ್ಲಿ ನಾಲ್ವರು ಕರ್ನಾಟಕದವರು, ಇಬ್ಬರು ಗುಜರಾತ್‌ನವರು ಮತ್ತು ಒಬ್ಬರು ಅಸ್ಸಾಂನವರು. ಕೆಲ ಗಾಯಗೊಂಡ ವ್ಯಕ್ತಿಗಳನ್ನು ಅವರ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದಾರೆ. ಪ್ರಸ್ತುತ 36 ಜನರು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಡಿಐಜಿ ಮಾಹಿತಿ ನೀಡಿದ್ದಾರೆ.

ಬೆಳಗಾವಿಯ ನಾಲ್ವರು ಸಾವು :

ಮಹಾ ಕುಂಭ ಮೇಳದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಅವರ ಮಗಳು ಮೇಘಾ ಹತ್ತರವಾಠ (18), ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮತ್ತು ಶಿವಾಜಿ ನಗರದ ನಿವಾಸಿ ಮಹಾದೇವಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕುಂಭ ಮೇಳದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಬೆಳಗಾವಿ ಮೂಲದವರು

ತಾಯಿ, ಮಗಳು ಜ್ಯೋತಿ ಹತ್ತರವಾಠ ಮತ್ತು ಮೇಘಾ ಹತ್ತರವಾಠ ಅವರು ಮೂರು ದಿನಗಳ ‌ಹಿಂದೆ ಸಾಯಿರಥ ಎಂಬ ಟ್ರಾವೆಲ್ ಏಜೆನ್ಸಿ ಮೂಲಕ 30 ಜನರ ತಂಡದೊಂದಿಗೆ ಮಹಾ ಕುಂಭ ಮೇಳಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.

ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಅವರು ತಮ್ಮ ಪತ್ನಿ ಜೊತೆಗೆ ಕುಂಭ ಮೇಳಕ್ಕೆ ತೆರಳಿದ್ದರು. ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಯಾಗ್‌ರಾಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶಿವಾಜಿ ನಗರದ ನಿವಾಸಿ ಮಹಾದೇವಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ತಲಾ 25 ಲಕ್ಷ ಪರಿಹಾರ

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ. ಸೂಕ್ತ ಬ್ಯಾರಿಕೇಡ್‌ಗಳ ಅಳವಡಿಕೆ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ದುರಂತ ನಡೆದಿರುವುದು ವಿಷಾದನೀಯ ಎಂದಿದ್ದಾರೆ.

ನ್ಯಾಯಾಂಗ ತನಿಖೆ

ಮಹಾ ಕುಂಭ ಮೇಳದ ಕಾಲ್ತುಳಿತ ದುರಂತದ ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಈ ಆಯೋಗದ ನೇತೃತ್ವವನ್ನು ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಹರ್ಷ ಕುಮಾರ್ ವಹಿಸಲಿದ್ದಾರೆ. ಅವಘಡಕ್ಕೆ ಕಾರಣವಾದ ಅಂಶಗಳು ಯಾವುವು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುವುದನ್ನು ಆಯೋಗ ಪರಿಶೀಲಿಸಲಿದೆ.

ಮೌನಿ ಅಮಾವಾಸ್ಯೆಯ ಪ್ರಯುಕ್ತ ಜನವರಿ 29ರಂದು ಸಂಜೆ 6 ಗಂಟೆಯವರೆಗೆ 6.99 ಕೋಟಿಗೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿದೆ. ಮಹಾ ಕುಂಭ ಆರಂಭವಾದಾಗಿನಿಂದ, 260 ದಶಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾಗಿ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಒಂಬತ್ತು ಭಾರತೀಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...