Homeಕರ್ನಾಟಕಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ನಬಾರ್ಡ್ ನೀತಿ, ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ರೈತರಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರದ ನೀತಿಗಳಿಂದಾಗಿ ನಬಾರ್ಡ್ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡದೇ ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತ ಮಾಡಿರುವ ನಬಾರ್ಡ್ ನೀತಿ ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ (ಜ.29) ಆಯೋಜಿಸಿದ್ದ ರೈತರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಬಾರ್ಡ್‌ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಸಾಲಿನಲ್ಲಿ ಕರ್ನಾಟಕಕ್ಕೆ ನೀಡುತ್ತಿದ್ದ ಸಾಲವನ್ನು ಶೇ.58ರಷ್ಟು ಕಡಿತಗೊಳಿಸಿದೆ. ಈ ಮೂಲಕ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು. ಡಿಸಿಸಿ ಬ್ಯಾಂಕ್‌ಗಳ ಸಹಕಾರವೂ ಮಹತ್ವದ್ದಾಗಿದೆ. ಆದರೆ, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು, ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಎಸಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಭೂ-ಸುಧಾರಣಾ ಕಾಯ್ದೆಯ ತಿದ್ದುಪಡಿಯನ್ನು ಹಿಂಪಡೆಯಬೇಕು. ಎಪಿಎಂಸಿ ಕಾಯ್ದೆಯನ್ನು ರೈತ ಸ್ನೇಹಿಯಾಗಿ ಮತ್ತಷ್ಟು ಬಲಪಡಿಸಬೇಕು. ಜಾನುವಾರು ಹತ್ಯೆ ನಿಷೇಧ ಸಂರಕ್ಷಣಾ ಕಾಯ್ದೆಯನ್ನು ರೈತರ ಹಿತದೃಷ್ಠಿಯಿಂದ ವಾಪಸ್ ಪಡೆಯಬೇಕು. ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಸಂಪರ್ಕ ಉಚಿತವಾಗಿರಬೇಕು. ಅಕ್ರಮ-ಸಕ್ರಮ ಹಾಗೂ ಹೊಸ ವಿದ್ಯುತ್ ಸಂಪರ್ಕಗಳಿಗೆ ರೈತರೇ ಪೂರ್ಣ ವೆಚ್ಚ ಭರಿಸುವ ನಿಯಮ ಜಾರಿಗೆ ಬಂದಿದೆ. ಅದನ್ನು ವಾಪಸ್ ಪಡೆದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ರೈತ ಸಂಘದ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಕೈಗೊಂಡ ನಿರ್ಣಯಗಳು 

  • ರೈತರಿಗೆ ಸಾಲ ಮಂಜೂರಾತಿಗೆ ಸಿಬಿಲ್ ಅಂಕಗಳನ್ನು ಮಾನದಂಡವಾಗಿ ಪರಿಗಣಿಸುವುದನ್ನು ಕೈಬಿಡಬೇಕು.
  • ಕೇಂದ್ರ ಸಚಿವರು ಹಾಗೂ ಸಂಸದರು ನಬಾರ್ಡ್ ಮೂಲಕ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿತಗೊಳಿಸಿರುವುದರ ವಿರುದ್ದ ಸಂಸತ್‌ನಲ್ಲಿ ಧ್ವನಿ ಎತ್ತಬೇಕು.
  • ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ, ಕಿರುಕುಳ ನಿಯಂತ್ರಿಸಲು ಕಾನೂನು ರೂಪಿಸಿದರೆ ಸಾಲದು. ರಾಜ್ಯ ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಾಲ ವಸೂಲಿ ಹೆಸರಿನಲ್ಲಿ ನೀಡುವ ಕಿರುಕುಳ ತಪ್ಪಿಸಲು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು.
  • ಋಣಮುಕ್ತ ಕಾಯ್ದೆಗೆ ಜೀವತುಂಬಿ ಕೇರಳ ಮಾದರಿಯಲ್ಲಿ ಜನಸ್ನೇಹಿ ಸರಳ ಸಾಲದ ನೀತಿಯನ್ನು ರೂಪಿಸಬೇಕು.

ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟಿಲ ಕಾರ್ಯಾಧ್ಯಕ್ಷ ಜಿ.ಎಂ ವೀರಸಂಗಯ್ಯ, ಎ.ಎಂ ಮಹೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಎನ್‌.ವಸಂತಕುಮಾರ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಅಧ್ಯಕ್ಷ ನೂರ್ ಶ್ರೀಧರ್, ಹಿರಿಯ ಪತ್ರಕರ್ತ, ಹೋರಾಟಗಾರ ಇಂದೂಧರ ಹೊನ್ನಾಪುರ, ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...