Homeಮುಖಪುಟಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ - ಮಹಾರಾಷ್ಟ್ರ...

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

- Advertisement -
- Advertisement -

ರಾಜ್ಯದಲ್ಲಿ ಮುಂಬರುವ 10 ಮತ್ತು 12 ನೇ ತರಗತಿಯ ರಾಜ್ಯ ಮಂಡಳಿ ಪರೀಕ್ಷೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಮಹಾರಾಷ್ಟ್ರದ ಬಿಜೆಪಿ ನಾಯಕ, ಸಚಿವ ನಿತೇಶ್ ರಾಣೆ ಬುಧವಾರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಒತ್ತಾಯಿಸಿ ಪತ್ರೆ ಬರೆದಿದ್ದು, ಭದ್ರತಾ ಕಳವಳ ಮತ್ತು ಪರೀಕ್ಷೆಯಲ್ಲಿ ನಡೆಸುವ ದುಷ್ಕೃತ್ಯಗಳ ಸಾಧ್ಯತೆಯನ್ನು ಉಲ್ಲೇಖಿಸಿ ಈ ಒತ್ತಾಯ ಮಾಡಿದ್ದಾರೆ. ಇದು ಹಿಂದುತ್ವದ ಸರ್ಕಾರ

ರಾಣೆ ಅವರು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಕೋರಿದ್ದು, ಧಾರ್ಮಿಕ ಉಡುಪುಗಳನ್ನು ಮನೆಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಸೀಮಿತಗೊಳಿಸಬೇಕು ಎಂದು ಹೇಳಿದ್ದಾರೆ. ಇದು ಹಿಂದುತ್ವದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“10 ಮತ್ತು 12 ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಬುರ್ಖಾ ಧರಿಸಲು ಅವಕಾಶ ನೀಡಬಾರದು. ಅಗತ್ಯವಿದ್ದರೆ, ತಪಾಸಣೆ ನಡೆಸಲು ಮಹಿಳಾ ಪೊಲೀಸ್ ಅಧಿಕಾರಿಗಳು ಅಥವಾ ಮಹಿಳಾ ಸಿಬ್ಬಂದಿಯನ್ನು ನೇಮಿಸಬೇಕು. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ನಿರ್ಣಾಯಕವಾಗಿವೆ ಮತ್ತು ಅವುಗಳನ್ನು ಪಾರದರ್ಶಕವಾಗಿ, ವಂಚನೆಯಂತಹ ಯಾವುದೇ ದುಷ್ಕೃತ್ಯಗಳಿಂದ ಮುಕ್ತವಾಗಿ ನಡೆಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪರೀಕ್ಷಾರ್ಥಿಗಳು ಬುರ್ಖಾ ಧರಿಸಲು ಅವಕಾಶ ನೀಡಿದರೆ, ವಂಚನೆಗೆ ಎಲೆಕ್ಟ್ರಾನಿಕ್ ಸಾಧನಗಳು ಅಥವಾ ಇತರ ವಿಧಾನಗಳನ್ನು ಬಳಸಲಾಗುತ್ತಿದೆಯೇ ಎಂದು ನಿರ್ಧರಿಸುವುದು ಕಷ್ಟಕರವಾಗಿರುತ್ತದೆ. ಯಾವುದೇ ಅಹಿತಕರ ಘಟನೆಯ ಸಂದರ್ಭದಲ್ಲಿ, ಅದು ಸಾಮಾಜಿಕ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗಬಹುದು, ಇದು ಅನೇಕ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ನಿಷೇಧಕ್ಕೆ ಕರೆ ನೀಡಿರುವ ಅವರು, ಯಾವುದೇ ಧರ್ಮಕ್ಕೆ ವಿಶೇಷ ಗೌರವ ನೀಡಬಾರದು ಎಂದು ಅವರು ಹೇಳಿದ್ದಾರೆ. “ಧಾರ್ಮಿಕ ಉಡುಪನ್ನು ಮನೆ ಮತ್ತು ಪೂಜಾ ಸ್ಥಳಗಳಿಗೆ ಸೀಮಿತಗೊಳಿಸಬೇಕು. ಇತರ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಉಡುಪನ್ನು ಶಾಲಾ-ಕಾಲೇಜುಗಳಿಗೆ ತರುವುದಿಲ್ಲ, ಆದರೆ ಮುಸ್ಲಿಮರಿಗೆ ಮಾತ್ರ ಯಾಕೆ ಅವಕಾಶ ನೀಡಬೇಕು” ಎಂದು ಕೇಳಿದ್ದಾರೆ.

ನಿಮ್ಮ ಧರ್ಮವನ್ನು ನಿಮ್ಮ ಮನೆಯಲ್ಲಿ ಮತ್ತು ನಿಮ್ಮ ಧಾರ್ಮಿಕ ಸ್ಥಳಗಳಲ್ಲಿ ಇರಿಸಿ. ಇದು ಹಿಂದುತ್ವ ಸರ್ಕಾರ ಮತ್ತು ಯಾರನ್ನೂ ಸಮಾಧಾನಪಡಿಸುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಪರೀಕ್ಷೆಗಳಲ್ಲಿ ನಕಲು ಮಾಡಲು ಅನುಕೂಲವಾಗುವಂತೆ ಹಿಂದೆ ಬುರ್ಖಾಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಪೇಪರ್ ಚಿಟ್‌ಗಳನ್ನು ಸಾಗಿಸಲು ಬುರ್ಖಾಗಳನ್ನು ಬಳಸಿದ ಘಟನೆಗಳು ನಡೆದಿವೆ. ಇದು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನವಲ್ಲ” ಎಂದು ಅವರು ಹೇಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ಧರಿಸಲು ಅನುಮತಿಸುವ ಯಾವುದೇ ಹಿಂದಿನ ಅಧಿಸೂಚನೆಗಳನ್ನು ಹಿಂಪಡೆಯುವಂತೆ ಅವರು ಸರ್ಕಾರಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಅದಾಗ್ಯೂ, ಶಾಲಾ ಶಿಕ್ಷಣ ಸಚಿವಾಲಯವು ಅವರ ಬೇಡಿಕೆಗೆ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...