Homeಮುಖಪುಟಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ - ಮಹಾರಾಷ್ಟ್ರ...

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

- Advertisement -
- Advertisement -

ರಾಜ್ಯದಲ್ಲಿ ಮುಂಬರುವ 10 ಮತ್ತು 12 ನೇ ತರಗತಿಯ ರಾಜ್ಯ ಮಂಡಳಿ ಪರೀಕ್ಷೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಮಹಾರಾಷ್ಟ್ರದ ಬಿಜೆಪಿ ನಾಯಕ, ಸಚಿವ ನಿತೇಶ್ ರಾಣೆ ಬುಧವಾರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಒತ್ತಾಯಿಸಿ ಪತ್ರೆ ಬರೆದಿದ್ದು, ಭದ್ರತಾ ಕಳವಳ ಮತ್ತು ಪರೀಕ್ಷೆಯಲ್ಲಿ ನಡೆಸುವ ದುಷ್ಕೃತ್ಯಗಳ ಸಾಧ್ಯತೆಯನ್ನು ಉಲ್ಲೇಖಿಸಿ ಈ ಒತ್ತಾಯ ಮಾಡಿದ್ದಾರೆ. ಇದು ಹಿಂದುತ್ವದ ಸರ್ಕಾರ

ರಾಣೆ ಅವರು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಕೋರಿದ್ದು, ಧಾರ್ಮಿಕ ಉಡುಪುಗಳನ್ನು ಮನೆಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಸೀಮಿತಗೊಳಿಸಬೇಕು ಎಂದು ಹೇಳಿದ್ದಾರೆ. ಇದು ಹಿಂದುತ್ವದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“10 ಮತ್ತು 12 ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಬುರ್ಖಾ ಧರಿಸಲು ಅವಕಾಶ ನೀಡಬಾರದು. ಅಗತ್ಯವಿದ್ದರೆ, ತಪಾಸಣೆ ನಡೆಸಲು ಮಹಿಳಾ ಪೊಲೀಸ್ ಅಧಿಕಾರಿಗಳು ಅಥವಾ ಮಹಿಳಾ ಸಿಬ್ಬಂದಿಯನ್ನು ನೇಮಿಸಬೇಕು. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ನಿರ್ಣಾಯಕವಾಗಿವೆ ಮತ್ತು ಅವುಗಳನ್ನು ಪಾರದರ್ಶಕವಾಗಿ, ವಂಚನೆಯಂತಹ ಯಾವುದೇ ದುಷ್ಕೃತ್ಯಗಳಿಂದ ಮುಕ್ತವಾಗಿ ನಡೆಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪರೀಕ್ಷಾರ್ಥಿಗಳು ಬುರ್ಖಾ ಧರಿಸಲು ಅವಕಾಶ ನೀಡಿದರೆ, ವಂಚನೆಗೆ ಎಲೆಕ್ಟ್ರಾನಿಕ್ ಸಾಧನಗಳು ಅಥವಾ ಇತರ ವಿಧಾನಗಳನ್ನು ಬಳಸಲಾಗುತ್ತಿದೆಯೇ ಎಂದು ನಿರ್ಧರಿಸುವುದು ಕಷ್ಟಕರವಾಗಿರುತ್ತದೆ. ಯಾವುದೇ ಅಹಿತಕರ ಘಟನೆಯ ಸಂದರ್ಭದಲ್ಲಿ, ಅದು ಸಾಮಾಜಿಕ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗಬಹುದು, ಇದು ಅನೇಕ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ನಿಷೇಧಕ್ಕೆ ಕರೆ ನೀಡಿರುವ ಅವರು, ಯಾವುದೇ ಧರ್ಮಕ್ಕೆ ವಿಶೇಷ ಗೌರವ ನೀಡಬಾರದು ಎಂದು ಅವರು ಹೇಳಿದ್ದಾರೆ. “ಧಾರ್ಮಿಕ ಉಡುಪನ್ನು ಮನೆ ಮತ್ತು ಪೂಜಾ ಸ್ಥಳಗಳಿಗೆ ಸೀಮಿತಗೊಳಿಸಬೇಕು. ಇತರ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಉಡುಪನ್ನು ಶಾಲಾ-ಕಾಲೇಜುಗಳಿಗೆ ತರುವುದಿಲ್ಲ, ಆದರೆ ಮುಸ್ಲಿಮರಿಗೆ ಮಾತ್ರ ಯಾಕೆ ಅವಕಾಶ ನೀಡಬೇಕು” ಎಂದು ಕೇಳಿದ್ದಾರೆ.

ನಿಮ್ಮ ಧರ್ಮವನ್ನು ನಿಮ್ಮ ಮನೆಯಲ್ಲಿ ಮತ್ತು ನಿಮ್ಮ ಧಾರ್ಮಿಕ ಸ್ಥಳಗಳಲ್ಲಿ ಇರಿಸಿ. ಇದು ಹಿಂದುತ್ವ ಸರ್ಕಾರ ಮತ್ತು ಯಾರನ್ನೂ ಸಮಾಧಾನಪಡಿಸುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಪರೀಕ್ಷೆಗಳಲ್ಲಿ ನಕಲು ಮಾಡಲು ಅನುಕೂಲವಾಗುವಂತೆ ಹಿಂದೆ ಬುರ್ಖಾಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಪೇಪರ್ ಚಿಟ್‌ಗಳನ್ನು ಸಾಗಿಸಲು ಬುರ್ಖಾಗಳನ್ನು ಬಳಸಿದ ಘಟನೆಗಳು ನಡೆದಿವೆ. ಇದು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನವಲ್ಲ” ಎಂದು ಅವರು ಹೇಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ಧರಿಸಲು ಅನುಮತಿಸುವ ಯಾವುದೇ ಹಿಂದಿನ ಅಧಿಸೂಚನೆಗಳನ್ನು ಹಿಂಪಡೆಯುವಂತೆ ಅವರು ಸರ್ಕಾರಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಅದಾಗ್ಯೂ, ಶಾಲಾ ಶಿಕ್ಷಣ ಸಚಿವಾಲಯವು ಅವರ ಬೇಡಿಕೆಗೆ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...