Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...