Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...