Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...