Homeಕರ್ನಾಟಕ‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

- Advertisement -
- Advertisement -

ಬೆಂಗಳೂರು: ಕೋವಿಡ್‌ ಕಾಲದಲ್ಲಿ ವಲಸೆ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ಸತತ ಏಳು ದಿನ 1,700 ಕಿಲೋಮೀಟರ್‌ ಸಂಚರಿಸಿದ ಕಥೆಯನ್ನು ಇಟ್ಟುಕೊಂಡು ನಿರ್ಮಿಸಿರುವ ‘ಸೈಕಲ್‌ ಮಹೇಶ್‌’ ಚಿತ್ರವು ಹಲವು ಕಥೆಗಳನ್ನು ಹೇಳುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ದೇಶಕ ಸುಹೇಲ್‌ ಬ್ಯಾನರ್ಜಿ ತಿಳಿಸಿದರು.

ಗೌರಿ ಲಂಕೇಶ್ ಅವರ ಜನ್ಮ ದಿನ ‘ಗೌರಿ ದಿನ’ ಕಾರ್ಯಕ್ರಮದ ಪ್ರಯುಕ್ತ ಗೌರಿ ಸ್ಮಾರಕ ಟ್ರಸ್ಟ್‌ ಬುಧವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ಸೈಕಲ್‌ ಮಹೇಶ್‌’ ಸಾಕ್ಷ್ಯಚಿತ್ರ ಪ್ರದರ್ಶನದ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಾದ್ಯಂತ ಲಾಕ್‌ಡೌನ್‌ ಮಾಡಿದಾಗ ವಲಸೆ ಕಾರ್ಮಿಕರು ಕೆಲಸ ಇಲ್ಲದೇ, ಊರಿಗೂ ಮರಳಲಾರದೇ ಸಂಕಷ್ಟಕ್ಕೆ ಸಿಲುಕಿದ್ದರು. ಹಲವರು ನಡೆದುಕೊಂಡೇ ಹೊರಟಿದ್ದರು. ಮಹೇಶ್‌ ಎಂಬ ಯುವ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ತನ್ನೂರಿಗೆ ಹೊರಟು ಏಳು ದಿನಗಳಲ್ಲಿ ತಲುಪಿದ. ಅದು ಮಾಧ್ಯಮಗಳಲ್ಲಿ ಆಗ ದೊಡ್ಡ ಸುದ್ದಿಯಾಗಿತ್ತು. ಈ ನಿಜ ಘಟನೆಯನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ನಾವು ಇಲ್ಲಿ ಆಡಳಿತದ ವೈಫಲ್ಯವನ್ನು ತೋರಿಸದೇ ಇದ್ದರೂ ಕಥೆಯೇ ಅದನ್ನು ಹೇಳುತ್ತದೆ’ ಎಂದು ಹೇಳಿದರು.

ಭಾರತೀಯ ಸಿನಿಮಾ ಮಾಧ್ಯಮವು ಕಾರ್ಮಿಕ ವರ್ಗವನ್ನು ಅಲಕ್ಷಿಸಿದೆ. ಸಣ್ಣ ಚಿತ್ರಗಳ ಮೂಲಕ ಕಾರ್ಮಿಕರ ಸಂಕಷ್ಟ, ಹೋರಾಟವನ್ನು ತೋರಿಸುವ ಪ್ರಯತ್ನ ಇದು ಎಂದರು.

ಅಂತರರಾಷ್ಟ್ರೀಯ ಡಾಕ್ಯುಮೆಂಟರಿ ಚಲನಚಿತ್ರೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಈ ಚಿತ್ರವು 60 ನಿಮಿಷದ್ದಾಗಿದೆ. ಒಡಿಶಾ, ಮರಾಠಿ ಮತ್ತು ಹಿಂದಿ ಮಿಶ್ರಿತ ಭಾಷೆಯಲ್ಲಿರುವ ಚಿತ್ರವು ಮಹೇಶನ ಪ್ರಯಾಣದ ವೇಳೆ ದಾರಿ ತಪ್ಪುವುದು, ಸೈಕಲ್‌ ಹಾಳಾಗುವುದು, ಗುಡ್ಡ ಏರುವುದು, ರಾತ್ರಿ ಪ್ರಯಾಣ, ಸ್ನೇಹಿತರೊಂದಿಗೆ ಚರ್ಚೆಗಳನ್ನು ಕಟ್ಟಿಕೊಡುತ್ತದೆ.

ಸಂವಾದ ಕಾರ್ಯಕ್ರಮದಲ್ಲಿ ಚಳವಳಿಗಾರ ವಿ.ಎಸ್‌. ಶ್ರೀಧರ್‌, ಗೌರಿ ಸ್ಮಾರಕ ಟ್ರಸ್ಟ್‌ ಅಧ್ಯಕ್ಷೆ ತೀಸ್ತಾ ಸೆಟಲ್ವಾಡ್‌, ಉಪಾಧ್ಯಕ್ಷೆ ಕವಿತಾ ಲಂಕೇಶ್‌, ಕಾರ್ಯದರ್ಶಿ ಪ್ರದೀಪ್‌, ಸಂಭಾಷಣೆಗಾರ್ತಿ ಗುರ್ಲನ್‌ ಜಡ್ಜ್‌ ಉಪಸ್ಥಿತರಿದ್ದರು.

ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...