Homeನ್ಯಾಯ ಪಥಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಮಂಡಲ'ವನ್ನು ದಶಕಗಟ್ಟಲೆ ' ಕುದಿಸಿ ಮಾಡಿದ 'ಕಮಂಡಲ'ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು.

- Advertisement -
- Advertisement -

ದೇಶದ ಸಾಮಾಜಿಕ ಮತ್ತು ಜಾತ್ಯತೀತ ನೇಯ್ಗೆಯನ್ನು ಇತ್ತೀಚಿನ ದಶಕಗಳಲ್ಲಿ ಛಿದ್ರಗೊಳಿಸಿದ್ದ ಅಯೋಧ್ಯೆಯ ಬಾಬರಿ ಮಸೀದಿ-ರಾಮಮಂದಿರ ವಿವಾದಕ್ಕೆ ತೆರೆ ಎಳೆದಿದೆ ಸುಪ್ರೀಮ್ ಕೋರ್ಟು.

”1949ರ ಡಿಸೆಂಬರ್ 22-23ರ ನಡುವಣ ರಾತ್ರಿ ಹಿಂದೂ ದೇವತೆಗಳ ಮೂರ್ತಿಗಳನ್ನು ಒಳಪ್ರಾಂಗಣದಲ್ಲಿ ತಂದಿಟ್ಟು ಮಸೀದಿಯನ್ನು ಅಪವಿತ್ರಗೊಳಿಸಲಾಯಿತು. ಆ ಸಂದರ್ಭದಲ್ಲಿ ಮುಸಲ್ಮಾನರನ್ನು ಅಲ್ಲಿಂದ ಹೊರದಬ್ಬಿದ್ದು ಕಾನೂನುಬಾಹಿರವಾಗಿತ್ತು. ಅವರ ಧಾರ್ಮಿಕ ತಾಣವನ್ನು ಅವರ ಕೈ ತಪ್ಪಿಸುವ ಲೆಕ್ಕಾಚಾರದ ಕೃತ್ಯವಾಗಿತ್ತು”.

”ಕ್ರಿಮಿನಲ್ ಪ್ರಕರಣವೊಂದನ್ನು ದಾಖಲು ಮಾಡಿಕೊಂಡ ನಂತರ ರಿಸೀವರ್ ನೇಮಕ ಮಾಡಿ ಒಳಪ್ರಾಂಗಣವನ್ನು ಮುಟ್ಟುಗೋಲು ಹಾಕಿಕೊಂಡ ನಂತರ ಹಿಂದೂ ದೇವತಾ ಮೂರ್ತಿಗಳ ಪೂಜೆಗೆ ಅವಕಾಶ ಮಾಡಿಕೊಡಲಾಯಿತು. ತಕರಾರು ಅರ್ಜಿಗಳ ವಿಚಾರಣೆ ಬಾಕಿ ಇರುವಂತೆಯೇ ಇಡೀ ಮಸೀದಿಯನ್ನು ನೆಲಸಮ ಮಾಡಲಾಯಿತು. ಸಾರ್ವಜನಿಕ ಪೂಜಾ ಸ್ಥಳವನ್ನು ನಾಶ ಮಾಡಿದ ಲೆಕ್ಕಾಚಾರದ ಕೃತ್ಯವದು. 450 ವರ್ಷಗಳ ಹಿಂದೆ ಕಟ್ಟಲಾಗಿದ್ದ ಮಸೀದಿಯೊಂದನ್ನು ಮುಸಲ್ಮಾನರ ಕೈ ತಪ್ಪಿಸಿದ್ದು ತಪ್ಪು” ಎಂದು ನ್ಯಾಯಾಲಯ ನಿಚ್ಚಳವಾಗಿ ಸಾರಿದೆ.

ಈ ಮಾತುಗಳನ್ನು ಹೇಳಿದ ನಂತರವೂ ವಿವಾದಿತ ಜಮೀನನ್ನು ಮಂದಿರ ನಿರ್ಮಾಣಕ್ಕೆ ಮಾತ್ರವೇ ಕೊಡಬೇಕಾಗಿ ಬಂದಿತಲ್ಲ ಅದು ಹೇಗೆ ಎಂಬ ಪ್ರಶ್ನೆಗಳನ್ನು ಸುಪ್ರೀಮ್ ಕೋರ್ಟಿನ ಹಲವು ನಿವೃತ್ತ ನ್ಯಾಯಮೂರ್ತಿಗಳು ಎತ್ತಿದ್ದಾರೆ. ಈ ಸಂದೇಹಕ್ಕೆ ನ್ಯಾಯಾಲಯ 799ನೆಯ ಪ್ಯಾರಾದಲ್ಲಿ ನೀಡಿರುವ ಸಮಾಧಾನ ಹೀಗಿದೆ- ‘ಸಾರ್ವಜನಿಕ ಶಾಂತಿ ಸಾಮರಸ್ಯ ಕಾಪಾಡುವ ಉದ್ದೇಶದಿಂದ 2010ರ ತೀರ್ಪಿನಲ್ಲಿ ಅಲಹಾಬಾದ್ ಹೈಕೋರ್ಟು ವಿವಾದಿತ ಜಾಗವನ್ನು ಮೂರೂ ಅರ್ಜಿದಾರರಿಗೆ (ಸುನ್ನಿ ವಕ್ಫ್ ಮಂಡಳಿ, ರಾಮಲಲ್ಲಾ ವಿರಾಜಮಾನ್ ಹಾಗೂ ನಿರ್ಮೋಹಿ ಅಖಾಡ) ಹಂಚಿಕೊಟ್ಟಿದೆಯಾದರೂ, ಈ ಪರಿಹಾರ ಕಾರ್ಯಸಾಧ್ಯ ಅಲ್ಲ. ವಿವಾದಿತ ಜಾಗದ ಒಟ್ಟು ವಿಸ್ತೀರ್ಣ ಕೇವಲ 1500 ಚದರ ಗಜಗಳು. ಈ ಜಾಗವನ್ನು ವಿಭಾಗಿಸಿ ಹಂಚಿಕೊಡುವುದರಿಂದ ಯಾರ ಹಿತದ ಸಾಧನೆಯೂ ಆಗುವುದಿಲ್ಲ. ಅಷ್ಟೇ ಅಲ್ಲ, ಇಂತಹ ಕ್ರಮದಿಂದ ಶಾಂತಿ ಸಾಮರಸ್ಯ ಕಾಯಮ್ಮಾಗಿ ನೆಲೆಸುತ್ತದೆಂದು ಹೇಳುವುದು ಸಾಧ್ಯವಿಲ್ಲ’.

ನ್ಯಾಯಾಲಯದ ಮುಂದಿರುವ ನಿರ್ದಿಷ್ಟ ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಹೊರಗೆ ನಡೆಯುವ ಘಟನಾವಳಿಗಳು ನಮಗೆ ಅಪ್ರಸ್ತುತ. ಕಾಯಿದೆ ಮತ್ತು ಸಂವಿಧಾನವೇ ನಮಗೆ ಪರಮ ಒರೆಗಲ್ಲುಗಳು. ನಮ್ಮ ನ್ಯಾಯ ನಿರ್ಣಯ ಪ್ರಕ್ರಿಯೆ ಈ ಎರಡು ಅಂಶಗಳನ್ನು ಮಾತ್ರವೇ ಆಧರಿಸಿರುತ್ತದೆ ಎಂದು ಸುಪ್ರೀಮ್ ಕೋರ್ಟ್ ನೂರಾರು ಪ್ರಕರಣಗಳಲ್ಲಿ ಸಾರಿರುವುದು ಉಂಟು.

ಆದರೆ ಸುಪ್ರೀಮ್ ಕೋರ್ಟಿನ ನಿಲುವಿಗೆ ಅಲ್ಲಲ್ಲಿ ಬಹುದೊಡ್ಡ ಅಪವಾದಗಳು ಕಾಣಸಿಗುತ್ತವೆ. ಉದಾಹರಣೆಗೆ ಇಂದಿರಾಗಾಂಧೀ ಅವರು ಹೇರಿದ್ದ ತುರ್ತುಪರಿಸ್ಥಿತಿಯ ಕಾಲ. ಹೊರಗಿನ ವಾತಾವರಣದ ಪ್ರಭಾವದಿಂದ ನ್ಯಾಯಾಲಯವೂ ತಪ್ಪಿಸಿಕೊಳ್ಳದೆ ಹೋಯಿತು ಎಂಬ ಮಾತಿಗೆ ಜ್ವಲಂತ ನಿದರ್ಶನವೊಂದು ಇತಿಹಾಸದಲ್ಲಿ ಸದಾ ಕಾಲಕ್ಕೆ ದಾಖಲಾಗಿಬಿಟ್ಟಿತು. ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪ್ರಾಣದ ಹಕ್ಕು ಸಂವಿಧಾನವೇ ನೀಡಿರುವ ಮೂಲಭೂತ ಹಕ್ಕುಗಳು (ಈ ಹಕ್ಕುಗಳು ಅನಿರ್ಬಂಧಿತ ಅಲ್ಲ). ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಎರಡು ಹಕ್ಕುಗಳನ್ನು ಅಮಾನತುಗೊಳಿಸಬಹುದು ಎಂದು ಐವರು ಸದಸ್ಯರ ನ್ಯಾಯಪೀಠ ಬಹುಮತದ ತೀರ್ಪು ನೀಡಿಬಿಟ್ಟಿತ್ತು. ನ್ಯಾಯಮೂರ್ತಿ ಎಚ್.ಆರ್. ಖನ್ನಾ ಭಿನ್ನಮತದ ತೀರ್ಪು ಬರೆದರು. ನಾಗರಿಕ ಸಮಾಜಗಳಲ್ಲಿ ಪ್ರಾಣದ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾನವ ಜೀವಿಗಳ ಅತ್ಯಮೂಲ್ಯ ಹಕ್ಕುಗಳು?. ಈ ಹಕ್ಕುಗಳನ್ನು ಕಾರ್ಯಾಂಗದ ಪದತಲಕ್ಕೆ ಶರಣಾಗಿಸುವುದನ್ನು ಭಾರತದ ಸಂವಿಧಾನ ಮತ್ತು ಕಾಯಿದೆ ಕಾನೂನುಗಳು ಒಪ್ಪುವುದಿಲ್ಲ ಎಂದು ಸಾರಿದರು. ಈ ಭಿನ್ನಮತದ ತೀರ್ಪಿನ ಕಾರಣ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ಬಡ್ತಿಯನ್ನು ನಿರಾಕರಿಸಲಾಯಿತು. ಸೇವಾ ಜ್ಯೇಷ್ಠತೆಯನ್ನು ಅವಗಣಿಸಿ ಅವರಿಗಿಂತ ಕಿರಿಯ ನ್ಯಾಯಮೂರ್ತಿಗೆ ಬಡ್ತಿ ನೀಡಿದ್ದು ತುರ್ತುಪರಿಸ್ಥಿತಿಯ ಅತಿರೇಕಗಳಲ್ಲೊಂದು.

ಮುಂದೊಂದು ದಿನ ಸುಪ್ರೀಮ್ ಕೋರ್ಟ್ ಮುಖ್ಯನ್ಯಾಯಮೂರ್ತಿಯಾದ ಚಂದ್ರಚೂಡ್ ಅವರು ಈ ತೀರ್ಪಿಗಾಗಿ ಕ್ಷಮೆ ಯಾಚಿಸಿದರು. ಪಿ.ಎನ್.ಭಗವತಿ ಪಶ್ಚಾತ್ತಾಪಪಟ್ಟರು. ಇಂತಹ ತೀರ್ಪಿನಲ್ಲಿ ಭಾಗಿಯಾಗುವುದರ ಬದಲು ತಾವು ರಾಜೀನಾಮೆ ನೀಡುವುದೇ ಲೇಸಿತ್ತು ಎಂದರು.

ನ್ಯಾಯಾಲಯದ ಹೊರಗಿನ ವಾತಾವರಣವೂ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಬಲ್ಲದು ಎಂಬ ಮಾತಿಗೆ ಉದಾಹರಣೆಯಾಗಿ ಮಾತ್ರವೇ ಈ ತೀರ್ಪನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಮಂದಿರ-ಮಸೀದಿ ವಿವಾದದ ತೀರ್ಪಿನಲ್ಲೂ ಬಾಹ್ಯ ವಾತಾವರಣ ಪ್ರಭಾವ ಬೀರಿರುವ ಸಾಧ್ಯತೆಗಳನ್ನು ತಳ್ಳಿ ಹಾಕಲು ಬರುವುದಿಲ್ಲ. ಆದರೆ ಹಾಲಿ ಪ್ರಭಾವದ ಹಿಂದೆ ಸಾಮಾಜಿಕ ಶಾಂತಿ ಸಾಮರಸ್ಯಗಳನ್ನು ಕಾಪಾಡುವ ‘ಸದಾಶಯ’ದ ಹಿರಿಯ ಉದ್ದೇಶ ಇದ್ದೀತು. ನ್ಯಾಯಾಲಯದ ಹೊರಗಿನ ಇಂದಿನ ವಾತಾವರಣ ಹಿಂದುಸ್ತಾನ ಹಿಂದೆಂದೂ ಕಾಣದಂತಹುದು. ಉಗ್ರ ಹಿಂದುತ್ವ ಮತ್ತು ಆಕ್ರಮಣಕಾರಿ ರಾಷ್ಟ್ರವಾದಗಳು, ದೈತ್ಯ ಮತ್ತು ನಿರ್ದಯೀ ಬಹುಸಂಖ್ಯಾತ ವಾದವನ್ನು ಕಟೆದು ನಿಲ್ಲಿಸಿವೆ. ಈ ವಿವಾದವು 1989ರಿಂದ ದೇಶವನ್ನು ಉದ್ದಗಲಕ್ಕೆ ಹರಿಯಬಿಟ್ಟ ಹಿಂಸೆ ದ್ವೇಷ ತಿರಸ್ಕಾರ ಕೋಮು ಧೃವೀಕರಣದ ಹೆದ್ದೆರೆಗಳ ಭಯಾನಕ ಇತಿಹಾಸ ಪ್ರಾಯಶಃ ನ್ಯಾಯಾಲಯದ ಗಮನದಲ್ಲಿ ಇದ್ದಿರಬೇಕು. ಅಂತಹ ಮತ್ತೊಂದು ಉತ್ಕಟ ಸಂಕಟವನ್ನು ದೇಶ ಹಾದುಹೋಗುವುದು ಬೇಡ ಎಂಬ ಸದಾಶಯ ಕೆಲಸ ಮಾಡಿದ್ದೀತು. ತೀರ್ಪು ಯಾರ ಪರವಾಗಿ ಬಂದರೂ ಒಬ್ಬರು ಸೋತರು ಮತ್ತೊಬ್ಬರು ಗೆದ್ದರು ಎಂದು ಭಾವಿಸುವುದು ಬೇಡ ಎಂಬ ವಿವೇಕದ ಮಾತುಗಳನ್ನು ಆಳುವ ಪಕ್ಷ ಮತ್ತು ಅದರ ಹಿಂದಿನ ಪರಿವಾರ ಆಡಿದ್ದು ಮೇಲ್ನೋಟಕ್ಕೆ ಪ್ರಶಂಸನೀಯ. ಆದರೆ ಆಳುವ ಪಕ್ಷ ಮತ್ತು ಅದರ ಬೆನ್ನಿಗಿರುವ ಪರಿವಾರ 1989ರಿಂದ ದೇಶದ ಬಹುಸಂಖ್ಯಾತರ ಸಾಮೂಹಿಕ ಮನಸ್ಥಿತಿಯನ್ನು ಬಹುತೇಕ ಹಿಂದೂರಾಷ್ಟ್ರದ ಪರಿಕಲ್ಪನೆಯ ಪರವಾಗಿ ಪ್ರಚೋದಿಸಿ ತಿದ್ದಿ ತೀಡಿ ರೂಪಿಸಿಬಿಟ್ಟಿದೆ. ದಶಕಗಟ್ಟಲೆ ‘ಮಂಡಲ’ವನ್ನು ಕುದಿಸಿ ಮಾಡಿದ ‘ಕಮಂಡಲ’ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು. ಇನ್ನು ಈ ನಿಷ್ಠುರ ಸತ್ಯ ದೇಶದ ಅತ್ಯುನ್ನತ ನ್ಯಾಯಸ್ಥಾನಕ್ಕೆ ತಿಳಿಯದೆ ಇದ್ದೀತೇ? ಹೀಗಾಗಿ ಮತ್ತೊಂದು ಕಡುದ್ವೇಷದ ಹೀನ ಹಿಂಸೆಯ ಹೆದ್ದೆರೆ ದೇಶದ ಸಮಾಜಜೀವನವನ್ನು ಅಪ್ಪಳಿಸುವ ಸಾಧಕ ಬಾಧಕಗಳು ನ್ಯಾಯಮೂರ್ತಿಗಳ ಕಣ್ಣ ಮುಂದೆ ಸುಳಿದಿರಲೇಬೇಕು. ಹೀಗಾಗಿಯೇ ನ್ಯಾಯ ನೀಡಿಕೆಯ ಉದಾತ್ತ ತತ್ವವು, ಕೇವಲ ವಿವಾದ ಇತ್ಯರ್ಥದ ಅನುಸಂಧಾನಕ್ಕೆ ಇಳಿದಿರಬೇಕು. ನ್ಯಾಯ ನೀಡಿಕೆ ಬೇರೆ. ವಿವಾದದ ಇತ್ಯರ್ಥ ಬೇರೆ ಎಂಬುದನ್ನು ಗಮನಿಸಬೇಕಿದೆ. ನ್ಯಾಯ ನೀಡಿಕೆಗೆ ಆದ್ಯತೆ ದೊರೆತಿದ್ದರೆ 2.77 ಎಕರೆ ಜಾಗದಲ್ಲಿ ಮಂದಿರ-ಮಸೀದಿಗಳೆರಡೂ ಸಹಬಾಳ್ವೆ ನಡೆಸಬೇಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...