Homeಕರ್ನಾಟಕಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ - ಸಿಎಂ ಸಿದ್ದರಾಮಯ್ಯ

ಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗೋಡ್ಸೆಗೆ

ಮಹಾತ್ಮ ಗಾಂಧಿ ಅವರ ಹತ್ಯೆ ದಿನದ ಅಂಗವಾಗಿ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ ಮಹಾತ್ಮಾ ಗಾಂಧಿ ಅವರ ವಿಚಾರಧಾರೆಗಳು, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನವರಿ 30, 1948 ರಂದು ಮಹಾತ್ಮ ಗಾಂಧೀಜಿಯವರನ್ನು ಹಂತಕ ಗೋಡ್ಸೆ ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆಯಾದೆವು.” ಎಂದು ಹೇಳಿದ್ದಾರೆ. ಗೋಡ್ಸೆಗೆ

“ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ದೇಶ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು. ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಲು ಸಾಧ್ಯ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:  ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...