Homeಮುಖಪುಟ'ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..'; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದೆಹಲಿಯ ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿಯಂತೆಯೇ ಸುಳ್ಳು ಹೇಳುತ್ತಾರೆ. ಆದರೆ, ಬಹುಶಃ ಪ್ರಧಾನಿಗಿಂತ ಹೆಚ್ಚು ಕುತಂತ್ರಿ” ಎಂದು ಹೇಳಿದರು.

ಫೆಬ್ರವರಿ 5 ರ ವಿಧಾನಸಭಾ ಚುನಾವಣೆಗೆ ಮುನ್ನ ಬದ್ಲಿ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ತಾವು ಮತ್ತು ತಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಸಾಯುತ್ತೇವೆ, ಆದರೆ ಈ ಜನರೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದರು.

ಯಮುನಾ ನೀರನ್ನು ಕುಡಿಯಲು ಯೋಗ್ಯವಾಗಿಸುವ ತಮ್ಮ ಐದು ವರ್ಷಗಳ ಭರವಸೆ ಕುರಿತು ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡರು. ಇದು ಅವರ ಟೊಳ್ಳುತನವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕಳೆದ ಹಲವಾರು ದಿನಗಳಿಂದ, ಅತ್ಯಂತ ಅಪಾಯಕಾರಿ ಅಮೋನಿಯಾ ಮಟ್ಟವನ್ನು ಹೊಂದಿರುವ ನೀರು ಹರಿಯಾಣದಿಂದ ಯಮುನಾ ನದಿಗೆ ಹರಿಯುತ್ತಿದೆ ಎಂದು ಎಎಪಿ ಮುಖ್ಯಸ್ಥರು ಗುರುವಾರ ಹೇಳಿಕೊಂಡಿದ್ದಾರೆ. “ಮುಖ್ಯಮಂತ್ರಿ ಅತಿಶಿ ತಮ್ಮ ಹರಿಯಾಣದ ಪ್ರತಿರೂಪಕ್ಕೆ ಕರೆ ಮಾಡಿ, ಈ ವಿಷಕಾರಿ ನೀರನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದಾಗ, ಅವರು ಏನೂ ಮಾಡಲಿಲ್ಲ” ಎಂದು ಕೇಜ್ರಿವಾಲ್ ಆರೋಪಿಸಿದರು.

ಗುರುವಾರ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಕೇಜ್ರಿವಾಲ್ ಮೋದಿಯಂತೆಯೇ ಒಂದರ ನಂತರ ಒಂದರಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ, ಯಾವುದೇ ವ್ಯತ್ಯಾಸವಿಲ್ಲ. ಒಂದೇ ಒಂದು ವಿಷಯವಿದೆ, ಬಹುಶಃ ಕೇಜ್ರಿವಾಲ್ ಮೋದಿಗಿಂತಲೂ ಹೆಚ್ಚು ‘ಚಾಲಾಕ್’ (ಕುತಂತ್ರಿ). ಆದ್ದರಿಂದ, ನಿಮ್ಮೊಂದಿಗೆ ಯಾರು ಇದ್ದಾರೆ, ಸಂವಿಧಾನವನ್ನು ರಕ್ಷಿಸುವವರು ಮತ್ತು ಸತ್ಯವನ್ನು ಮಾತನಾಡುವವರು ಯಾರು ಎಂಬುದನ್ನು ನೀವು ಮರೆಯಬಾರದು” ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ತಮ್ಮ ಪಕ್ಷವು ತಾನು ಭರವಸೆ ನೀಡಿದ್ದನ್ನು ಈಡೇರಿಸಿದೆ ಎಂದರು.

“ಇದು ಸಿದ್ಧಾಂತಗಳ ಯುದ್ಧ. ಒಂದು ಕಡೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಇದೆ, ಮತ್ತೊಂದೆಡೆ ಕಾಂಗ್ರೆಸ್ ಇದೆ. ಅವರು (ಬಿಜೆಪಿ ಮತ್ತು ಆರ್‌ಎಸ್‌ಎಸ್) ಜನರಲ್ಲಿ ದ್ವೇಷ, ಹಿಂಸೆ ಮತ್ತು ಭಯವನ್ನು ಹರಡುತ್ತಾರೆ. ಅವರು ದ್ವೇಷವನ್ನು ಹರಡುವಲ್ಲೆಲ್ಲಾ ನಾವು ‘ಮೊಹಬ್ಬತ್ ಕಿ ಡುಕಾನ್’ ಅನ್ನು ತೆರೆಯುತ್ತೇವೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ” ಎಂದು ಗಾಂಧಿ ಹೇಳಿದರು.

“ಬಿಜೆಪಿ ಹಿಂಸೆ ಮತ್ತು ದ್ವೇಷವನ್ನು ಹರಡುತ್ತದೆ. ಗಲಭೆಯಲ್ಲಿ ಜನರು ಕೊಲ್ಲಲ್ಪಟ್ಟಾಗ, ಕೇಜ್ರಿವಾಲ್ ಮತ್ತು ಅವರ ಪಕ್ಷದ ಜನರು ಪೀಡಿತರೊಂದಿಗೆ ನಿಲ್ಲಲಿಲ್ಲ” ಎಂದು ಆರೋಪಿಸಿದರು.

“ಒಂದು ಸಿದ್ಧಾಂತವು ಸಂವಿಧಾನವನ್ನು ರಕ್ಷಿಸಲು ಕೆಲಸ ಮಾಡುತ್ತದೆ ಮತ್ತು ಇನ್ನೊಂದು ಸಿದ್ಧಾಂತವು ಅದನ್ನು ಕೊನೆಗೊಳಿಸಲು ಬಯಸುತ್ತದೆ. ಮಹಾತ್ಮಾ ಗಾಂಧಿಯವರು ದ್ವೇಷದ ವಿರುದ್ಧ ಹೋರಾಡುತ್ತಿದ್ದ ಕಾರಣ, ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರನ್ನು ಒಗ್ಗೂಡಿಸುತ್ತಿದ್ದ ಕಾರಣ ಮತ್ತು ದಲಿತರನ್ನು ರಕ್ಷಿಸುತ್ತಿದ್ದ ಕಾರಣ ಈ ದಿನ (ಅಕ್ಟೋಬರ್ 30, 1948) ಕೊಲ್ಲಲ್ಪಟ್ಟರು. ಅವರನ್ನು ಕೊಂದವರು ಯಾರು? ಇಂದು ದೇಶವನ್ನು ಸುಡುತ್ತಿರುವ ಸಿದ್ಧಾಂತದ ಜನರು ಅವರೇ” ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

“ಇದೆಲ್ಲಾ ದೇಶದ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಕೇಜ್ರಿವಾಲ್ ಭಾವಿಸುತ್ತಾರೆ. ಆದರೆ, ಸತ್ಯವೆಂದರೆ ಅವರು ಮತ್ತು ಮನೀಶ್ ಸಿಸೋಡಿಯಾ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರು ಸುಳ್ಳು ಭರವಸೆಗಳನ್ನು ನೀಡಿದರು. ಐದು ವರ್ಷಗಳ ಹಿಂದೆ, ಕೇಜ್ರಿವಾಲ್ ನಾನು ಯಮುನೆಯಲ್ಲಿ ಸ್ನಾನ ಮಾಡಿ ಅದರ ನೀರನ್ನು ಕುಡಿಯುತ್ತೇನೆ ಎಂದು ಹೇಳಿದ್ದರು. ನಾನು ಅವರಿಗೆ ಸವಾಲು ಹಾಕುತ್ತೇನೆ, ಯಮುನೆ ನೀರನ್ನು ಬಿಡಿ, ಇಲ್ಲಿ (ಬದ್ಲಿಯಲ್ಲಿ) ಜನರು ಪಡೆಯುತ್ತಿರುವ ನೀರನ್ನು ಕುಡಿಯಿರಿ” ಎಂದರು.

“ಕಾಂಗ್ರೆಸ್ ಮತ್ತು ನಾನು ಎಂದಿಗೂ ಬಿಜೆಪಿಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು 55 ಗಂಟೆಗಳ ವಿಚಾರಣೆಯನ್ನು ಎದುರಿಸಿದೆ, ಅವರು ನನ್ನ ವಿರುದ್ಧ 32 ಪ್ರಕರಣಗಳನ್ನು ಹೂಡಿದ್ದಾರೆ. ಆದರೆ ನನಗೆ ಭಯವಿಲ್ಲ; ನಾನು ಓಡಿಹೋಗಲಿಲ್ಲ. ನೀವು ನನ್ನನ್ನು ಬಂಧಿಸಬಹುದು ಎಂದು ನಾನು ಹೇಳಿದೆ. ಅವರು ನನ್ನ ಅಧಿಕೃತ ನಿವಾಸವನ್ನು ಕಿತ್ತುಕೊಂಡರು ಮತ್ತು ನಾನು ಅವರಿಗೆ ಕೀಲಿಗಳನ್ನು ಹಸ್ತಾಂತರಿಸಿದೆ. ನಾವು ಸಾಯುತ್ತೇವೆ. ಆದರೆ, ಈ ಜನರೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ಭಗವಂತ್ ಮಾನ್ ನಿವಾಸದ ಮೇಲೆ ದೆಹಲಿ ಪೊಲೀಸರಿಂದ ದಾಳಿ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...