HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...