HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...