Homeನ್ಯಾಯ ಪಥಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ - ಯೋಗೇಶ್ ಮಾಸ್ಟರ್

ಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ – ಯೋಗೇಶ್ ಮಾಸ್ಟರ್

ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು.

- Advertisement -
- Advertisement -

ಅತ್ಯಂತ ಹೆಚ್ಚು ಮುದ್ರಣವಾದ ಪುಸ್ತಕ ಬೈಬಲ್. ಅದರ ಪ್ರತಿಗಳಷ್ಟು ಕ್ರೈಸ್ತರಿರದಿದ್ದರೂ, ಧರ್ಮಪ್ರಚಾರದ ಕರ್ತವ್ಯದಿಂದ ಪಾದ್ರಿಗಳು ಭಾಷೆಗಳನ್ನು ಕಲಿತು ಬೈಬಲ್ಲನ್ನೂ ಮತ್ತು ಕ್ರಿಸ್ತನನ್ನೂ ಜನರಿಗೆ ಪರಿಚಯಿಸಿದರು. ಇದರ ಅಡ್ಡಪರಿಣಾಮಗಳಾಗಿ ನಿಘಂಟುಗಳು ಪ್ರಾದೇಶಿಕ ಭಾಷೆಗಳಿಗೆ ಲಭ್ಯವಾದವು ಮತ್ತು ಅಕ್ಷರವಂಚಿತ ವರ್ಗದವರು ಸುಶಿಕ್ಷಿತರಾದರು. ಕನ್ನಡಕ್ಕೆ ಕಿಟ್ಟಲ್ ನಿಘಂಟನ್ನು ನೀಡಿದಂತೆ ಕ್ರೈಸ್ತರು ಬಹಳಷ್ಟು ಭಾಷೆಗಳಿಗೆ ನಿಘಂಟುಗಳನ್ನು ನೀಡಿದರು.

ಶುಭ ಸಂದೇಶವೆಂದರೆ ಕ್ರಿಸ್ತನ ಜೀವನ ಮತ್ತು ಅವನ ಆಪ್ತ ಶಿಷ್ಯರು ತಮ್ಮ ಗುರುವಿನ ಶುಭ ಸಂದೇಶವನ್ನು ಪ್ರಚಾರ ಮಾಡಿದ ಕತೆ. ಇದನ್ನು ಒಡಂಬಡಿಕೆ ಅಥವಾ ಒಪ್ಪಂದ ಎನ್ನುವುದು. ಏಕೆಂದರೆ, ದೇವರು ಮಾನವರೊಂದಿಗೆ ಮಾಡಿಕೊಂಡಿರುವ ಹೊಸ ಒಪ್ಪಂದ ಎಂದು. ಮನುಷ್ಯರ ಬಾಳ್ವೆಗೆ ಬೇಕಾದ ಸತ್ಯವನ್ನೇ ದೇವರೆಂದು, ಅದರ ಮಗನಾಗಿ ಗುರುತಿಸಿಕೊಂಡ ಯೇಸು ತನ್ನಪ್ಪನ ಒಲವ ಪಡೆಯಲು ತಾನೇ ಬೆಳಕು ಮತ್ತು ಮಾರ್ಗವಾದ.

ಯೇಸು ದೇವಾಲಯಗಳಲ್ಲಿನ ವ್ಯಾಪಾರಿ ಧೋರಣೆಗಳನ್ನು ಖಂಡಿಸಿ ಆ್ಯಂಗ್ರೀ ಯಂಗ್‍ಮ್ಯಾನ್‍ನಂತೆ ಅಲ್ಲಿ ವಸ್ತುಗಳನ್ನೆಲ್ಲಾ ಚೆಲ್ಲಾಡಿ, ಚಾಟಿ ಬೀಸಿ ಕೂಗಾಡುತ್ತಾನೆ “ದೇವಾಲಯವನ್ನು ಸಂತೆಯನ್ನಾಗಿಸಬೇಡಿ” ಎಂದು. ರೋಮ್ ಚಕ್ರಾಧಿಪತ್ಯದ ಅಂಕೆಯಲ್ಲಿದ್ದ ಯೆಹೂದಿಗಳು ಮೌಢ್ಯ ಮತ್ತು ಸಂಪ್ರದಾಯಗಳಲ್ಲಿ ಬಿದ್ದಿದ್ದಾರೆಂದು ಅರ್ಥವಾಗಿ ಯೇಸುವೂ ಕಲ್ಯಾಣದ ಬಸವಣ್ಣನಂತೆ ಸಮಾಜದಿಂದ ಬಹಿಷ್ಕೃತರೊಂದಿಗೆ, ತಳವರ್ಗದವರೊಂದಿಗೆಯೇ ಸೇರಿ ಕಣ್ಣು ತೆರೆಸಲು ಪ್ರಾರಂಭಿಸುತ್ತಾನೆ.

ಅವನ ಬೆಟ್ಟದ ಮೇಲಿನ ಬೋಧನೆ ಮತ್ತು ಸಂದರ್ಭಾನುಸಾರ ನೀಡುವ ತಿಳುವಳಿಕೆ ಈಗೂ ಅತ್ಯದ್ಭುತ ಮತ್ತು ಸೂಕ್ಷ್ಮ ಒಳನೋಟಗಳು. ತಲೆ ಮೇಲೆ ಆಣೆ ಮಾಡಿದರೆ ಕಪ್ಪು ಕೂದಲನ್ನು ಬೆಳ್ಳಗಾಗಿಸದು, ಬಿಳಿಯದನ್ನು ಕಪ್ಪಾಗಿಸದು ಎನ್ನುತ್ತಾ ಮೌಢ್ಯವನ್ನು ಧಿಕ್ಕರಿಸಿದರೆ, ದೇವರಿಗೆ ನೈವೇದ್ಯ ನೀಡುವಾಗ ಮೊದಲು ನಿನ್ನ ನೆರೆಯವನೊಂದಿಗಿನ ವ್ಯಾಜ್ಯವನ್ನು ಬಗೆಹರಿಸಿ ಆರಾಧನೆ ಸಲ್ಲಿಸು ಎನ್ನುತ್ತಾ ದೇವರಿಗಿಂತ ಮುಖ್ಯ ಮಾನವನೊಂದಿಗಿನ ನಿನ್ನ ಸಂಬಂಧ ಎಂದು ಸೌಹಾರ್ದತೆ ತೋರುತ್ತಾನೆ. ಹಾದರದವಳಿಗೆ ಕಲ್ಲೊಗೆಯುವ ಮಂದಿಗೆ ತಪ್ಪು ಮಾಡದವರು ಮೊದಲು ಕಲ್ಲು ಬೀರಲಿ ಎಂದು ಸಮಾಜದ ಸೋಗಲಾಡಿ ನೈತಿಕತೆಯನ್ನು ಪ್ರಶ್ನಿಸುತ್ತಾನೆ. ಭೀತಿಯ ದೇವರನ್ನು ಪ್ರೀತಿಯ ತಂದೆಯನ್ನಾಗಿಸಿ ಸಾಂಪ್ರದಾಯಕ ಪರಿಕಲ್ಪನೆಯನ್ನು ತೊಲಗಿಸಿಬಿಡುತ್ತಾನೆ. ಬದುಕು ಮತ್ತು ಬೋಧನೆಗಳ ಪೂರ್ತಿ ಪ್ರೀತಿ, ಸಾಮರಸ್ಯ, ಕ್ಷಮೆ, ಆತ್ಮಾವಲೋಕನ, ಪಶ್ಚಾತ್ತಾಪದಂತಹ ಮೌಲ್ಯಗಳನ್ನೇ ಪ್ರತಿಪಾದಿಸುತ್ತಾನೆ.

ಮ್ಯಾಥ್ಯೂ, ಮಾರ್ಕ್, ಲೂಕ್ ಮತ್ತು ಜಾನ್ ಅವರದ್ದನ್ನೇ ಪ್ರಧಾನವಾಗಿ ಬೈಬಲ್ಲಿನಲ್ಲಿ ಹೊಂದಿದ್ದರೂ ಅವರ ಬರವಣಿಗೆಗಳಲ್ಲಿಯೇ ವ್ಯತ್ಯಾಸಗಳಿವೆ. ಯೇಸುವಿನ ಕಾಲದಲ್ಲಿ ಬದುಕಿದ್ದ ಜೋಸೆಫಸ್‍ನ ಬರವಣಿಗೆಗಳನ್ನು ಇವರು ತೆಗೆದುಕೊಳ್ಳದೇ ಇರುವುದಕ್ಕೆ ಕಾರಣ ಧಾರ್ಮಿಕತೆಯನ್ನು ಗಟ್ಟಿಗೊಳಿಸದೇ ವಾಸ್ತವದ ಶೈಲಿಯಲ್ಲಿರಬಹುದು. ಯೇಸುವೇ ಪವಾಡಗಳನ್ನು ಅಲ್ಲಗಳೆಯುವಾಗ ಬೈಬಲ್ಲು ಪವಾಡಗಳಿಂದಲೇ ತುಂಬಿವೆ. ಉತ್ಪ್ರೇಕ್ಷೆ ಮತ್ತು ರೂಪಕಗಳಲ್ಲಿ ನಾವು ಯೇಸುವನ್ನು ಗುರುತಿಸಬೇಕು.

ಕರ್ನಾಟಕದಲ್ಲಿ ಬಸವಣ್ಣನ ಮರಣಾನಂತರ ಶರಣರು ಚೆಲ್ಲಾಪಿಲ್ಲಿಯಾದಂತೆ ಕ್ರಿಸ್ತನ ಮರಣಾನಂತರವೂ ಅವನ ಶಿಷ್ಯರು ಚೆಲ್ಲಾಪಿಲ್ಲಿಯಾಗಿದ್ದರು. ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು. ಗುಟ್ಟಾಗಿ ಒಟ್ಟಾಗುತ್ತಾ ಧರ್ಮಸಭೆಗಳನ್ನು ಮಾಡುತ್ತಾ ಹೊರಗಿನ ಸಮಾಜಕ್ಕೆ ಬಂದಿದ್ದು ಅವರ ತ್ಯಾಗ ಬಲಿದಾನಗಳ ಕತೆಯೇ.

ಕ್ರಿಸ್ತನೆಂಬ ಕ್ರಾಂತಿಯೋಗಿ ತನ್ನ ಜೀವಿತಾವಧಿಯಲ್ಲಿ ಪ್ರೀತಿ, ಕರುಣೆ, ಸೌಹಾರ್ದ, ಕ್ಷಮೆ, ಪಶ್ಚಾತ್ತಾಪ, ಸಮಾನತೆ ಇವುಗಳೆಲ್ಲವನ್ನೂ ಹೊಂದಿರುವ ವ್ಯಕ್ತಿಗಳನ್ನು ರೂಪಿಸಲು, ಸಮಾಜವನ್ನು ಕಟ್ಟಲು ಯತ್ನಿಸಿದ್ದೇ ಪವಾಡ. ಇದೇ ಶುಭ ಸಂದೇಶದ ಪುಟಗಳಲ್ಲಿ ಪುಟಕ್ಕಿಟ್ಟಂತೆ ಹೊಳೆಯುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...