Homeನ್ಯಾಯ ಪಥಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ - ಯೋಗೇಶ್ ಮಾಸ್ಟರ್

ಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ – ಯೋಗೇಶ್ ಮಾಸ್ಟರ್

ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು.

- Advertisement -
- Advertisement -

ಅತ್ಯಂತ ಹೆಚ್ಚು ಮುದ್ರಣವಾದ ಪುಸ್ತಕ ಬೈಬಲ್. ಅದರ ಪ್ರತಿಗಳಷ್ಟು ಕ್ರೈಸ್ತರಿರದಿದ್ದರೂ, ಧರ್ಮಪ್ರಚಾರದ ಕರ್ತವ್ಯದಿಂದ ಪಾದ್ರಿಗಳು ಭಾಷೆಗಳನ್ನು ಕಲಿತು ಬೈಬಲ್ಲನ್ನೂ ಮತ್ತು ಕ್ರಿಸ್ತನನ್ನೂ ಜನರಿಗೆ ಪರಿಚಯಿಸಿದರು. ಇದರ ಅಡ್ಡಪರಿಣಾಮಗಳಾಗಿ ನಿಘಂಟುಗಳು ಪ್ರಾದೇಶಿಕ ಭಾಷೆಗಳಿಗೆ ಲಭ್ಯವಾದವು ಮತ್ತು ಅಕ್ಷರವಂಚಿತ ವರ್ಗದವರು ಸುಶಿಕ್ಷಿತರಾದರು. ಕನ್ನಡಕ್ಕೆ ಕಿಟ್ಟಲ್ ನಿಘಂಟನ್ನು ನೀಡಿದಂತೆ ಕ್ರೈಸ್ತರು ಬಹಳಷ್ಟು ಭಾಷೆಗಳಿಗೆ ನಿಘಂಟುಗಳನ್ನು ನೀಡಿದರು.

ಶುಭ ಸಂದೇಶವೆಂದರೆ ಕ್ರಿಸ್ತನ ಜೀವನ ಮತ್ತು ಅವನ ಆಪ್ತ ಶಿಷ್ಯರು ತಮ್ಮ ಗುರುವಿನ ಶುಭ ಸಂದೇಶವನ್ನು ಪ್ರಚಾರ ಮಾಡಿದ ಕತೆ. ಇದನ್ನು ಒಡಂಬಡಿಕೆ ಅಥವಾ ಒಪ್ಪಂದ ಎನ್ನುವುದು. ಏಕೆಂದರೆ, ದೇವರು ಮಾನವರೊಂದಿಗೆ ಮಾಡಿಕೊಂಡಿರುವ ಹೊಸ ಒಪ್ಪಂದ ಎಂದು. ಮನುಷ್ಯರ ಬಾಳ್ವೆಗೆ ಬೇಕಾದ ಸತ್ಯವನ್ನೇ ದೇವರೆಂದು, ಅದರ ಮಗನಾಗಿ ಗುರುತಿಸಿಕೊಂಡ ಯೇಸು ತನ್ನಪ್ಪನ ಒಲವ ಪಡೆಯಲು ತಾನೇ ಬೆಳಕು ಮತ್ತು ಮಾರ್ಗವಾದ.

ಯೇಸು ದೇವಾಲಯಗಳಲ್ಲಿನ ವ್ಯಾಪಾರಿ ಧೋರಣೆಗಳನ್ನು ಖಂಡಿಸಿ ಆ್ಯಂಗ್ರೀ ಯಂಗ್‍ಮ್ಯಾನ್‍ನಂತೆ ಅಲ್ಲಿ ವಸ್ತುಗಳನ್ನೆಲ್ಲಾ ಚೆಲ್ಲಾಡಿ, ಚಾಟಿ ಬೀಸಿ ಕೂಗಾಡುತ್ತಾನೆ “ದೇವಾಲಯವನ್ನು ಸಂತೆಯನ್ನಾಗಿಸಬೇಡಿ” ಎಂದು. ರೋಮ್ ಚಕ್ರಾಧಿಪತ್ಯದ ಅಂಕೆಯಲ್ಲಿದ್ದ ಯೆಹೂದಿಗಳು ಮೌಢ್ಯ ಮತ್ತು ಸಂಪ್ರದಾಯಗಳಲ್ಲಿ ಬಿದ್ದಿದ್ದಾರೆಂದು ಅರ್ಥವಾಗಿ ಯೇಸುವೂ ಕಲ್ಯಾಣದ ಬಸವಣ್ಣನಂತೆ ಸಮಾಜದಿಂದ ಬಹಿಷ್ಕೃತರೊಂದಿಗೆ, ತಳವರ್ಗದವರೊಂದಿಗೆಯೇ ಸೇರಿ ಕಣ್ಣು ತೆರೆಸಲು ಪ್ರಾರಂಭಿಸುತ್ತಾನೆ.

ಅವನ ಬೆಟ್ಟದ ಮೇಲಿನ ಬೋಧನೆ ಮತ್ತು ಸಂದರ್ಭಾನುಸಾರ ನೀಡುವ ತಿಳುವಳಿಕೆ ಈಗೂ ಅತ್ಯದ್ಭುತ ಮತ್ತು ಸೂಕ್ಷ್ಮ ಒಳನೋಟಗಳು. ತಲೆ ಮೇಲೆ ಆಣೆ ಮಾಡಿದರೆ ಕಪ್ಪು ಕೂದಲನ್ನು ಬೆಳ್ಳಗಾಗಿಸದು, ಬಿಳಿಯದನ್ನು ಕಪ್ಪಾಗಿಸದು ಎನ್ನುತ್ತಾ ಮೌಢ್ಯವನ್ನು ಧಿಕ್ಕರಿಸಿದರೆ, ದೇವರಿಗೆ ನೈವೇದ್ಯ ನೀಡುವಾಗ ಮೊದಲು ನಿನ್ನ ನೆರೆಯವನೊಂದಿಗಿನ ವ್ಯಾಜ್ಯವನ್ನು ಬಗೆಹರಿಸಿ ಆರಾಧನೆ ಸಲ್ಲಿಸು ಎನ್ನುತ್ತಾ ದೇವರಿಗಿಂತ ಮುಖ್ಯ ಮಾನವನೊಂದಿಗಿನ ನಿನ್ನ ಸಂಬಂಧ ಎಂದು ಸೌಹಾರ್ದತೆ ತೋರುತ್ತಾನೆ. ಹಾದರದವಳಿಗೆ ಕಲ್ಲೊಗೆಯುವ ಮಂದಿಗೆ ತಪ್ಪು ಮಾಡದವರು ಮೊದಲು ಕಲ್ಲು ಬೀರಲಿ ಎಂದು ಸಮಾಜದ ಸೋಗಲಾಡಿ ನೈತಿಕತೆಯನ್ನು ಪ್ರಶ್ನಿಸುತ್ತಾನೆ. ಭೀತಿಯ ದೇವರನ್ನು ಪ್ರೀತಿಯ ತಂದೆಯನ್ನಾಗಿಸಿ ಸಾಂಪ್ರದಾಯಕ ಪರಿಕಲ್ಪನೆಯನ್ನು ತೊಲಗಿಸಿಬಿಡುತ್ತಾನೆ. ಬದುಕು ಮತ್ತು ಬೋಧನೆಗಳ ಪೂರ್ತಿ ಪ್ರೀತಿ, ಸಾಮರಸ್ಯ, ಕ್ಷಮೆ, ಆತ್ಮಾವಲೋಕನ, ಪಶ್ಚಾತ್ತಾಪದಂತಹ ಮೌಲ್ಯಗಳನ್ನೇ ಪ್ರತಿಪಾದಿಸುತ್ತಾನೆ.

ಮ್ಯಾಥ್ಯೂ, ಮಾರ್ಕ್, ಲೂಕ್ ಮತ್ತು ಜಾನ್ ಅವರದ್ದನ್ನೇ ಪ್ರಧಾನವಾಗಿ ಬೈಬಲ್ಲಿನಲ್ಲಿ ಹೊಂದಿದ್ದರೂ ಅವರ ಬರವಣಿಗೆಗಳಲ್ಲಿಯೇ ವ್ಯತ್ಯಾಸಗಳಿವೆ. ಯೇಸುವಿನ ಕಾಲದಲ್ಲಿ ಬದುಕಿದ್ದ ಜೋಸೆಫಸ್‍ನ ಬರವಣಿಗೆಗಳನ್ನು ಇವರು ತೆಗೆದುಕೊಳ್ಳದೇ ಇರುವುದಕ್ಕೆ ಕಾರಣ ಧಾರ್ಮಿಕತೆಯನ್ನು ಗಟ್ಟಿಗೊಳಿಸದೇ ವಾಸ್ತವದ ಶೈಲಿಯಲ್ಲಿರಬಹುದು. ಯೇಸುವೇ ಪವಾಡಗಳನ್ನು ಅಲ್ಲಗಳೆಯುವಾಗ ಬೈಬಲ್ಲು ಪವಾಡಗಳಿಂದಲೇ ತುಂಬಿವೆ. ಉತ್ಪ್ರೇಕ್ಷೆ ಮತ್ತು ರೂಪಕಗಳಲ್ಲಿ ನಾವು ಯೇಸುವನ್ನು ಗುರುತಿಸಬೇಕು.

ಕರ್ನಾಟಕದಲ್ಲಿ ಬಸವಣ್ಣನ ಮರಣಾನಂತರ ಶರಣರು ಚೆಲ್ಲಾಪಿಲ್ಲಿಯಾದಂತೆ ಕ್ರಿಸ್ತನ ಮರಣಾನಂತರವೂ ಅವನ ಶಿಷ್ಯರು ಚೆಲ್ಲಾಪಿಲ್ಲಿಯಾಗಿದ್ದರು. ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು. ಗುಟ್ಟಾಗಿ ಒಟ್ಟಾಗುತ್ತಾ ಧರ್ಮಸಭೆಗಳನ್ನು ಮಾಡುತ್ತಾ ಹೊರಗಿನ ಸಮಾಜಕ್ಕೆ ಬಂದಿದ್ದು ಅವರ ತ್ಯಾಗ ಬಲಿದಾನಗಳ ಕತೆಯೇ.

ಕ್ರಿಸ್ತನೆಂಬ ಕ್ರಾಂತಿಯೋಗಿ ತನ್ನ ಜೀವಿತಾವಧಿಯಲ್ಲಿ ಪ್ರೀತಿ, ಕರುಣೆ, ಸೌಹಾರ್ದ, ಕ್ಷಮೆ, ಪಶ್ಚಾತ್ತಾಪ, ಸಮಾನತೆ ಇವುಗಳೆಲ್ಲವನ್ನೂ ಹೊಂದಿರುವ ವ್ಯಕ್ತಿಗಳನ್ನು ರೂಪಿಸಲು, ಸಮಾಜವನ್ನು ಕಟ್ಟಲು ಯತ್ನಿಸಿದ್ದೇ ಪವಾಡ. ಇದೇ ಶುಭ ಸಂದೇಶದ ಪುಟಗಳಲ್ಲಿ ಪುಟಕ್ಕಿಟ್ಟಂತೆ ಹೊಳೆಯುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...