Homeಮುಖಪುಟಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

- Advertisement -
- Advertisement -

ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ (ಜ.31) ಆರಂಭಗೊಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಡಿಸೆಂಬರ್ 24ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿ ತನ್ನ ಭಾಷಣ ಪ್ರಾರಂಭಿಸಿದರು.

“ಮೂರನೇ ಅವಧಿಯ ಕೇಂದ್ರದ ಎನ್‌ಡಿಎ ಸರ್ಕಾರ “ಹಿಂದಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ” ಎಂದು ರಾಷ್ಟ್ರಪತಿ ಕೊಂಡಾಡಿದರು.

ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮತ್ತು ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆಯಾಗಲಿದೆ. ಶನಿವಾರ (ಫೆ.1) ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿರುವ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯು, 2024–25ರ (ಏಪ್ರಿಲ್–ಮಾರ್ಚ್) ಆರ್ಥಿಕತೆಯ ಸ್ಥಿತಿ ಮತ್ತು ವಿವಿಧ ಸೂಚಕಗಳ ಒಳನೋಟಗಳನ್ನು ಮತ್ತು ಮುಂದಿನ ಹಣಕಾಸು ವರ್ಷದ ಮುನ್ನೋಟವನ್ನು ಒದಗಿಸಲಿದೆ.

ಬಜೆಟ್‌ ಅಧಿವೇಶನದಲ್ಲಿ, ಬ್ಯಾಂಕಿಂಗ್ ನಿಯಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿರುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024 ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಲಿದೆ ಎನ್ನಲಾದ ರೈಲ್ವೆ (ತಿದ್ದುಪಡಿ) ಮಸೂದೆ-2024 ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

ಗಮನಾರ್ಹವಗಿ, ದೇಶದಾದ್ಯಂತ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನಗಳನ್ನು ಸುಧಾರಿಸುತ್ತದೆ ಎನ್ನಲಾದ ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ 2024, ಧಾರ್ಮಿಕ ದತ್ತಿಗಳ ನಿರ್ವಹಣೆಯನ್ನು ಸುಧಾರಿಸುತ್ತೆ ಎನ್ನಲಾದ ವಕ್ಫ್ (ತಿದ್ದುಪಡಿ) ಮಸೂದೆ-2024 ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ-2024 ಕೂಡ ಮಂಡಿಸುವ ಸಾಧ್ಯತೆಯಿದೆ.

ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ- 2024, ರೈಲ್ವೆ (ತಿದ್ದುಪಡಿ) ಮಸೂದೆ- 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ-2024, ತೈಲಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ-2024, ಬಾಯ್ಲರ್ ಮಸೂದೆ-2024, ವಕ್ಫ್ (ತಿದ್ದುಪಡಿ) ಮಸೂದೆ- 2024, ಕರಾವಳಿ ಸಾಗಣೆ ಮಸೂದೆ-2024, ವ್ಯಾಪಾರಿ ಸಾಗಣೆ ಮಸೂದೆ-2024 ಮತ್ತು ಹಣಕಾಸು ಮಸೂದೆ- 2025 ಸೇರಿವೆ.

ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿಯಲಿದೆ. ವಿರಾಮದ ನಂತರ, ಎರಡೂ ಸದನಗಳು ಮಾರ್ಚ್ 10 ರಂದು ಮತ್ತೆ ಪ್ರಾರಂಭಗೊಳ್ಳಲಿವೆ. ಏಪ್ರಿಲ್ 4 ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...