Homeಮುಖಪುಟಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

- Advertisement -
- Advertisement -

ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ (ಜ.31) ಆರಂಭಗೊಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಡಿಸೆಂಬರ್ 24ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿ ತನ್ನ ಭಾಷಣ ಪ್ರಾರಂಭಿಸಿದರು.

“ಮೂರನೇ ಅವಧಿಯ ಕೇಂದ್ರದ ಎನ್‌ಡಿಎ ಸರ್ಕಾರ “ಹಿಂದಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ” ಎಂದು ರಾಷ್ಟ್ರಪತಿ ಕೊಂಡಾಡಿದರು.

ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮತ್ತು ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆಯಾಗಲಿದೆ. ಶನಿವಾರ (ಫೆ.1) ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿರುವ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯು, 2024–25ರ (ಏಪ್ರಿಲ್–ಮಾರ್ಚ್) ಆರ್ಥಿಕತೆಯ ಸ್ಥಿತಿ ಮತ್ತು ವಿವಿಧ ಸೂಚಕಗಳ ಒಳನೋಟಗಳನ್ನು ಮತ್ತು ಮುಂದಿನ ಹಣಕಾಸು ವರ್ಷದ ಮುನ್ನೋಟವನ್ನು ಒದಗಿಸಲಿದೆ.

ಬಜೆಟ್‌ ಅಧಿವೇಶನದಲ್ಲಿ, ಬ್ಯಾಂಕಿಂಗ್ ನಿಯಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿರುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024 ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಲಿದೆ ಎನ್ನಲಾದ ರೈಲ್ವೆ (ತಿದ್ದುಪಡಿ) ಮಸೂದೆ-2024 ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

ಗಮನಾರ್ಹವಗಿ, ದೇಶದಾದ್ಯಂತ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನಗಳನ್ನು ಸುಧಾರಿಸುತ್ತದೆ ಎನ್ನಲಾದ ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ 2024, ಧಾರ್ಮಿಕ ದತ್ತಿಗಳ ನಿರ್ವಹಣೆಯನ್ನು ಸುಧಾರಿಸುತ್ತೆ ಎನ್ನಲಾದ ವಕ್ಫ್ (ತಿದ್ದುಪಡಿ) ಮಸೂದೆ-2024 ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ-2024 ಕೂಡ ಮಂಡಿಸುವ ಸಾಧ್ಯತೆಯಿದೆ.

ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ- 2024, ರೈಲ್ವೆ (ತಿದ್ದುಪಡಿ) ಮಸೂದೆ- 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ-2024, ತೈಲಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ-2024, ಬಾಯ್ಲರ್ ಮಸೂದೆ-2024, ವಕ್ಫ್ (ತಿದ್ದುಪಡಿ) ಮಸೂದೆ- 2024, ಕರಾವಳಿ ಸಾಗಣೆ ಮಸೂದೆ-2024, ವ್ಯಾಪಾರಿ ಸಾಗಣೆ ಮಸೂದೆ-2024 ಮತ್ತು ಹಣಕಾಸು ಮಸೂದೆ- 2025 ಸೇರಿವೆ.

ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿಯಲಿದೆ. ವಿರಾಮದ ನಂತರ, ಎರಡೂ ಸದನಗಳು ಮಾರ್ಚ್ 10 ರಂದು ಮತ್ತೆ ಪ್ರಾರಂಭಗೊಳ್ಳಲಿವೆ. ಏಪ್ರಿಲ್ 4 ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...