Homeಮುಖಪುಟ'ದೆಹಲಿ ಗಲಭೆ' ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ...

‘ದೆಹಲಿ ಗಲಭೆ’ ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೋರಿದ ಕೋರ್ಟ್

- Advertisement -
- Advertisement -

ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಯ ಕುರಿತಾದ ಚಲನಚಿತ್ರ ‘2020 ಡೆಲ್ಲಿ’ ಬಿಡುಗಡೆಯನ್ನು ಮುಂದೂಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಶರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗುರುವಾರ (ಜ.30) ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ(ಸಿಬಿಎಫ್‌ಸಿ) ಪ್ರತಿಕ್ರಿಯೆ ಕೋರಿದೆ ಎಂದು ಪಿಟಿಐ ವರದಿ ಮಾಡಿದೆ.

ನ್ಯಾಯಾಲಯ ದೆಹಲಿ ಪೊಲೀಸರು ಮತ್ತು ಚಿತ್ರದ ನಿರ್ಮಾಪಕರಿಗೂ ನೋಟಿಸ್ ಜಾರಿ ಮಾಡಿದೆ ಎಂದು ವರದಿ ಹೇಳಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿ, ಪ್ರಸ್ತುತ ಶರ್ಜೀಲ್ ಇಮಾಮ್ ಅವರನ್ನು ಜೈಲಿನಲ್ಲಿಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ನಡೆದಿದ್ದ ಪ್ರತಿಭಟನೆ ಮತ್ತು ನಂತರ ನಡೆದ ಗಲಭೆಗಳನ್ನು ಆಧರಿಸಿದ ‘2020 ಡೆಲ್ಲಿ’ ಚಿತ್ರ ನಿರ್ಮಿಸಲಾಗಿದೆ. ಶನಿವಾರ (ಜ.1) ಅದು ಬಿಡುಗಡೆಯಾಗಲಿದೆ.

ಸಿನಿಮಾದ ಚಿತ್ರಕಥೆಗಾರ ಮತ್ತು ನಿರ್ದೇಶಕ ದೇವೇಂದ್ರ ಮಾಲ್ವಿಯಾ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಚಿತ್ರವು ತನ್ನ ಪ್ರಕರಣದಲ್ಲಿ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಮಾತ್ರವಲ್ಲದೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಲವಾರು ವಿಚಾರಣೆ ಮತ್ತು ಜಾಮೀನು ಅರ್ಜಿಗಳ ಮೇಲೂ ಪರಿಣಾಮ ಬೀರಬಹುದು ಎಂದು ಶರ್ಜೀಲ್ ಇಮಾಮ್ ಕಳವಳ ವ್ಯಕ್ತಪಡಿಸಿದ್ದಾರೆ.

“ಸುಳ್ಳು, ಕಲ್ಪಿತ ಮತ್ತು ಕಾಲ್ಪನಿಕ ಕಥೆ ಹೊಂದಿರುವ ಚಿತ್ರವನ್ನು ನಿಜವಾದ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ತನ್ನನ್ನು ಭಯೋತ್ಪಾದಕ ಅಥವಾ ದೇಶದ್ರೋಹಿ ಎಂದು ತಪ್ಪಾಗಿ ಬ್ರಾಂಡ್ ಮಾಡುವ ಈ ಚಿತ್ರವು ಖಂಡಿತವಾಗಿಯೂ ಇನ್ನೂ ಪ್ರಾರಂಭಗೊಳ್ಳದ ವಿಚಾರಣೆಯ ಮೇಲೆ ಗಂಭೀರ ಪೂರ್ವಾಗ್ರಹ ಪೀಡಿತ ಪರಿಣಾಮ ಬೀರುತ್ತದೆ” ಎಂದು ಶರ್ಜೀಲ್ ಇಮಾಮ್ ವಾದಿಸಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ನ್ಯಾಯಾಲಯದ ತೀರ್ಪು ಬರುವ ಮುನ್ನವೇ ವ್ಯಕ್ತಿಗಳಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟುವುದು ನ್ಯಾಯಾಂಗದ ಪಕ್ಷಪಾತಕ್ಕೆ ಕಾರಣವಾಗಬಹುದು. ಅಲ್ಲದೆ, ಸಮಾನತೆ, ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸುವ ಸಂವಿಧಾನ 14 ಮತ್ತು 21 ನೇ ವಿಧಿಯ ವಿರುದ್ಧವೂ ಆಗುತ್ತದೆ ಎಂದು ಶರ್ಜೀಲ್ ಇಮಾಮ್ ಅರ್ಜಿಯಲ್ಲಿ ಹೇಳಿದ್ದಾರೆ.

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಈ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಮೃತರಲ್ಲಿ ಹೆಚ್ಚಿನವರು ಮುಸ್ಲಿಮರು.

ಈ ಹಿಂಸಾಚಾರವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದದ ದೊಡ್ಡ ಪಿತೂರಿಯ ಭಾಗವಾಗಿದ್ದು, ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರೇ ಗಲಭೆಯ ಹಿಂದಿನ ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...