Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...